Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...