Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...