Homeಮುಖಪುಟಮೈತೇಯಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯು ಜನಾಂಗೀಯ ಸಂಘರ್ಷಕ್ಕೆ ಕಾರಣ: ಮಣಿಪುರ ಮುಖ್ಯಮಂತ್ರಿ

ಮೈತೇಯಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯು ಜನಾಂಗೀಯ ಸಂಘರ್ಷಕ್ಕೆ ಕಾರಣ: ಮಣಿಪುರ ಮುಖ್ಯಮಂತ್ರಿ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ‘ದುರದೃಷ್ಟಕರ’ ಎಂದು ಕರೆದ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ಮೈತೇಯಿ ಜನರು ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ಕೋರಿದ ನಂತರ ಎಲ್ಲವೂ ಪ್ರಾರಂಭವಾಯಿತು. ಆದ್ದರಿಂದ, ತಮ್ಮ ಸರ್ಕಾರ ತಪ್ಪಿತಸ್ಥರಲ್ಲ” ಎಂದು ಪ್ರತಿಪಾದಿಸಿದರು.

ಮುಖ್ಯಮಂತ್ರಿ ಸಚಿವಾಲಯದಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ರಾಜ್ಯವು ಮಾನವ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಯಾವುದೇ ರಾಜಕೀಯ ಮಾಡಬಾರದು ಎಂದು ಹೇಳಿದರು.

ಮೇ 3, 2023 ರಂದು ಪ್ರಾರಂಭವಾದ ಹಿಂಸಾಚಾರವನ್ನು ನೆನಪಿಸಿಕೊಂಡ ಸಿಎಂ, “ಈ ಘಟನೆ ತುಂಬಾ ದುರದೃಷ್ಟಕರ. ಸಂಘರ್ಷಕ್ಕೆ ಕಾರಣ ಮೈತೆಯಿಯವರ ಎಸ್‌ಟಿ ಸ್ಥಾನಮಾನದ ಬೇಡಿಕೆ. ಎಲ್ಲರೂ ರಾಜ್ಯ ಸರ್ಕಾರವನ್ನು ನಾವು ತಪ್ಪು ಮಾಡಿದಂತೆ ಟೀಕಿಸುತ್ತಿದ್ದಾರೆ” ಎಂದರು.

“ವಾಸ್ತವವೆಂದರೆ, ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಮೈತೇಯಿಯವರ ಎಸ್‌ಟಿ ಸ್ಥಾನಮಾನದ ಬೇಡಿಕೆಗೆ ಉತ್ತರಿಸುವಂತೆ ಕೇಳಿತ್ತು. ಅದನ್ನು ವಿರೋಧಿಸಿ, ರ‍್ಯಾಲಿ ನಡೆಸಲಾಯಿತು; ಮೈತೇಯಿಗಳಿಗೆ ಸೇರಿದ ಮನೆಗಳ ಮೇಲೆ ದಾಳಿ ಮಾಡಲಾಯಿತು. ಹೀಗೆ ಸಂಘರ್ಷ ಪ್ರಾರಂಭವಾಯಿತು” ಎಂದು ವಿವರಿಸಿದರು.

ಮಾರ್ಚ್ 27, 2023 ರಂದು, ಮಣಿಪುರ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ವಿ. ಮುರಳೀಧರನ್ ಅವರು, ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವುದನ್ನು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದರು.

ರಾಜ್ಯದ ಬುಡಕಟ್ಟು ಸಂಸ್ಥೆಗಳು ಇದನ್ನು ತೀವ್ರವಾಗಿ ವಿರೋಧಿಸಿದವು. ಮೇ 3 ರಂದು, ಮಣಿಪುರದ ಬೆಟ್ಟದ ಜಿಲ್ಲೆಗಳಲ್ಲಿ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ ರ‍್ಯಾಲಿಯನ್ನು ನಡೆಸಿತು.

ಚುರಚಂದ್‌ಪುರ ಜಿಲ್ಲೆಯ ಗುಂಪೊಂದು ಒಂದು ಸ್ಥಳಕ್ಕೆ ನುಗ್ಗಿ ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚುವಿಕೆಯಲ್ಲಿ ತೊಡಗಿದ ನಂತರ ರ‍್ಯಾಲಿ ಹಿಂಸಾತ್ಮಕವಾಯಿತು. ಈ ವಿಷಯದ ಬಗ್ಗೆ ಅನೇಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿಕೊಂಡರು.

“ಪರಿಹಾರ ಶಿಬಿರಗಳಲ್ಲಿರುವವರ ಶಿಕ್ಷಣ, ದೈನಂದಿನ ಸರಬರಾಜು, ಆರೋಗ್ಯ ಮತ್ತು ಇತರ ಎಲ್ಲ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ.. ನಾವು ಮಾನವ ಬಿಕ್ಕಟ್ಟನ್ನು ನೋಡುತ್ತಿದ್ದೇವೆ ಮತ್ತು ಯಾವುದೇ ರಾಜಕೀಯವನ್ನು ಆಡಬಾರದು” ಎಂದು ಅವರು ಹೇಳಿದರು.

“ಮನಸ್ಥಿತಿ ಬದಲಾಗಬೇಕು. ಸಂಘರ್ಷ ನಡೆಯುತ್ತಿದೆ, ಅನೇಕರು ಕೊಲ್ಲಲ್ಪಟ್ಟರು ಮತ್ತು ಸ್ಥಳಾಂತರಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಟಿವಿ ಚರ್ಚೆಗಳಲ್ಲಿ ಜನಪ್ರಿಯತೆಯನ್ನು ಹುಡುಕುವ ಸಮಯ ಈಗಿಲ್ಲ. ನಿಜವಾದ ವಿಷಯ ತಜ್ಞರು ಮತ್ತು ಭದ್ರತಾ ಪಡೆಗಳು ಸಂಘರ್ಷದ ಬಗ್ಗೆ ಮಾತನಾಡಲಿ” ಎಂದು ಸಿಂಗ್ ಹೇಳಿದರು.

‘ಹಿಂದಿನ ನಾಯಕರು’ ಸಂಕುಚಿತ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು, ತಪ್ಪುಗಳನ್ನು ಮಾಡುವುದು ಕಷ್ಟಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದ ಸಿಎಂ, “ನಾವು ಭೂಮಿ ಮತ್ತು ಸಮಾಜವನ್ನು ಉಳಿಸಲು ಅಪಾಯ, ತ್ಯಾಗಗಳನ್ನು ತೆಗೆದುಕೊಳ್ಳಬೇಕಾಗಿದೆ. ರಾಜಕೀಯವು ಚುನಾವಣೆಗಳನ್ನು ಗೆಲ್ಲಲು ಮಾತ್ರ ಅಲ್ಲ” ಎಂದು ಹೇಳಿದರು.

ಮಣಿಪುರದ ತೌಬಲ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸರು ಮತ್ತು ಜನರ ನಡುವಿನ ಸಂಬಂಧ ಸುಧಾರಿಸಿದೆ ಎಂದು ಮುಖ್ಯಮಂತ್ರಿ ಹೇಳಿಕೊಂಡರು. ಈ ಹಿಂದೆ ಎಲ್ಲರೂ ಪೊಲೀಸರ ಬಗ್ಗೆ ಭಯದ ಮನೋರೋಗವನ್ನು ಹೊಂದಿದ್ದರು ಎಂದು ಹೇಳಿದರು.

ಈಶಾನ್ಯ ರಾಜ್ಯವು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳ ಹಿಡಿತದಲ್ಲಿದೆ. ಇದು 2023 ರ ಮೇ 3 ರಿಂದ 250 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು, ಸಾವಿರಾರು ಜನರು ನಿರಾಶ್ರಿತರಾದರು.

ಕಾರ್ಯಕ್ರಮದ ಸಂದರ್ಭದಲ್ಲಿ, ಪರಿಹಾರ ಶಿಬಿರಗಳಲ್ಲಿ ವಾಸಿಸುವ ಕಾರ್ಮಿಕ ಕಾರ್ಡ್‌ದಾರರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ವಿಶೇಷ ಯೋಜನೆಯಡಿಯಲ್ಲಿ ಸಿಂಗ್ ಕಾರ್ಮಿಕ ಕಾರ್ಡ್‌ದಾರರಿಗೆ ಪ್ರಯೋಜನಗಳನ್ನು ವಿತರಿಸಿದರು.

ಇದನ್ನೂ ಓದಿ; ನಕ್ಸಲ್ ಸಂಪರ್ಕ ಆರೋಪದ ಎಲ್ಗರ್ ಪರಿಷತ್ ಪ್ರಕರಣ:  ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...