Homeಅಂತರಾಷ್ಟ್ರೀಯ14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

- Advertisement -
- Advertisement -

14 ಸಾವಿರ ಕೋಟಿ ರೂ. ಪಿಎನ್‌ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್) ಸಾಲ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಾಂಟೆಡ್ ಲಿಸ್ಟ್‌ನಲ್ಲಿರುವ, 2018 ರಲ್ಲಿ ಭಾರತದಿಂದ ಓಡಿ ಹೋಗಿರುವ ಗುಜರಾತಿನ ವಜ್ರ ವ್ಯಾಪಾರಿ ಮೆಹೂಲ್ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಅವರ ವಕೀಲರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಚೋಕ್ಸಿ ಅವರ ವಕೀಲ ವಿಜಯ್ ಅಗರ್‌ವಾಲ್ ಅವರು ಮಂಗಳವಾರ ಬೆಳಿಗ್ಗೆ ಎನ್‌ಡಿಟಿವಿಗೆ ತಮ್ಮ ಕಕ್ಷಿದಾರ ಕಾಣೆಯಾಗಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಹುಡುಕುತ್ತಿದೆ ಎಂದು ದೃಢಪಡಿಸಿದ್ದಾರೆ. ಆಂಟಿಗುವಾ ಪೊಲೀಸರು ಪತ್ತೆ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ಸ್ಥಳೀಯ ಮಾಧ್ಯಮ ಆಂಟಿಗುವಾ ನ್ಯೂಸ್‌ರೂಮ್, ಪೊಲೀಸ್ ಆಯುಕ್ತ ಅಟ್ಲೀ ರೊಡ್ನಿ ಅವರನ್ನು ಉಲ್ಲೇಖಿಸಿ, ಅಧಿಕಾರಿಗಳು ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿ ಇರುವ ಸ್ಥಳವನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದೆ.

ಚೋಕ್ಸಿ ಕಾಣೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿಲ್ಲ ಎಂದು ಸಿಬಿಐನ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ಮಾಹಿತಿಗಾಗಿ ಭಾರತದ ಆಂಟಿಗುವಾನ್ ರಾಯಭಾರ ಕಚೇರಿಗೆ ಸಿಬಿಐ ಪತ್ರ ಬರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

2018 ರಲ್ಲಿ ಜಾಗತಿಕ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಹೊರಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಅಂದರೆ ಅವರು ಜಗತ್ತಿನ ಎಲ್ಲಿಯಾದರೂ ಯಾವುದೇ ದೇಶವನ್ನು ಪ್ರವೇಶಿಸಿದರೆ ಸಿಬಿಐಗೆ ಇಂಟರ್‌ಪೋಲ್ ಸೂಚನೆ ನೀಡಲಿದೆ.

ಆಂಟಿಗುವಾದಲ್ಲಿನ ಸ್ಥಳೀಯ ಮಾಧ್ಯಮವನ್ನು ಉಲ್ಲೇಖಿಸಿ ಗುಪ್ತಚರ ಮೂಲಗಳು, ಚೋಕ್ಸಿ ಅವರು ಕ್ಯೂಬಾದಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಿವೆ. “ನಾವು ಅಂತಹ ವರದಿಗಳನ್ನು ಪಡೆದುಕೊಂಡಿದ್ದೇವೆ. ನಾವು ಅದನ್ನು ಪತ್ತೆ ಮಾಡುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಆಂಟಿಗುವಾದಂತೆ, ಕ್ಯೂಬಾ ಜೊತೆಗೂ ಭಾರತದ ಹಸ್ತಾಂತರ ಒಪ್ಪಂದವಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಚೋಕ್ಸಿ ಸೋಮವಾರ ಸಂಜೆ ದ್ವೀಪದ ದಕ್ಷಿಣ ಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಊಟಕ್ಕೆ ಹೋಗಲು ತಮ್ಮ ಮನೆಯಿಂದ ಹೊರಟರು. ಆಮೇಲೆ ಅವರು ಕಾಣಿಸಿಕೊಂಡಿಲ್ಲ. ಅವರ ವಾಹನವು ನಂತರ ಪತ್ತೆಯಾಗಿದೆ. ಆದರೆ ಅವರ ಯಾವುದೇ ಸುಳಿವು ಇಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಮೆಹುಲ್ ಚೋಕ್ಸಿ ದೀರ್ಘಕಾಲದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ.

ಅವರು ಪ್ರಸ್ತುತ ಆಂಟಿಗುವಾನ್ ಪೌರತ್ವವನ್ನು ಹೊಂದಿದ್ದಾರೆ. ಕಳೆದ ವರ್ಷ ಆಂಟಿಗುವಾ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಸ್ಕಿ ಅವರ ಎಲ್ಲಾ ಕಾನೂನು ಆಯ್ಕೆಗಳು ಮುಗಿದ ನಂತರ ಪೌರತ್ವವನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

“ಕೆರಿಬಿಯನ್‌ನ ಅನೇಕ ದೇಶಗಳಂತೆ ತಮ್ಮ ದೇಶವು ಅಪರಾಧಿಗಳಿಗೆ, ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಸುರಕ್ಷಿತ ತಾಣ ಒದಗಿಸುವುದಿಲ್ಲ” ಎಂದು ಬ್ರೌನ್ ಸ್ಪಷ್ಟಪಡಿಸುತ್ತ ಬಂದಿದ್ದಾರೆ.

“ಪೌರತ್ವದ ಪ್ರಕ್ರಿಯೆ ನಡೆದ ಬಳಿಕ ಚೋಸ್ಕಿ ಪ್ರವೇಶಿಸಿದ್ದಾರೆ. ನಮಗೆ ಬೇರೆ ಪ್ರಕ್ರಿಯೆ ಕೂಡ ಇವೆ. ವಾಸ್ತವವೆಂದರೆ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಭಾರತಕ್ಕೆ ಗಡೀಪಾರು ಮಾಡಲಾಗುವುದು” ಎಂದು ಬ್ರೌನ್ ಹೇಳಿದ್ದಾರೆ ಎಂದು ಆಂಟಿಗುವಾ ಅಬ್ಸರ್ವರ್ ವರದಿ ಮಾಡಿದೆ.

ಆಂಟಿಗುವಾನ್ ಸಿವಿಲ್ ನ್ಯಾಯಾಲಯವು ಪೌರತ್ವವನ್ನು ರದ್ದುಪಡಿಸಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಮಾರ್ಚ್‌ನಲ್ಲಿ ಚೋಕ್ಸಿ ಅವರ ವಕೀಲರು ಹೇಳಿದ್ದರು. ಮೆಹುಲ್ ಚೋಕ್ಸಿ ಆಂಟಿಗುವಾನ್ ಪ್ರಜೆಯಾಗಿ ಉಳಿದಿದ್ದಾರೆ ಎಂದು ವಕೀಲ ಅಗರವಾಲ್ ಹೇಳಿದ್ದರು. ಎಎನ್‌ಐ ಜೊತೆಗಿನ ತಮ್ಮ ಹಿಂದಿನ ಸಂದರ್ಶನದಲ್ಲಿ ಚೋಕ್ಸಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪಿಎನ್‌ಬಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯ ಸಂಬಂಧಿಕ (ಸೋದರಳಿಯ), ಬಿಲಿಯನೇರ್ ಆಭರಣ ವ್ಯಾಪಾರಿ ನೀರವ್ ಮೋದಿ (50) ಕೂಡ ವಾಂಟೆಡ್ ಲಿಸ್ಟ್‌ನಲ್ಲಿದ್ದಾರೆ. ಚೋಕ್ಸಿ ಅವರಂತೆಯೇ ಮೋದಿ ಕೂಡ 2018 ರಲ್ಲಿ ಭಾರತದಿಂದ ಪಲಾಯನ ಮಾಡಿ, ಪ್ರಸ್ತುತ ಬ್ರಿಟನ್ ದೇಶದಲ್ಲಿದ್ದಾರೆ.

ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಕಳೆದ ತಿಂಗಳು ಬ್ರಿಟಿಷ್‌ ಸರ್ಕಾರ ಅನುಮತಿಸಿತ್ತು. ಆದರೆ ನೀರವ್ ಮೋದಿ ಬ್ರಿಟಿಷ್ ಹಸ್ತಾಂತರದ ಆದೇಶವನ್ನು ಯುಕೆ ಹೈಕೋರ್ಟ್ ಮುಂದೆ ಪ್ರಶ್ನಿಸಬಹುದು.

2019 ರ ಫೆಬ್ರವರಿಯಲ್ಲಿ ಸಹಿ ಮಾಡಿದ ಹಸ್ತಾಂತರ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಮದ್ಯದ ದೊರೆ ವಿಜಯ್ ಮಲ್ಯ ಅವರ ಪ್ರಕರಣದಲ್ಲಿ ಕಂಡುಬರುವಂತೆ, ಈ ಪ್ರಕ್ರಿಯೆಯು ತಿಂಗಳುಗಳು ಅಥವಾ ವರ್ಷಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...