Homeಮುಖಪುಟಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

- Advertisement -
- Advertisement -

ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಗೆ ಮನ್ನಣೆ ನೀಡಿದ್ದ ರಾಜ್ಯಗಳು ಇತ್ತೀಚೆಗೆ, ಸಿಬಿಐ ಬಗೆಗೆ ತಮ್ಮ ನಿಲುವನ್ನು ಬದಲಿಸಿಕೊಂಡಿವೆ. ಹೀಗಾಗಿ, ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಕೆಲವು ರಾಜ್ಯಗಳು ಹಿಂಪಡೆದುಕೊಂಡಿವೆ. ಇದೀಗ, ಆ ರಾಜ್ಯಗಳ ಪಟ್ಟಿಗೆ ಮೇಘಾಲಯವೂ ಸೇರಿಕೊಂಡಿದೆ.

ಸಿಬಿಐಗೆ ಕಾರ್ಯಾಚರಣೆಗೆ ನೀಡಿದ್ದ ಒಪ್ಪಿಗೆಯನ್ನು ರಾಜ್ಯಗಳು ಹಿಂಪಡೆದುಕೊಂಡರೆ, ಅಂತಹ ರಾಜ್ಯಗಳಲ್ಲಿ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ತನಿಖೆ ನಡೆಸಲು ಅನುಮತಿಯೂ ಇರುವುದಿಲ್ಲ.

ಸಿಬಿಐ ತನ್ನ ತನಿಖೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿರುವ ವಿವಿಧ ರಾಜ್ಯಗಳ ಸರ್ಕಾರಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿವೆ.

2015ರಲ್ಲಿ ಮಿಜೋರಾಂ ರಾಜ್ಯವು ಮೊದಲ ಬಾರಿಗೆ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿತು. ಆಗ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ನಂತರ, 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು ಅಧಿಕಾರಕ್ಕೆ ಬಂದಿತು. ಆದರೂ, ಅದು ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಲಿಲ್ಲ.

ಇದನ್ನೂ ಓದಿರಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಬಳಿಕ ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ ಮತ್ತು ಕೇರಳ ರಾಜ್ಯಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡವು. ಇದೀಗ, ಮೇಘಾಲಯವೂ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿದೆ.

ವಿಶೇಷವೆಂದರೆ, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವೇ ಆಗಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮೇಘಾಲಯದಲ್ಲಿ ಅಧಿಕಾರದಲ್ಲಿದೆ. ಆದರೂ, ರಾಜ್ಯವು ಈ ನಿರ್ಧಾರ ಕೈಗೊಂಡಿದೆ.

ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡ ರಾಜ್ಯಗಳ ಪೈಕಿ, ಮಿಜೋರಾಂ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲಿ ಎನ್‌‌ಡಿಎ ಕೂಟದ ವಿರೋಧ ಪಕ್ಷಗಳು ಆಳ್ವಿಯಲ್ಲಿವೆ.

“ಈ ನಿರ್ಧಾರವನ್ನು ಬಹಳ ಹಿಂದೆಯೇ ಮಾಡಲಾಗಿತ್ತು. ನನಗೆ ದಿನಾಂಕ ನೆನಪಿಲ್ಲ. ಆದ್ದರಿಂದ, ಈ ವಿಚಾರದಲ್ಲಿ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಬಹಳಷ್ಟು ರಾಜ್ಯಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಅದೇ ರೀತಿಯಲ್ಲಿ ನಾವು ನಿರ್ಧರಿಸಿದ್ದೇವೆ. ತನಿಖೆಗಾಗಿ ರಾಜ್ಯಕ್ಕೆ ಬರುವವರು, ರಾಜ್ಯದ ಅನುಮತಿ ಪಡೆಯಬೇಕು. ಇದು ಸಾಮಾನ್ಯ ವಿಷಯ” ಎಂದು ಸಿಎಂ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸಹೋದರ ಜೇಮ್ಸ್ ಪಿ.ಕೆ.ಸಂಗ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ದೇಶದ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ಮನೆಗಳಿಗೆ ವಿದ್ಯುತ್ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದ, ಸೌಭಾಗ್ಯ ಯೋಜನೆಯನ್ನು ಮೇಘಾಲಯದಲ್ಲಿ ಅನುಷ್ಠಾನಗೊಳಿಸುವಾಗ ನಡೆದ ಭಾರೀ ಭ್ರಷ್ಟಾಚಾರದಲ್ಲಿ ಜೇಮ್ಸ್ ಭಾಗಿಯಾಗಿದ್ದಾರೆ; ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಸಾಗಣೆಗೆ ಸಿಂಡಿಕೇಟ್ಗಳಿಗೆ ಅವಕಾಶ ನೀಡುವ ಮೂಲಕ ಲೂಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪದ ಹಿನ್ನೆಲೆಯಲ್ಲಿ ಜೇಮ್ಸ್ ಸಂಗ್ಮಾ ಅವರನ್ನು ಗೃಹ ಖಾತೆಯಿಂದ ಕೈಬಿಡಲಾಗಿತ್ತು.

ನವೆಂಬರ್ 2018 ರಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡಿತು. ನಂತರ ಅದೇ ವರ್ಷ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವೂ ಕೂಡ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿತು.

“ಬಿಜೆಪಿ ತನ್ನ ಸ್ವಂತ ರಾಜಕೀಯ ಹಿತಾಸಕ್ತಿ ಮತ್ತು ಸೇಡು ತೀರಿಸಿಕೊಳ್ಳಲು ಸಿಬಿಐ ಹಾಗೂ ಇತರ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ” ಎಂದು ಚಂದ್ರಬಾಬು ನಾಯ್ಡು ಮತ್ತು ಬ್ಯಾನರ್ಜಿ ಹೇಳಿದ್ದರು.

ಆದರೆ, 2019ರಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಿದರು.

ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಾಂಗ್ರೆಸ್ ಸರ್ಕಾರವು ಜನವರಿ 2019ರಲ್ಲಿ ಸಿಬಿಐಗಿದ್ದ ಸಮ್ಮತಿಯನ್ನು ಹಿಂತೆಗೆದುಕೊಂಡಿತು. 2020ರಲ್ಲಿ ಪಂಜಾಬ್, ಮಹಾರಾಷ್ಟ್ರ, ರಾಜಸ್ಥಾನ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ತಮ್ಮ ಸಮ್ಮತಿಯನ್ನು ಪಡೆದುಕೊಂಡವು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...