Homeಮುಖಪುಟರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

- Advertisement -
- Advertisement -

ಮೇಘಾಲಯ ಸರ್ಕಾರದಲ್ಲಿ ಸಚಿವರಾಗಿರುವ ಬಿಜೆಪಿಯ ಸಂಬೋರ್ ಶುಲ್ಲೈ ಅವರು, ರಾಜ್ಯದ ಜನರಿಗೆ ಕೋಳಿ, ಕುರಿ ಮತ್ತು ಮೀನುಗಳಿಗಿಂತ ಹೆಚ್ಚು ಬೀಫ್‌‌ ತಿನ್ನುವಂತೆ ಪ್ರೋತ್ಸಾಹಿಸಿದ್ದಾರೆ. ಕಳೆದ ವಾರವಷ್ಟೇ ಮೇಘಾಲಯದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ಹಿರಿಯ ನಾಯಕರಾಗಿರುವ ಸಂಬೋರ್‌‌ ಶುಲ್ಲೈ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ತಿನ್ನಲು ಸ್ವತಂತ್ರರು ಎಂದು ಹೇಳಿದ್ದಾರೆ.

“ನಾನು ಜನರನ್ನು ಚಿಕನ್, ಮಟನ್ ಅಥವಾ ಮೀನಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಲು ಪ್ರೋತ್ಸಾಹಿಸುತ್ತೇನೆ. ಜನರನ್ನು ಹೆಚ್ಚು ಗೋಮಾಂಸ ತಿನ್ನಲು ಪ್ರೋತ್ಸಾಹಿಸುವ ಮೂಲಕ, ಬಿಜೆಪಿ ಗೋಹತ್ಯೆಯ ಮೇಲೆ ನಿಷೇಧ ಹೇರುತ್ತದೆ ಎಂಬ ಗ್ರಹಿಕೆಯನ್ನು ಹೋಗಲಾಡಿಸಬೇಕು” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ನಿರ್ಗಮನ; ಜಾತಿ ಓಲೈಕೆ ಮತ್ತು ದೆಹಲಿ ದರ್ಬಾರ್‌ನ ಮುಂದಿನ ನಡೆಗಳೇನಾಗಿರಬಹುದು?

ಪಶು ಸಂಗೋಪನೆ ಮತ್ತು ಪಶುವೈದ್ಯ ಸಚಿವರಾಗಿರುವ ಸಂಬೋರ್‌, ನೆರೆಯ ರಾಜ್ಯದ ಹೊಸ ‘ಗೋಹತ್ಯೆ ಶಾಸನ’ದಿಂದ ಮೇಘಾಲಯಕ್ಕೆ ಜಾನುವಾರು ಸಾಗಾಣಿಕೆಯ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಂಬೋರ್‌‌, ಮೇಘಾಲಯ ಮತ್ತು ಅಸ್ಸಾಂ ನಡುವಿನ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿ, ಜನರನ್ನು ರಕ್ಷಿಸಲು ರಾಜ್ಯವು ತನ್ನ ಪೊಲೀಸ್ ಪಡೆಯನ್ನು ಬಳಸಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

“ಅಸ್ಸಾಂನ ಜನರು ಗಡಿ ಪ್ರದೇಶದಲ್ಲಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದರೆ, ಮಾತನಾಡಲು ಮತ್ತು ಚಹಾ ಕುಡಿಯುವ ಸಮಯ ಇದಲ್ಲ. ನಾವು ಪ್ರತಿಕ್ರಿಯಿಸಬೇಕು, ಸ್ಥಳದಲ್ಲೇ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದ್ದು, ಆದರೆ, ತಾನು ಹಿಂಸೆಯ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

“ನಾವು ನಮ್ಮ ಜನರನ್ನು ರಕ್ಷಿಸುವ ಮನೋಭಾವವನ್ನು ಹೊಂದಿರಬೇಕು, ನಾವು ನಮ್ಮ ಬಲವನ್ನು ಬಳಸಿಕೊಳ್ಳಬೇಕು, ಅಸ್ಸಾಂ ಪೊಲೀಸರೊಂದಿಗೆ ಮಾತನಾಡಲು ಪೊಲೀಸರು ಮುಂಚೂಣಿಗೆ ಹೋಗಬೇಕು” ಎಂದು ಅವರು ಹೇಳಿದ್ದಾರೆ.

ಮಿಜೋರಾಂ ಪೋಲಿಸರು ತನ್ನ ಭೂಮಿ ಮತ್ತು ಜನರನ್ನು ರಕ್ಷಿಸಲು ನಿಂತಿದ್ದಾರೆ ಎಂದು ಶ್ಲಾಘಿಸಿದ ಸಂಬೋರ್‌, ಗಡಿ ನಿವಾಸಿಗಳನ್ನು ರಕ್ಷಿಸುವ ವಿಚಾರದಲ್ಲಿ ಮೇಘಾಲಯ ಪೊಲೀಸರು ಯಾವಾಗಲೂ ಹಿಂದಡಿಯಿಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಜನರನ್ನು ರಕ್ಷಿಸಲು ಪೊಲೀಸರು ಮುಂಚೂಣಿಯಲ್ಲಿರುವಂತೆ ಉನ್ನತ ಅಧಿಕಾರಿಗಳು ಆದೇಶ ನೀಡಬೇಕು. ನಿಮ್ಮ ಮನೆಗೆ ಶತ್ರುಗಳು ಬಂದರೆ, ನಿಮ್ಮ ಮತ್ತು ನಿಮ್ಮ ಹೆಂಡತಿ ಮತ್ತು ಮಕ್ಕಳ ಮೇಲೆ ದಾಳಿ ಮಾಡಿದರೆ, ನೀವು ಕೂಡ ಆತ್ಮರಕ್ಷಣೆಗಾಗಿ ದಾಳಿ ಮಾಡಬೇಕಾಗುತ್ತದೆ. ಅದೇ ಕೆಲಸವನ್ನು ನಮ್ಮ ಗಡಿಗಳಲ್ಲಿ ಮಾಡಬೇಕು. ನಿಮ್ಮ ಮನೆಯನ್ನು ಕದಿಯಲು ಅಥವಾ ದೋಚಲು ಶತ್ರುಗಳು ಬಂದರೆ, ನೀವು ನಿಮ್ಮನ್ನು ರಕ್ಷಿಸಿಕೊಳ್ಳಬೇಕು, ಅದು ಕಾನೂನುಬದ್ಧವಾಗಲಿ ಅಥವಾ ಕಾನೂನುಬಾಹಿರವಾಗಲಿ, ನೀವು ರಕ್ಷಿಸಿಕೊಳ್ಳಲೇಬೇಕು” ಎಂದು ಸಂಬೋರ್‌‌ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...