Homeಮುಖಪುಟಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

- Advertisement -
- Advertisement -

ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಗೆ ಮನ್ನಣೆ ನೀಡಿದ್ದ ರಾಜ್ಯಗಳು ಇತ್ತೀಚೆಗೆ, ಸಿಬಿಐ ಬಗೆಗೆ ತಮ್ಮ ನಿಲುವನ್ನು ಬದಲಿಸಿಕೊಂಡಿವೆ. ಹೀಗಾಗಿ, ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಕೆಲವು ರಾಜ್ಯಗಳು ಹಿಂಪಡೆದುಕೊಂಡಿವೆ. ಇದೀಗ, ಆ ರಾಜ್ಯಗಳ ಪಟ್ಟಿಗೆ ಮೇಘಾಲಯವೂ ಸೇರಿಕೊಂಡಿದೆ.

ಸಿಬಿಐಗೆ ಕಾರ್ಯಾಚರಣೆಗೆ ನೀಡಿದ್ದ ಒಪ್ಪಿಗೆಯನ್ನು ರಾಜ್ಯಗಳು ಹಿಂಪಡೆದುಕೊಂಡರೆ, ಅಂತಹ ರಾಜ್ಯಗಳಲ್ಲಿ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ತನಿಖೆ ನಡೆಸಲು ಅನುಮತಿಯೂ ಇರುವುದಿಲ್ಲ.

ಸಿಬಿಐ ತನ್ನ ತನಿಖೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿರುವ ವಿವಿಧ ರಾಜ್ಯಗಳ ಸರ್ಕಾರಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿವೆ.

2015ರಲ್ಲಿ ಮಿಜೋರಾಂ ರಾಜ್ಯವು ಮೊದಲ ಬಾರಿಗೆ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿತು. ಆಗ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ನಂತರ, 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು ಅಧಿಕಾರಕ್ಕೆ ಬಂದಿತು. ಆದರೂ, ಅದು ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಲಿಲ್ಲ.

ಇದನ್ನೂ ಓದಿರಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಬಳಿಕ ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ ಮತ್ತು ಕೇರಳ ರಾಜ್ಯಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡವು. ಇದೀಗ, ಮೇಘಾಲಯವೂ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿದೆ.

ವಿಶೇಷವೆಂದರೆ, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವೇ ಆಗಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮೇಘಾಲಯದಲ್ಲಿ ಅಧಿಕಾರದಲ್ಲಿದೆ. ಆದರೂ, ರಾಜ್ಯವು ಈ ನಿರ್ಧಾರ ಕೈಗೊಂಡಿದೆ.

ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡ ರಾಜ್ಯಗಳ ಪೈಕಿ, ಮಿಜೋರಾಂ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲಿ ಎನ್‌‌ಡಿಎ ಕೂಟದ ವಿರೋಧ ಪಕ್ಷಗಳು ಆಳ್ವಿಯಲ್ಲಿವೆ.

“ಈ ನಿರ್ಧಾರವನ್ನು ಬಹಳ ಹಿಂದೆಯೇ ಮಾಡಲಾಗಿತ್ತು. ನನಗೆ ದಿನಾಂಕ ನೆನಪಿಲ್ಲ. ಆದ್ದರಿಂದ, ಈ ವಿಚಾರದಲ್ಲಿ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಬಹಳಷ್ಟು ರಾಜ್ಯಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಅದೇ ರೀತಿಯಲ್ಲಿ ನಾವು ನಿರ್ಧರಿಸಿದ್ದೇವೆ. ತನಿಖೆಗಾಗಿ ರಾಜ್ಯಕ್ಕೆ ಬರುವವರು, ರಾಜ್ಯದ ಅನುಮತಿ ಪಡೆಯಬೇಕು. ಇದು ಸಾಮಾನ್ಯ ವಿಷಯ” ಎಂದು ಸಿಎಂ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸಹೋದರ ಜೇಮ್ಸ್ ಪಿ.ಕೆ.ಸಂಗ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ದೇಶದ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ಮನೆಗಳಿಗೆ ವಿದ್ಯುತ್ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದ, ಸೌಭಾಗ್ಯ ಯೋಜನೆಯನ್ನು ಮೇಘಾಲಯದಲ್ಲಿ ಅನುಷ್ಠಾನಗೊಳಿಸುವಾಗ ನಡೆದ ಭಾರೀ ಭ್ರಷ್ಟಾಚಾರದಲ್ಲಿ ಜೇಮ್ಸ್ ಭಾಗಿಯಾಗಿದ್ದಾರೆ; ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಸಾಗಣೆಗೆ ಸಿಂಡಿಕೇಟ್ಗಳಿಗೆ ಅವಕಾಶ ನೀಡುವ ಮೂಲಕ ಲೂಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪದ ಹಿನ್ನೆಲೆಯಲ್ಲಿ ಜೇಮ್ಸ್ ಸಂಗ್ಮಾ ಅವರನ್ನು ಗೃಹ ಖಾತೆಯಿಂದ ಕೈಬಿಡಲಾಗಿತ್ತು.

ನವೆಂಬರ್ 2018 ರಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡಿತು. ನಂತರ ಅದೇ ವರ್ಷ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವೂ ಕೂಡ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿತು.

“ಬಿಜೆಪಿ ತನ್ನ ಸ್ವಂತ ರಾಜಕೀಯ ಹಿತಾಸಕ್ತಿ ಮತ್ತು ಸೇಡು ತೀರಿಸಿಕೊಳ್ಳಲು ಸಿಬಿಐ ಹಾಗೂ ಇತರ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ” ಎಂದು ಚಂದ್ರಬಾಬು ನಾಯ್ಡು ಮತ್ತು ಬ್ಯಾನರ್ಜಿ ಹೇಳಿದ್ದರು.

ಆದರೆ, 2019ರಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಿದರು.

ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಾಂಗ್ರೆಸ್ ಸರ್ಕಾರವು ಜನವರಿ 2019ರಲ್ಲಿ ಸಿಬಿಐಗಿದ್ದ ಸಮ್ಮತಿಯನ್ನು ಹಿಂತೆಗೆದುಕೊಂಡಿತು. 2020ರಲ್ಲಿ ಪಂಜಾಬ್, ಮಹಾರಾಷ್ಟ್ರ, ರಾಜಸ್ಥಾನ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ತಮ್ಮ ಸಮ್ಮತಿಯನ್ನು ಪಡೆದುಕೊಂಡವು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...