Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...