Homeಮುಖಪುಟ’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ

’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ

ಅರಣ್ಯ ಪ್ರದೇಶಗಳಿಂದ ಗುಜ್ಜರ್ ಸಮುದಾಯದ ಕೆಲವು ಕುಟುಂಬಗಳನ್ನು ಅಧಿಕಾರಿಗಳು ಒಕ್ಕಲೆಬ್ಬಿಸಿದ ಬಗ್ಗೆ  ಮಾತುಕತೆ ನಡೆಸಲು ಮೆಹಬೂಬಾ ಮುಫ್ತಿ ಬುದ್ಗಾಂಗೆ ಹೊರಟಿದ್ದರು.

- Advertisement -
- Advertisement -

ಶ್ರೀನಗರದ ತನ್ನ ನಿವಾಸದೊಳಗೆ ಅಧಿಕಾರಿಗಳು ಮತ್ತೊಮ್ಮೆ ನನ್ನನ್ನು ಬಂಧನದಲ್ಲಿರಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಕಳೆದ ಅಕ್ಟೋಬರ್‌ 13 ರಂದು 14 ತಿಂಗಳುಗಳಿಂದ ಗೃಹ ಬಂಧನದಲ್ಲಿ ಇದ್ದ ಮುಫ್ತಿ ಬಿಡುಗಡೆಯಾಗಿದ್ದರು.

ತಮ್ಮನ್ನು ಬಂಧನದಲ್ಲಿಡಲಾಗಿದೆ ಎಂದಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ತಮ್ಮ ಟ್ವಿಟರ್‌ ಖಾತೆಯಲ್ಲಿ ವೀಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರ ಮನೆಯ ಆವರಣದ ಗೇಟ್‌ಗಳನ್ನು ತೆರೆಯಬೇಕೆಂದು ಒತ್ತಾಯಿಸಿದ್ದಾರೆ.

“ಯಾವುದೇ ರೀತಿಯ ವಿರೋಧವನ್ನು ದಮನ ಮಾಡಲು ಭಾರತ ಸರ್ಕಾರಕ್ಕೆ ಅಕ್ರಮ ಬಂಧನವು ನೆಚ್ಚಿನ ವಿಧಾನವಾಗಿ ಮಾರ್ಪಟ್ಟಿದೆ. ನೂರಾರು ಕುಟುಂಬಗಳನ್ನು ತಮ್ಮ ಮನೆಗಳಿಂದ ಹೊರಹಾಕಿರುವ ಬುದ್ಗಾಂಗೆ  ಭೇಟಿ ನೀಡಲು ನಾನು ಬಯಸಿದ್ದರಿಂದ ನನ್ನನ್ನು ಮತ್ತೊಮ್ಮೆ ಬಂಧಿಸಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

ಅರಣ್ಯ ಪ್ರದೇಶಗಳಿಂದ ಗುಜ್ಜರ್ ಸಮುದಾಯದ ಕೆಲವು ಕುಟುಂಬಗಳನ್ನು ಅಧಿಕಾರಿಗಳು ಒಕ್ಕಲೆಬ್ಬಿಸಿದ ಬಗ್ಗೆ  ಕುಟುಂಬದವರಲ್ಲಿ ಮಾತುಕತೆ ನಡೆಸಲು ಮೆಹಬೂಬಾ ಮುಫ್ತಿ ಬುದ್ಗಾಂಗೆ ಹೊರಟಿದ್ದರು. ಆದರೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ಮನೆಯ ಮುಖ್ಯ ಪ್ರವೇಶ ದ್ವಾರವನ್ನು ಬಂದ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ಮಾಜಿ ಮುಖ್ಯಮಂತ್ರಿ ಮುಫ್ತಿ ಟ್ವೀಟ್ ಮಾಡಿರುವ ವೀಡಿಯೊಗಳಲ್ಲಿ, ಒಳಗಿನಿಂದ ಗೇಟ್ ಲಾಕ್ ಆಗಿರುವುದನ್ನು ನೋಡಬಹುದು. ಎಂ.ಎಸ್. ಮುಫ್ತಿ ಅವರು ಕಾಂಪೌಂಡ್‌ನೊಳಗಿನ ಇರುವ ಬೆರಳೆಣಿಕೆಯಷ್ಟು ಇತರ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಮಾತನಾಡುತ್ತಲೇ ಅವರು ಗೇಟ್ ತೆರೆಯಲು ಇನ್ನೊಂದು ಬದಿಯಲ್ಲಿರುವವರನ್ನು ಕರೆಯುತ್ತಾರೆ.

ಗೇಟ್ ಬಡಿಯುತ್ತಾ ಮುಫ್ತಿಯವರು, “ಬಾಗಿಲು ತೆರೆಯಿರಿ, ನಾನು ಹೊರಗೆ ಹೋಗಬೇಕು. ದಯವಿಟ್ಟು ಪೇಪರ್ಸ್ ತೋರಿಸಿ. ಯಾವ ಕಾನೂನಿನಡಿಯಲ್ಲಿ ನೀವು ನನ್ನನ್ನು ಬಂಧಿಸಿದ್ದೀರಿ?” ಎಂಬ ಪ್ರಶ್ನೆಗಳನ್ನು ಕೇಳುತ್ತಾರೆ. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ.

ಅಕ್ಟೋಬರ್ 13 ರಂದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಮಾಜಿ ಮುಖ್ಯಮಂತ್ರಿಯನ್ನು 14 ತಿಂಗಳ ಬಂಧನದಿಂದ ಬಿಡುಗಡೆಗೊಳಿಸಿತ್ತು. ಮೆಹಬೂಬ ಮುಫ್ತಿಯವರನ್ನು ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಹಿನ್ನೆಲೆ ಬಂಧಿಸಿತ್ತು.

ಬಿಡುಗಡೆಯ ನಂತರ, ಮುಫ್ತಿಯವರು ರಾಜ್ಯವು ಕಳೆದುಕೊಂಡ ವಿಶೇಷ ಸ್ಥಾನಮಾನವನ್ನು ಮತ್ತೆ ಪಡೆಯಬೇಕು ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬಲವಾದ ಮೈತ್ರಿ ಮಾಡಿಕೊಳ್ಳಲು ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್‌ ಮತ್ತು ಕಾಂಗ್ರೆಸ್ ಸೇರಿದಂತೆ ಕಾಶ್ಮೀರದ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತು.


ಇದನ್ನೂ ಓದಿ: ಮೆಹಬೂಬ ಮುಫ್ತಿ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...