Homeಮುಖಪುಟಮೈತೇಯಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯು ಜನಾಂಗೀಯ ಸಂಘರ್ಷಕ್ಕೆ ಕಾರಣ: ಮಣಿಪುರ ಮುಖ್ಯಮಂತ್ರಿ

ಮೈತೇಯಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯು ಜನಾಂಗೀಯ ಸಂಘರ್ಷಕ್ಕೆ ಕಾರಣ: ಮಣಿಪುರ ಮುಖ್ಯಮಂತ್ರಿ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ‘ದುರದೃಷ್ಟಕರ’ ಎಂದು ಕರೆದ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ಮೈತೇಯಿ ಜನರು ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ಕೋರಿದ ನಂತರ ಎಲ್ಲವೂ ಪ್ರಾರಂಭವಾಯಿತು. ಆದ್ದರಿಂದ, ತಮ್ಮ ಸರ್ಕಾರ ತಪ್ಪಿತಸ್ಥರಲ್ಲ” ಎಂದು ಪ್ರತಿಪಾದಿಸಿದರು.

ಮುಖ್ಯಮಂತ್ರಿ ಸಚಿವಾಲಯದಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ರಾಜ್ಯವು ಮಾನವ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಯಾವುದೇ ರಾಜಕೀಯ ಮಾಡಬಾರದು ಎಂದು ಹೇಳಿದರು.

ಮೇ 3, 2023 ರಂದು ಪ್ರಾರಂಭವಾದ ಹಿಂಸಾಚಾರವನ್ನು ನೆನಪಿಸಿಕೊಂಡ ಸಿಎಂ, “ಈ ಘಟನೆ ತುಂಬಾ ದುರದೃಷ್ಟಕರ. ಸಂಘರ್ಷಕ್ಕೆ ಕಾರಣ ಮೈತೆಯಿಯವರ ಎಸ್‌ಟಿ ಸ್ಥಾನಮಾನದ ಬೇಡಿಕೆ. ಎಲ್ಲರೂ ರಾಜ್ಯ ಸರ್ಕಾರವನ್ನು ನಾವು ತಪ್ಪು ಮಾಡಿದಂತೆ ಟೀಕಿಸುತ್ತಿದ್ದಾರೆ” ಎಂದರು.

“ವಾಸ್ತವವೆಂದರೆ, ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಮೈತೇಯಿಯವರ ಎಸ್‌ಟಿ ಸ್ಥಾನಮಾನದ ಬೇಡಿಕೆಗೆ ಉತ್ತರಿಸುವಂತೆ ಕೇಳಿತ್ತು. ಅದನ್ನು ವಿರೋಧಿಸಿ, ರ‍್ಯಾಲಿ ನಡೆಸಲಾಯಿತು; ಮೈತೇಯಿಗಳಿಗೆ ಸೇರಿದ ಮನೆಗಳ ಮೇಲೆ ದಾಳಿ ಮಾಡಲಾಯಿತು. ಹೀಗೆ ಸಂಘರ್ಷ ಪ್ರಾರಂಭವಾಯಿತು” ಎಂದು ವಿವರಿಸಿದರು.

ಮಾರ್ಚ್ 27, 2023 ರಂದು, ಮಣಿಪುರ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ವಿ. ಮುರಳೀಧರನ್ ಅವರು, ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವುದನ್ನು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದರು.

ರಾಜ್ಯದ ಬುಡಕಟ್ಟು ಸಂಸ್ಥೆಗಳು ಇದನ್ನು ತೀವ್ರವಾಗಿ ವಿರೋಧಿಸಿದವು. ಮೇ 3 ರಂದು, ಮಣಿಪುರದ ಬೆಟ್ಟದ ಜಿಲ್ಲೆಗಳಲ್ಲಿ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ ರ‍್ಯಾಲಿಯನ್ನು ನಡೆಸಿತು.

ಚುರಚಂದ್‌ಪುರ ಜಿಲ್ಲೆಯ ಗುಂಪೊಂದು ಒಂದು ಸ್ಥಳಕ್ಕೆ ನುಗ್ಗಿ ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚುವಿಕೆಯಲ್ಲಿ ತೊಡಗಿದ ನಂತರ ರ‍್ಯಾಲಿ ಹಿಂಸಾತ್ಮಕವಾಯಿತು. ಈ ವಿಷಯದ ಬಗ್ಗೆ ಅನೇಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿಕೊಂಡರು.

“ಪರಿಹಾರ ಶಿಬಿರಗಳಲ್ಲಿರುವವರ ಶಿಕ್ಷಣ, ದೈನಂದಿನ ಸರಬರಾಜು, ಆರೋಗ್ಯ ಮತ್ತು ಇತರ ಎಲ್ಲ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ.. ನಾವು ಮಾನವ ಬಿಕ್ಕಟ್ಟನ್ನು ನೋಡುತ್ತಿದ್ದೇವೆ ಮತ್ತು ಯಾವುದೇ ರಾಜಕೀಯವನ್ನು ಆಡಬಾರದು” ಎಂದು ಅವರು ಹೇಳಿದರು.

“ಮನಸ್ಥಿತಿ ಬದಲಾಗಬೇಕು. ಸಂಘರ್ಷ ನಡೆಯುತ್ತಿದೆ, ಅನೇಕರು ಕೊಲ್ಲಲ್ಪಟ್ಟರು ಮತ್ತು ಸ್ಥಳಾಂತರಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಟಿವಿ ಚರ್ಚೆಗಳಲ್ಲಿ ಜನಪ್ರಿಯತೆಯನ್ನು ಹುಡುಕುವ ಸಮಯ ಈಗಿಲ್ಲ. ನಿಜವಾದ ವಿಷಯ ತಜ್ಞರು ಮತ್ತು ಭದ್ರತಾ ಪಡೆಗಳು ಸಂಘರ್ಷದ ಬಗ್ಗೆ ಮಾತನಾಡಲಿ” ಎಂದು ಸಿಂಗ್ ಹೇಳಿದರು.

‘ಹಿಂದಿನ ನಾಯಕರು’ ಸಂಕುಚಿತ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು, ತಪ್ಪುಗಳನ್ನು ಮಾಡುವುದು ಕಷ್ಟಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದ ಸಿಎಂ, “ನಾವು ಭೂಮಿ ಮತ್ತು ಸಮಾಜವನ್ನು ಉಳಿಸಲು ಅಪಾಯ, ತ್ಯಾಗಗಳನ್ನು ತೆಗೆದುಕೊಳ್ಳಬೇಕಾಗಿದೆ. ರಾಜಕೀಯವು ಚುನಾವಣೆಗಳನ್ನು ಗೆಲ್ಲಲು ಮಾತ್ರ ಅಲ್ಲ” ಎಂದು ಹೇಳಿದರು.

ಮಣಿಪುರದ ತೌಬಲ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸರು ಮತ್ತು ಜನರ ನಡುವಿನ ಸಂಬಂಧ ಸುಧಾರಿಸಿದೆ ಎಂದು ಮುಖ್ಯಮಂತ್ರಿ ಹೇಳಿಕೊಂಡರು. ಈ ಹಿಂದೆ ಎಲ್ಲರೂ ಪೊಲೀಸರ ಬಗ್ಗೆ ಭಯದ ಮನೋರೋಗವನ್ನು ಹೊಂದಿದ್ದರು ಎಂದು ಹೇಳಿದರು.

ಈಶಾನ್ಯ ರಾಜ್ಯವು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳ ಹಿಡಿತದಲ್ಲಿದೆ. ಇದು 2023 ರ ಮೇ 3 ರಿಂದ 250 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು, ಸಾವಿರಾರು ಜನರು ನಿರಾಶ್ರಿತರಾದರು.

ಕಾರ್ಯಕ್ರಮದ ಸಂದರ್ಭದಲ್ಲಿ, ಪರಿಹಾರ ಶಿಬಿರಗಳಲ್ಲಿ ವಾಸಿಸುವ ಕಾರ್ಮಿಕ ಕಾರ್ಡ್‌ದಾರರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ವಿಶೇಷ ಯೋಜನೆಯಡಿಯಲ್ಲಿ ಸಿಂಗ್ ಕಾರ್ಮಿಕ ಕಾರ್ಡ್‌ದಾರರಿಗೆ ಪ್ರಯೋಜನಗಳನ್ನು ವಿತರಿಸಿದರು.

ಇದನ್ನೂ ಓದಿ; ನಕ್ಸಲ್ ಸಂಪರ್ಕ ಆರೋಪದ ಎಲ್ಗರ್ ಪರಿಷತ್ ಪ್ರಕರಣ:  ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...