Homeಮುಖಪುಟರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

- Advertisement -
- Advertisement -

ಮೇಘಾಲಯ ಸರ್ಕಾರದಲ್ಲಿ ಸಚಿವರಾಗಿರುವ ಬಿಜೆಪಿಯ ಸಂಬೋರ್ ಶುಲ್ಲೈ ಅವರು, ರಾಜ್ಯದ ಜನರಿಗೆ ಕೋಳಿ, ಕುರಿ ಮತ್ತು ಮೀನುಗಳಿಗಿಂತ ಹೆಚ್ಚು ಬೀಫ್‌‌ ತಿನ್ನುವಂತೆ ಪ್ರೋತ್ಸಾಹಿಸಿದ್ದಾರೆ. ಕಳೆದ ವಾರವಷ್ಟೇ ಮೇಘಾಲಯದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ಹಿರಿಯ ನಾಯಕರಾಗಿರುವ ಸಂಬೋರ್‌‌ ಶುಲ್ಲೈ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ತಿನ್ನಲು ಸ್ವತಂತ್ರರು ಎಂದು ಹೇಳಿದ್ದಾರೆ.

“ನಾನು ಜನರನ್ನು ಚಿಕನ್, ಮಟನ್ ಅಥವಾ ಮೀನಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಲು ಪ್ರೋತ್ಸಾಹಿಸುತ್ತೇನೆ. ಜನರನ್ನು ಹೆಚ್ಚು ಗೋಮಾಂಸ ತಿನ್ನಲು ಪ್ರೋತ್ಸಾಹಿಸುವ ಮೂಲಕ, ಬಿಜೆಪಿ ಗೋಹತ್ಯೆಯ ಮೇಲೆ ನಿಷೇಧ ಹೇರುತ್ತದೆ ಎಂಬ ಗ್ರಹಿಕೆಯನ್ನು ಹೋಗಲಾಡಿಸಬೇಕು” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ನಿರ್ಗಮನ; ಜಾತಿ ಓಲೈಕೆ ಮತ್ತು ದೆಹಲಿ ದರ್ಬಾರ್‌ನ ಮುಂದಿನ ನಡೆಗಳೇನಾಗಿರಬಹುದು?

ಪಶು ಸಂಗೋಪನೆ ಮತ್ತು ಪಶುವೈದ್ಯ ಸಚಿವರಾಗಿರುವ ಸಂಬೋರ್‌, ನೆರೆಯ ರಾಜ್ಯದ ಹೊಸ ‘ಗೋಹತ್ಯೆ ಶಾಸನ’ದಿಂದ ಮೇಘಾಲಯಕ್ಕೆ ಜಾನುವಾರು ಸಾಗಾಣಿಕೆಯ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಂಬೋರ್‌‌, ಮೇಘಾಲಯ ಮತ್ತು ಅಸ್ಸಾಂ ನಡುವಿನ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿ, ಜನರನ್ನು ರಕ್ಷಿಸಲು ರಾಜ್ಯವು ತನ್ನ ಪೊಲೀಸ್ ಪಡೆಯನ್ನು ಬಳಸಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

“ಅಸ್ಸಾಂನ ಜನರು ಗಡಿ ಪ್ರದೇಶದಲ್ಲಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದರೆ, ಮಾತನಾಡಲು ಮತ್ತು ಚಹಾ ಕುಡಿಯುವ ಸಮಯ ಇದಲ್ಲ. ನಾವು ಪ್ರತಿಕ್ರಿಯಿಸಬೇಕು, ಸ್ಥಳದಲ್ಲೇ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದ್ದು, ಆದರೆ, ತಾನು ಹಿಂಸೆಯ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

“ನಾವು ನಮ್ಮ ಜನರನ್ನು ರಕ್ಷಿಸುವ ಮನೋಭಾವವನ್ನು ಹೊಂದಿರಬೇಕು, ನಾವು ನಮ್ಮ ಬಲವನ್ನು ಬಳಸಿಕೊಳ್ಳಬೇಕು, ಅಸ್ಸಾಂ ಪೊಲೀಸರೊಂದಿಗೆ ಮಾತನಾಡಲು ಪೊಲೀಸರು ಮುಂಚೂಣಿಗೆ ಹೋಗಬೇಕು” ಎಂದು ಅವರು ಹೇಳಿದ್ದಾರೆ.

ಮಿಜೋರಾಂ ಪೋಲಿಸರು ತನ್ನ ಭೂಮಿ ಮತ್ತು ಜನರನ್ನು ರಕ್ಷಿಸಲು ನಿಂತಿದ್ದಾರೆ ಎಂದು ಶ್ಲಾಘಿಸಿದ ಸಂಬೋರ್‌, ಗಡಿ ನಿವಾಸಿಗಳನ್ನು ರಕ್ಷಿಸುವ ವಿಚಾರದಲ್ಲಿ ಮೇಘಾಲಯ ಪೊಲೀಸರು ಯಾವಾಗಲೂ ಹಿಂದಡಿಯಿಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಜನರನ್ನು ರಕ್ಷಿಸಲು ಪೊಲೀಸರು ಮುಂಚೂಣಿಯಲ್ಲಿರುವಂತೆ ಉನ್ನತ ಅಧಿಕಾರಿಗಳು ಆದೇಶ ನೀಡಬೇಕು. ನಿಮ್ಮ ಮನೆಗೆ ಶತ್ರುಗಳು ಬಂದರೆ, ನಿಮ್ಮ ಮತ್ತು ನಿಮ್ಮ ಹೆಂಡತಿ ಮತ್ತು ಮಕ್ಕಳ ಮೇಲೆ ದಾಳಿ ಮಾಡಿದರೆ, ನೀವು ಕೂಡ ಆತ್ಮರಕ್ಷಣೆಗಾಗಿ ದಾಳಿ ಮಾಡಬೇಕಾಗುತ್ತದೆ. ಅದೇ ಕೆಲಸವನ್ನು ನಮ್ಮ ಗಡಿಗಳಲ್ಲಿ ಮಾಡಬೇಕು. ನಿಮ್ಮ ಮನೆಯನ್ನು ಕದಿಯಲು ಅಥವಾ ದೋಚಲು ಶತ್ರುಗಳು ಬಂದರೆ, ನೀವು ನಿಮ್ಮನ್ನು ರಕ್ಷಿಸಿಕೊಳ್ಳಬೇಕು, ಅದು ಕಾನೂನುಬದ್ಧವಾಗಲಿ ಅಥವಾ ಕಾನೂನುಬಾಹಿರವಾಗಲಿ, ನೀವು ರಕ್ಷಿಸಿಕೊಳ್ಳಲೇಬೇಕು” ಎಂದು ಸಂಬೋರ್‌‌ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....