Homeಮುಖಪುಟಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

- Advertisement -
- Advertisement -

ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಗೆ ಮನ್ನಣೆ ನೀಡಿದ್ದ ರಾಜ್ಯಗಳು ಇತ್ತೀಚೆಗೆ, ಸಿಬಿಐ ಬಗೆಗೆ ತಮ್ಮ ನಿಲುವನ್ನು ಬದಲಿಸಿಕೊಂಡಿವೆ. ಹೀಗಾಗಿ, ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಕೆಲವು ರಾಜ್ಯಗಳು ಹಿಂಪಡೆದುಕೊಂಡಿವೆ. ಇದೀಗ, ಆ ರಾಜ್ಯಗಳ ಪಟ್ಟಿಗೆ ಮೇಘಾಲಯವೂ ಸೇರಿಕೊಂಡಿದೆ.

ಸಿಬಿಐಗೆ ಕಾರ್ಯಾಚರಣೆಗೆ ನೀಡಿದ್ದ ಒಪ್ಪಿಗೆಯನ್ನು ರಾಜ್ಯಗಳು ಹಿಂಪಡೆದುಕೊಂಡರೆ, ಅಂತಹ ರಾಜ್ಯಗಳಲ್ಲಿ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ತನಿಖೆ ನಡೆಸಲು ಅನುಮತಿಯೂ ಇರುವುದಿಲ್ಲ.

ಸಿಬಿಐ ತನ್ನ ತನಿಖೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿರುವ ವಿವಿಧ ರಾಜ್ಯಗಳ ಸರ್ಕಾರಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿವೆ.

2015ರಲ್ಲಿ ಮಿಜೋರಾಂ ರಾಜ್ಯವು ಮೊದಲ ಬಾರಿಗೆ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿತು. ಆಗ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ನಂತರ, 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು ಅಧಿಕಾರಕ್ಕೆ ಬಂದಿತು. ಆದರೂ, ಅದು ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಲಿಲ್ಲ.

ಇದನ್ನೂ ಓದಿರಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಬಳಿಕ ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ ಮತ್ತು ಕೇರಳ ರಾಜ್ಯಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡವು. ಇದೀಗ, ಮೇಘಾಲಯವೂ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿದೆ.

ವಿಶೇಷವೆಂದರೆ, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವೇ ಆಗಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮೇಘಾಲಯದಲ್ಲಿ ಅಧಿಕಾರದಲ್ಲಿದೆ. ಆದರೂ, ರಾಜ್ಯವು ಈ ನಿರ್ಧಾರ ಕೈಗೊಂಡಿದೆ.

ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡ ರಾಜ್ಯಗಳ ಪೈಕಿ, ಮಿಜೋರಾಂ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲಿ ಎನ್‌‌ಡಿಎ ಕೂಟದ ವಿರೋಧ ಪಕ್ಷಗಳು ಆಳ್ವಿಯಲ್ಲಿವೆ.

“ಈ ನಿರ್ಧಾರವನ್ನು ಬಹಳ ಹಿಂದೆಯೇ ಮಾಡಲಾಗಿತ್ತು. ನನಗೆ ದಿನಾಂಕ ನೆನಪಿಲ್ಲ. ಆದ್ದರಿಂದ, ಈ ವಿಚಾರದಲ್ಲಿ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಬಹಳಷ್ಟು ರಾಜ್ಯಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಅದೇ ರೀತಿಯಲ್ಲಿ ನಾವು ನಿರ್ಧರಿಸಿದ್ದೇವೆ. ತನಿಖೆಗಾಗಿ ರಾಜ್ಯಕ್ಕೆ ಬರುವವರು, ರಾಜ್ಯದ ಅನುಮತಿ ಪಡೆಯಬೇಕು. ಇದು ಸಾಮಾನ್ಯ ವಿಷಯ” ಎಂದು ಸಿಎಂ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸಹೋದರ ಜೇಮ್ಸ್ ಪಿ.ಕೆ.ಸಂಗ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ದೇಶದ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ಮನೆಗಳಿಗೆ ವಿದ್ಯುತ್ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದ, ಸೌಭಾಗ್ಯ ಯೋಜನೆಯನ್ನು ಮೇಘಾಲಯದಲ್ಲಿ ಅನುಷ್ಠಾನಗೊಳಿಸುವಾಗ ನಡೆದ ಭಾರೀ ಭ್ರಷ್ಟಾಚಾರದಲ್ಲಿ ಜೇಮ್ಸ್ ಭಾಗಿಯಾಗಿದ್ದಾರೆ; ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಸಾಗಣೆಗೆ ಸಿಂಡಿಕೇಟ್ಗಳಿಗೆ ಅವಕಾಶ ನೀಡುವ ಮೂಲಕ ಲೂಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪದ ಹಿನ್ನೆಲೆಯಲ್ಲಿ ಜೇಮ್ಸ್ ಸಂಗ್ಮಾ ಅವರನ್ನು ಗೃಹ ಖಾತೆಯಿಂದ ಕೈಬಿಡಲಾಗಿತ್ತು.

ನವೆಂಬರ್ 2018 ರಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡಿತು. ನಂತರ ಅದೇ ವರ್ಷ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವೂ ಕೂಡ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿತು.

“ಬಿಜೆಪಿ ತನ್ನ ಸ್ವಂತ ರಾಜಕೀಯ ಹಿತಾಸಕ್ತಿ ಮತ್ತು ಸೇಡು ತೀರಿಸಿಕೊಳ್ಳಲು ಸಿಬಿಐ ಹಾಗೂ ಇತರ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ” ಎಂದು ಚಂದ್ರಬಾಬು ನಾಯ್ಡು ಮತ್ತು ಬ್ಯಾನರ್ಜಿ ಹೇಳಿದ್ದರು.

ಆದರೆ, 2019ರಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಿದರು.

ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಾಂಗ್ರೆಸ್ ಸರ್ಕಾರವು ಜನವರಿ 2019ರಲ್ಲಿ ಸಿಬಿಐಗಿದ್ದ ಸಮ್ಮತಿಯನ್ನು ಹಿಂತೆಗೆದುಕೊಂಡಿತು. 2020ರಲ್ಲಿ ಪಂಜಾಬ್, ಮಹಾರಾಷ್ಟ್ರ, ರಾಜಸ್ಥಾನ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ತಮ್ಮ ಸಮ್ಮತಿಯನ್ನು ಪಡೆದುಕೊಂಡವು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...