Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ ಮೆಹಬೂಬಾ ಮುಫ್ತಿ

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ ಮೆಹಬೂಬಾ ಮುಫ್ತಿ

- Advertisement -
- Advertisement -

ಪ್ಯಾಲೆಸ್ಟೈನ್ ಮತ್ತು ಲೆಬನಾನ್ ಅನ್ನು ಯಹೂದಿ ನಾಯಕ ‘ಗ್ಯಾಸ್ ಚೇಂಬರ್’ಗಳನ್ನಾಗಿ ಮಾಡಿರುವುದರಿಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ಅಡಾಲ್ಫ್ ಹಿಟ್ಲರ್ ನಂತರದ ಅತಿದೊಡ್ಡ ಭಯೋತ್ಪಾದಕ” ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಸೋಮವಾರ ಹೇಳಿದ್ದಾರೆ.

ಮೆಹಬೂಬಾ ಈ ಹಿಂದೆ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆಯನ್ನು ಖಂಡಿಸಿದ್ದರು. ಲೆಬನಾನ್ ಮತ್ತು ಪ್ಯಾಲೆಸ್ಟೈನ್ ಜನರಿಗೆ ಬೆಂಬಲ ನೀಡಲು ತನ್ನ ಚುನಾವಣಾ ಪ್ರಚಾರವನ್ನು ಒಂದು ದಿನದ ಮಟ್ಟಿಗೆ ರದ್ದುಗೊಳಿಸಿದ್ದರು.

“ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ನೆತನ್ಯಾಹು ವಿರುದ್ಧ ತೀರ್ಪು ನೀಡಿದೆ. ಈ (ಲೆಬನಾನ್‌ನಲ್ಲಿ ನಡೆದ ದಾಳಿ) ಘಟನೆಯು ಪ್ಯಾಲೆಸ್ಟೈನ್‌ನಲ್ಲಿ ಸಾವಿರಾರು ಜನರನ್ನು ಕೊಂದ ಮತ್ತು ಈಗ ಲೆಬನಾನ್‌ನಲ್ಲಿ ಅದೇ ರೀತಿ ಮಾಡುತ್ತಿರುವ ಅಪರಾಧಿ ಎಂದು ಸಾಬೀತುಪಡಿಸಿದೆ. ಇದಕ್ಕೆ ಯಾವುದೇ ಖಂಡನೆ ಸಾಕಾಗುವುದಿಲ್ಲ” ಎಂದು ಅವರು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ನೆತನ್ಯಾಹುವನ್ನು “ಹಿಟ್ಲರ್ ನಂತರದ ಅತಿದೊಡ್ಡ ಭಯೋತ್ಪಾದಕ” ಎಂದು ಕರೆದ ಮಾಜಿ ಮುಖ್ಯಮಂತ್ರಿ, “ಹಿಟ್ಲರ್ ಜನರನ್ನು ಕೊಲ್ಲಲು ಗ್ಯಾಸ್ ಚೇಂಬರ್‌ಗಳನ್ನು ಸ್ಥಾಪಿಸಿದನು. ಆದರೆ, ನೆತನ್ಯಾಹು ಪ್ಯಾಲೆಸ್ತೀನ್ ಮತ್ತು ಲೆಬನಾನ್ ಅನ್ನು ಗ್ಯಾಸ್ ಚೇಂಬರ್‌ಗಳಾಗಿ ಪರಿವರ್ತಿಸಿದ್ದಾನೆ. ಅಲ್ಲಿ ಅವರು ಸಾವಿರಾರು ಜನರನ್ನು ಕೊಲ್ಲುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ನೆತನ್ಯಾಹು ಆಡಳಿತದೊಂದಿಗೆ ಸಂಬಂಧ ಹೊಂದುವ ಸರ್ಕಾರದ ನಿರ್ಧಾರ ತಪ್ಪು ಎಂದು ಮೆಹಬೂಬಾ ಹೇಳಿದರು.

“ನಾವು ಮಹಾತ್ಮ ಗಾಂಧಿಯವರ ಕಾಲದಿಂದಲೂ ಪ್ಯಾಲೆಸ್ತೀನ್ ಪರವಾಗಿ ನಿಂತಿದ್ದೇವೆ. ಆಡಳಿತದೊಂದಿಗೆ ಸಂಬಂಧವನ್ನು ಹೊಂದಿದ್ದು ಮತ್ತು ಜನರನ್ನು ಕೊಲ್ಲಲು ಬಳಸುತ್ತಿರುವ ಶಸ್ತ್ರಾಸ್ತ್ರಗಳು, ಡ್ರೋನ್‌ಗಳನ್ನು ಪೂರೈಸುವುದು ತಪ್ಪು ನಿರ್ಧಾರ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

“ಬಿಜೆಪಿ ನನಗೆ ಏನು ಹೇಳುತ್ತದೆ? ಅವರು ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಅತ್ಯಾಚಾರಿಗಳ ಬೆಂಬಲಕ್ಕೆ ನಿಂತವರು. ಆ ಅಪರಾಧಿಗಳು ಇಂದು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಅತ್ಯಾಚಾರಿಗಳನ್ನು ಬೆಂಬಲಿಸಿದ್ದಕ್ಕಾಗಿ ನಾನು ಅವರ ಇಬ್ಬರು ಮಂತ್ರಿಗಳನ್ನು ತೆಗೆದುಹಾಕಬೇಕಾಯಿತು” ಎಂದು ಪಿಡಿಪಿ ಮುಖ್ಯಸ್ಥರು ಹೇಳಿದರು.

ಪ್ಯಾಲೆಸ್ತೀನ್ ಜನರಿಗಾಗಿ ನಸ್ರಲ್ಲಾ ನಡೆಸಿದ ಸುದೀರ್ಘ ಹೋರಾಟದ ಬಗ್ಗೆ ಅವರಿಗೆ (ಬಿಜೆಪಿ) ಏನು ಗೊತ್ತು? ಕಾಶ್ಮೀರ, ಲಕ್ನೋ ಮತ್ತು ದೇಶದ ಇತರ ಭಾಗಗಳಲ್ಲಿ ಎಷ್ಟು ಜನರು ಹುತಾತ್ಮರಿಗೆ ಘೋಷಣೆಗಳನ್ನು ಕೂಗುತ್ತಿದ್ದಾರೆ ಎಂಬುದನ್ನು ಅವರು ನೋಡಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ; ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...