Homeಮುಖಪುಟಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

ಕಾಂಗ್ರೆಸ್‌ಗೆ ಆಘಾತ: ಮೇಘಾಲಯದ 12 ಶಾಸಕರು ಟಿಎಂಸಿಗೆ ಸೇರ್ಪಡೆ

- Advertisement -
- Advertisement -

ಬುಧವಾರ ಮೇಘಾಲಯ ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ರಾಜ್ಯದ 17 ಕಾಂಗ್ರೆಸ್ ಶಾಸಕರ ಪೈಕಿ 11 ಶಾಸಕರೊಂದಿಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಮೇಘಾಲಯದ ಶಾಸಕರು ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ವಿಧಾನಸಭೆ ಸ್ಪೀಕರ್ ಮೆಟ್ಬಾ ಲಿಂಗ್ಡೋಹ್ ಅವರಿಗೆ ಪತ್ರವನ್ನು ಸಲ್ಲಿಸಿದ್ದು, ತಮ್ಮ ಸ್ಥಾನಮಾನದ ಬದಲಾವಣೆಯ ಬಗ್ಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸ ಶಾಸಕರೊಂದಿಗೆ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್ ಮತ್ತು ಅಶೋಕ್ ತನ್ವಾರ್ ಮತ್ತು ಹಿಂದೆ ಜನತಾ ದಳ (ಯುನೈಟೆಡ್) ಆಗಿದ್ದ ಪವನ್ ವರ್ಮಾ ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾಗಿದ್ದರು. ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್‌ನ ಈ ಯುದ್ಧದಲ್ಲಿ ಸೇರಲು ಬಯಸುವ ಇತರ ಪಕ್ಷಗಳ ರಾಜಕೀಯ ನಾಯಕರಿಗೆ ತಮ್ಮ ಪಕ್ಷಕ್ಕೆ ಸ್ವಾಗತವಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಮೇಘಾಲಯ ತೃಣಮೂಲ ಕಾಂಗ್ರೆಸ್ ಅನ್ನು ಔಪಚಾರಿಕವಾಗಿ 2012 ರಲ್ಲಿ ರಾಜ್ಯದ 60 ಸ್ಥಾನಗಳಲ್ಲಿ 35 ಸ್ಥಾನಗಳಿಗೆ ಸ್ಪರ್ಧಿಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ತಂಡದ ಸದಸ್ಯರು 2023 ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದು, ಶಿಲ್ಲಾಂಗ್‌ನಲ್ಲಿದ್ದಾರೆ ಎಂದು ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರೊಂದಿಗೆ ಸೌಹಾರ್ದ ಸಂಬಂಧವನ್ನು ಉಳಿಸಿಕೊಂಡಿರುವ ಮಮತಾ ಬ್ಯಾನರ್ಜಿ ಈ ಬಾರಿ ದೆಹಲಿಯಲ್ಲಿದ್ದರು ಅವರನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಕೇಳಿದಾಗ ಸಿಡಿಮಿಡಿಗೊಂಡಿರುವ ಮಮತಾ, ಸೋನಿಯಾ ಗಾಂಧಿಯವರೊಂದಿಗೆ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿರಲಿಲ್ಲ, ಏಕೆಂದರೆ ಅವರು ಪಂಜಾಬ್ ಚುನಾವಣೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ “ನಾವು ಪ್ರತಿ ಬಾರಿ ಸೋನಿಯಾರನ್ನು ಏಕೆ ಭೇಟಿಯಾಗಬೇಕು? ಇದು ಸಾಂವಿಧಾನಿಕವಾಗಿ ಕಡ್ಡಾಯವಾಗಿಲ್ಲ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಇಂಧನ ಬೆಲೆ ಹೆಚ್ಚಳದಿಂದ ಕೇಂದ್ರ ಸಂಗ್ರಹಿಸಿರುವ 4 ಲಕ್ಷ ಕೋಟಿಯನ್ನು ರಾಜ್ಯಗಳಿಗೆ ಹಂಚಬೇಕು: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...