Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...