Homeಮುಖಪುಟಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ - ಇಲ್ತಿಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ತಮ್ಮ ತಾಯಿಯನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಮೆಹಬೂಬಾ ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲಿನಿಂದಲೇ ಬಂಧನದಲ್ಲಿಡಲಾಗಿದೆ.

ವಕೀಲ ಆಕಾಶ್ ಕಮ್ರಾ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ತನ್ನ ತಾಯಿಯ ಬಂಧನ ಮತ್ತು ನಂತರದ ಬಂಧನ ವಿಸ್ತರಣೆಗಳು ಕಾನೂನುಬಾಹಿರ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ನನ್ನ ತಾಯಿಗೆ ಏನಾದರೂ ಆದರೆ ಕೇಂದ್ರವೇ ಹೊಣೆ: ಮೆಹಬೂಬಾ ಮುಫ್ತಿ ಮಗಳ ಆತಂಕ

ಆರ್ಟಿಕಲ್ 370 ರದ್ದು ಮಾಡುವ ಕೆಲವೇ ಗಂಟೆಗಳ ಮೊದಲು, ರಾಜಕೀಯವಾಗಿ ಸಕ್ರಿಯವಾಗಿರುವ ನೂರಾರು ಜನರನ್ನು ಬಂಧಿಸಲಾಗಿತ್ತು. ಕಳೆದ ವರ್ಷದ ಆಗಸ್ಟ್ ನಿಂದಲೇ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನೂ ಬಂಧಿಸಿಡಲಾಗಿದೆ. ಆರು ತಿಂಗಳ ಕಸ್ಟಡಿ ಅವಧಿ ಮುಗಿಯುವ ಮುನ್ನವೇ ಕಠಿಣ ಪಿಎಸ್‌ಎ ಅಡಿಯಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಜುಲೈ 31 ರಂದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಿಎಸ್ಎ ಅಡಿಯಲ್ಲಿ ಅವರ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಿದೆ.

“ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ ”ಎಂದು ಇಲ್ತಿಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮೆಹಬೂಬಾ ಬಂಧನವನ್ನು ಪ್ರಶ್ನಿಸಿ ಇಲ್ತಿಜಾ ಸಲ್ಲಿಸಿದ್ದ ಮೊದಲ ಅರ್ಜಿ ಫೆಬ್ರವರಿ 26 ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಇನ್ನು ಬಾಕಿ ಇದೆ. ಇತ್ತೀಚಿನ ಅರ್ಜಿಯಲ್ಲಿ ಇಲ್ತಿಜಾ ಇಲ್ಲಿಯವರೆಗೆ ಪ್ರತಿವಾದಿಗಳು [ಜೆ & ಕೆ ಆಡಳಿತ] ಶೀರ್ಷಿಕೆಯ ರಿಟ್ ಅರ್ಜಿಗೆ ಯಾವುದೇ ಉತ್ತರ ಅಥವಾ ಪ್ರತಿ-ಅಫಿಡವಿಟ್ ಸಲ್ಲಿಸಿಲ್ಲ ಎಂದು ಆರೋಪಿಸಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಉತ್ತರ ಸಲ್ಲಿಸಲು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಆದೇಶಿಸಿದೆ.

ಇದನ್ನೂ ಓದಿ: ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ

ದಿ ವೈರ್‌ಗೆ, ಪ್ರತಿಕ್ರಿಯೆ ನೀಡಿರುವ ಇಲ್ತಿಜಾ ’ಇದು… ನ್ಯಾಯಾಲಯಗಳು ಮತ್ತು ಸುಪ್ರೀಂಕೋರ್ಟ್ ಬಗ್ಗೆ ಅವರು ಹೊಂದಿರುವ ಗೌರವವನ್ನು ನಿಮಗೆ ತೋರಿಸುತ್ತದೆ” ಎಂದಿದ್ದಾರೆ.

ಅರ್ಜಿಯಲ್ಲಿ ಮೆಹಬೂಬಾರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮತ್ತು ಅವರ ವಿರುದ್ಧದ ಎಲ್ಲಾ ಬಂಧನ ಆದೇಶಗಳನ್ನು ರದ್ದುಪಡಿಸುವಂತೆ ಜೊತೆಗೆ ಆಕೆಯ ದೀರ್ಘಕಾಲದ ಜೈಲುವಾಸಕ್ಕೆ ಸೂಕ್ತ ಪರಿಹಾರವನ್ನು ನೀಡುವಂತೆ ಕೋರಲಾಗಿದೆ. ಮಾಜಿ ಸಿಎಂ ಪ್ರಸ್ತುತ ಫೇರ್‌ವ್ಯೂ ಬಂಗಲೆಯ ಅಧಿಕೃತ ನಿವಾಸದಲ್ಲಿದ್ದಾರೆ. ಇದನ್ನು ಜೈಲಿನ ಅಂಗಸಂಸ್ಥೆ ಎಂದು ಘೋಷಿಸಲಾಗಿದೆ. ಅವರು ಸದ್ಯ ಬಂಧನದಲ್ಲಿರುವ ಏಕೈಕ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕಾರಣಿಯಾಗಿದ್ದಾರೆ.


ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...