Homeಮುಖಪುಟಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ - ಇಲ್ತಿಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ತಮ್ಮ ತಾಯಿಯನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಮೆಹಬೂಬಾ ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲಿನಿಂದಲೇ ಬಂಧನದಲ್ಲಿಡಲಾಗಿದೆ.

ವಕೀಲ ಆಕಾಶ್ ಕಮ್ರಾ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ತನ್ನ ತಾಯಿಯ ಬಂಧನ ಮತ್ತು ನಂತರದ ಬಂಧನ ವಿಸ್ತರಣೆಗಳು ಕಾನೂನುಬಾಹಿರ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ನನ್ನ ತಾಯಿಗೆ ಏನಾದರೂ ಆದರೆ ಕೇಂದ್ರವೇ ಹೊಣೆ: ಮೆಹಬೂಬಾ ಮುಫ್ತಿ ಮಗಳ ಆತಂಕ

ಆರ್ಟಿಕಲ್ 370 ರದ್ದು ಮಾಡುವ ಕೆಲವೇ ಗಂಟೆಗಳ ಮೊದಲು, ರಾಜಕೀಯವಾಗಿ ಸಕ್ರಿಯವಾಗಿರುವ ನೂರಾರು ಜನರನ್ನು ಬಂಧಿಸಲಾಗಿತ್ತು. ಕಳೆದ ವರ್ಷದ ಆಗಸ್ಟ್ ನಿಂದಲೇ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನೂ ಬಂಧಿಸಿಡಲಾಗಿದೆ. ಆರು ತಿಂಗಳ ಕಸ್ಟಡಿ ಅವಧಿ ಮುಗಿಯುವ ಮುನ್ನವೇ ಕಠಿಣ ಪಿಎಸ್‌ಎ ಅಡಿಯಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಜುಲೈ 31 ರಂದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಿಎಸ್ಎ ಅಡಿಯಲ್ಲಿ ಅವರ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಿದೆ.

“ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ ”ಎಂದು ಇಲ್ತಿಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮೆಹಬೂಬಾ ಬಂಧನವನ್ನು ಪ್ರಶ್ನಿಸಿ ಇಲ್ತಿಜಾ ಸಲ್ಲಿಸಿದ್ದ ಮೊದಲ ಅರ್ಜಿ ಫೆಬ್ರವರಿ 26 ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಇನ್ನು ಬಾಕಿ ಇದೆ. ಇತ್ತೀಚಿನ ಅರ್ಜಿಯಲ್ಲಿ ಇಲ್ತಿಜಾ ಇಲ್ಲಿಯವರೆಗೆ ಪ್ರತಿವಾದಿಗಳು [ಜೆ & ಕೆ ಆಡಳಿತ] ಶೀರ್ಷಿಕೆಯ ರಿಟ್ ಅರ್ಜಿಗೆ ಯಾವುದೇ ಉತ್ತರ ಅಥವಾ ಪ್ರತಿ-ಅಫಿಡವಿಟ್ ಸಲ್ಲಿಸಿಲ್ಲ ಎಂದು ಆರೋಪಿಸಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಉತ್ತರ ಸಲ್ಲಿಸಲು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಆದೇಶಿಸಿದೆ.

ಇದನ್ನೂ ಓದಿ: ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ

ದಿ ವೈರ್‌ಗೆ, ಪ್ರತಿಕ್ರಿಯೆ ನೀಡಿರುವ ಇಲ್ತಿಜಾ ’ಇದು… ನ್ಯಾಯಾಲಯಗಳು ಮತ್ತು ಸುಪ್ರೀಂಕೋರ್ಟ್ ಬಗ್ಗೆ ಅವರು ಹೊಂದಿರುವ ಗೌರವವನ್ನು ನಿಮಗೆ ತೋರಿಸುತ್ತದೆ” ಎಂದಿದ್ದಾರೆ.

ಅರ್ಜಿಯಲ್ಲಿ ಮೆಹಬೂಬಾರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮತ್ತು ಅವರ ವಿರುದ್ಧದ ಎಲ್ಲಾ ಬಂಧನ ಆದೇಶಗಳನ್ನು ರದ್ದುಪಡಿಸುವಂತೆ ಜೊತೆಗೆ ಆಕೆಯ ದೀರ್ಘಕಾಲದ ಜೈಲುವಾಸಕ್ಕೆ ಸೂಕ್ತ ಪರಿಹಾರವನ್ನು ನೀಡುವಂತೆ ಕೋರಲಾಗಿದೆ. ಮಾಜಿ ಸಿಎಂ ಪ್ರಸ್ತುತ ಫೇರ್‌ವ್ಯೂ ಬಂಗಲೆಯ ಅಧಿಕೃತ ನಿವಾಸದಲ್ಲಿದ್ದಾರೆ. ಇದನ್ನು ಜೈಲಿನ ಅಂಗಸಂಸ್ಥೆ ಎಂದು ಘೋಷಿಸಲಾಗಿದೆ. ಅವರು ಸದ್ಯ ಬಂಧನದಲ್ಲಿರುವ ಏಕೈಕ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕಾರಣಿಯಾಗಿದ್ದಾರೆ.


ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...