Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...