Homeಮುಖಪುಟಮೇಘಾಲಯ ಚುನಾವಣೆ: ತುರಾ ಸ್ಟೇಡಿಯಂನಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನಿರಾಕರಣೆ

ಮೇಘಾಲಯ ಚುನಾವಣೆ: ತುರಾ ಸ್ಟೇಡಿಯಂನಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನಿರಾಕರಣೆ

- Advertisement -
- Advertisement -

ಇದೇ ಫೆಬ್ರವರಿ 27ರಂದು ನಡೆಯಲಿರುವ ಮೇಘಾಲಯ ಚುನಾವಣಾ ಪ್ರಚಾರಕ್ಕೆ ಹೆಲಿಕ್ಯಾಪ್ಟರ್‌ನಲ್ಲಿ ತೆರಳಲು ಸಿದ್ದರಾಗಿದ್ದ ಪ್ರಧಾನಿ ಮೋದಿಯವರ ತುರಾ ಸ್ಟೇಡಿಯಂನ ಕಾರ್ಯಕ್ರಮಕ್ಕೆ ಅಲ್ಲಿನ ಸರ್ಕಾರ ಅನುಮತಿ ನಿರಾಕರಿಸಿದೆ.

ಮೇಘಾಲಯದ ದಕ್ಷಿಣ ತುರಾ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಪ್ರತಿನಿಧಿಸುವ ಕ್ಷೇತ್ರವಾಗಿದೆ. ಆ ಕ್ಷೇತ್ರಕ್ಕೆ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ತೆಗೆದುಕೊಂಡ ಈ ತೀರ್ಮಾನಕ್ಕೆ ಬಿಜೆಪಿ ಕಿಡಿಕಾರಿದೆ.

2018 ರಿಂದ ಎನ್‌ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಸರ್ಕಾರದಲ್ಲಿ ಬಿಜೆಪಿ ಸಹ ಕೈಜೋಡಿಸಿತ್ತು. ಆದರೆ ಸದ್ಯ ಎರಡು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದವು. ಅಂದಿನಿಂದ, ಎನ್‌ಪಿಪಿ ಮತ್ತು ಬಿಜೆಪಿ ನಡುವೆ ತಿಕ್ಕಾಟ ಆರಂಭವಾಗಿದೆ.

127 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಫುಟ್ಭಾಲ್ ಮತ್ತು ಒಳಾಂಗಣ ಕ್ರೀಡಾಂಗಣಕ್ಕೆ ಮಾಜಿ ಮುಖ್ಯಮಂತ್ರಿ ಪಿ ಎ ಸಂಗ್ಮಾ ಹೆಸರಿಡಲಾಗಿದೆ. ಅಂತರಾಷ್ಟ್ರೀಯ ಸೌಲಭ್ಯ ಹೊಂದಿರುವ ದೇಶದ ದೊಡ್ಡ ಫುಟ್ಬಾಲ್ ಕ್ರೀಡಾಂಗಣವನ್ನು 2022ರ ಡಿಸೆಂಬರ್‌ನಲ್ಲಿ ಉದ್ಘಾಟಿಸಲಾಗಿದ್ದು, ಒಳಾಂಗಣ ಕ್ರೀಡಾಂಗಣದ ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

“ಈ ಕ್ರೀಡಾಂಗಣದ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಣ ನೀಡಿದೆ. ದೇಶದ ಪ್ರಧಾನಿಗೆ ಅನುಮತಿ ನಿರಾಕರಿಸುವುದು ದೊಡ್ಡ ಅವಮಾನ” ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ಸಿಎಂ ಕಾನ್ರಾಡ್ ಸಂಗ್ಮಾರವರು ಇದರಲ್ಲಿ ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಚುನಾವಣಾ ರ್ಯಾಲಿಗಳಿಗೆ ಅನುಮತಿ ನೀಡುವುದು ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತಗಳು. ಅದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ನಮ್ಮ ಬಹಳಷ್ಟು ರ್ಯಾಲಿಗಳಿಗೆ ಅನುಮತಿ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ನಮ್ಮ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

ಬಿಜೆಪಿ ಇದನ್ನು ದೊಡ್ಡ ಇಶ್ಯೂ ಮಾಡುತ್ತಿದ್ದಾರೆ. ನಾವು ಮೊದಲೇ ಹೇಳಿದಂತೆ ಸ್ಟೇಡಿಯಂ ಎರಡು ಭಾಗಗಳಾಗಿದ್ದು, ಒಂದು ಫುಟ್ಬಾಲ್ ಸ್ಟೇಡಿಯಂ ಮತ್ತೊಂದು ಒಳಾಂಗಣ ಕ್ರೀಡಾಂಗಣ ಮತ್ತು ಈಜುಕೊಳವಿದೆ. ಅದಿನ್ನೂ ಪೂರ್ಣಗೊಂಡಿಲ್ಲ. ಪ್ರಧಾನಿ ರ್ಯಾಲಿಗೆ ಹೆಚ್ಚು ಜನ ಸೇರಿದರೆ ಕ್ರೀಡಾಂಗಣ ಅಂದ ಮತ್ತು ನೈಸರ್ಗಿಕ ಹುಲ್ಲು ಹಾಳಾಗಬಹುದು. ಅಲ್ಲದೆ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಹ ಇಲ್ಲ. ಈ ಎಲ್ಲಾ ಕಾರಣಗಳಿಂದ ಚುನಾವಣಾ ಆಯೋಗ ಅನುಮತಿ ನಿರಾಕರಿಸಿರಬಹುದು ಎಂದಿದ್ದಾರೆ.

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...