Homeಮುಖಪುಟ’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ

’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ

ಅರಣ್ಯ ಪ್ರದೇಶಗಳಿಂದ ಗುಜ್ಜರ್ ಸಮುದಾಯದ ಕೆಲವು ಕುಟುಂಬಗಳನ್ನು ಅಧಿಕಾರಿಗಳು ಒಕ್ಕಲೆಬ್ಬಿಸಿದ ಬಗ್ಗೆ  ಮಾತುಕತೆ ನಡೆಸಲು ಮೆಹಬೂಬಾ ಮುಫ್ತಿ ಬುದ್ಗಾಂಗೆ ಹೊರಟಿದ್ದರು.

- Advertisement -
- Advertisement -

ಶ್ರೀನಗರದ ತನ್ನ ನಿವಾಸದೊಳಗೆ ಅಧಿಕಾರಿಗಳು ಮತ್ತೊಮ್ಮೆ ನನ್ನನ್ನು ಬಂಧನದಲ್ಲಿರಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಕಳೆದ ಅಕ್ಟೋಬರ್‌ 13 ರಂದು 14 ತಿಂಗಳುಗಳಿಂದ ಗೃಹ ಬಂಧನದಲ್ಲಿ ಇದ್ದ ಮುಫ್ತಿ ಬಿಡುಗಡೆಯಾಗಿದ್ದರು.

ತಮ್ಮನ್ನು ಬಂಧನದಲ್ಲಿಡಲಾಗಿದೆ ಎಂದಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ತಮ್ಮ ಟ್ವಿಟರ್‌ ಖಾತೆಯಲ್ಲಿ ವೀಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರ ಮನೆಯ ಆವರಣದ ಗೇಟ್‌ಗಳನ್ನು ತೆರೆಯಬೇಕೆಂದು ಒತ್ತಾಯಿಸಿದ್ದಾರೆ.

“ಯಾವುದೇ ರೀತಿಯ ವಿರೋಧವನ್ನು ದಮನ ಮಾಡಲು ಭಾರತ ಸರ್ಕಾರಕ್ಕೆ ಅಕ್ರಮ ಬಂಧನವು ನೆಚ್ಚಿನ ವಿಧಾನವಾಗಿ ಮಾರ್ಪಟ್ಟಿದೆ. ನೂರಾರು ಕುಟುಂಬಗಳನ್ನು ತಮ್ಮ ಮನೆಗಳಿಂದ ಹೊರಹಾಕಿರುವ ಬುದ್ಗಾಂಗೆ  ಭೇಟಿ ನೀಡಲು ನಾನು ಬಯಸಿದ್ದರಿಂದ ನನ್ನನ್ನು ಮತ್ತೊಮ್ಮೆ ಬಂಧಿಸಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

ಅರಣ್ಯ ಪ್ರದೇಶಗಳಿಂದ ಗುಜ್ಜರ್ ಸಮುದಾಯದ ಕೆಲವು ಕುಟುಂಬಗಳನ್ನು ಅಧಿಕಾರಿಗಳು ಒಕ್ಕಲೆಬ್ಬಿಸಿದ ಬಗ್ಗೆ  ಕುಟುಂಬದವರಲ್ಲಿ ಮಾತುಕತೆ ನಡೆಸಲು ಮೆಹಬೂಬಾ ಮುಫ್ತಿ ಬುದ್ಗಾಂಗೆ ಹೊರಟಿದ್ದರು. ಆದರೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ಮನೆಯ ಮುಖ್ಯ ಪ್ರವೇಶ ದ್ವಾರವನ್ನು ಬಂದ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ಮಾಜಿ ಮುಖ್ಯಮಂತ್ರಿ ಮುಫ್ತಿ ಟ್ವೀಟ್ ಮಾಡಿರುವ ವೀಡಿಯೊಗಳಲ್ಲಿ, ಒಳಗಿನಿಂದ ಗೇಟ್ ಲಾಕ್ ಆಗಿರುವುದನ್ನು ನೋಡಬಹುದು. ಎಂ.ಎಸ್. ಮುಫ್ತಿ ಅವರು ಕಾಂಪೌಂಡ್‌ನೊಳಗಿನ ಇರುವ ಬೆರಳೆಣಿಕೆಯಷ್ಟು ಇತರ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಮಾತನಾಡುತ್ತಲೇ ಅವರು ಗೇಟ್ ತೆರೆಯಲು ಇನ್ನೊಂದು ಬದಿಯಲ್ಲಿರುವವರನ್ನು ಕರೆಯುತ್ತಾರೆ.

ಗೇಟ್ ಬಡಿಯುತ್ತಾ ಮುಫ್ತಿಯವರು, “ಬಾಗಿಲು ತೆರೆಯಿರಿ, ನಾನು ಹೊರಗೆ ಹೋಗಬೇಕು. ದಯವಿಟ್ಟು ಪೇಪರ್ಸ್ ತೋರಿಸಿ. ಯಾವ ಕಾನೂನಿನಡಿಯಲ್ಲಿ ನೀವು ನನ್ನನ್ನು ಬಂಧಿಸಿದ್ದೀರಿ?” ಎಂಬ ಪ್ರಶ್ನೆಗಳನ್ನು ಕೇಳುತ್ತಾರೆ. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ.

ಅಕ್ಟೋಬರ್ 13 ರಂದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಮಾಜಿ ಮುಖ್ಯಮಂತ್ರಿಯನ್ನು 14 ತಿಂಗಳ ಬಂಧನದಿಂದ ಬಿಡುಗಡೆಗೊಳಿಸಿತ್ತು. ಮೆಹಬೂಬ ಮುಫ್ತಿಯವರನ್ನು ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಹಿನ್ನೆಲೆ ಬಂಧಿಸಿತ್ತು.

ಬಿಡುಗಡೆಯ ನಂತರ, ಮುಫ್ತಿಯವರು ರಾಜ್ಯವು ಕಳೆದುಕೊಂಡ ವಿಶೇಷ ಸ್ಥಾನಮಾನವನ್ನು ಮತ್ತೆ ಪಡೆಯಬೇಕು ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬಲವಾದ ಮೈತ್ರಿ ಮಾಡಿಕೊಳ್ಳಲು ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್‌ ಮತ್ತು ಕಾಂಗ್ರೆಸ್ ಸೇರಿದಂತೆ ಕಾಶ್ಮೀರದ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತು.


ಇದನ್ನೂ ಓದಿ: ಮೆಹಬೂಬ ಮುಫ್ತಿ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...