Homeಕರ್ನಾಟಕಮೇಕೆದಾಟು ಡ್ಯಾಂ ಕಟ್ಟುವ ಹಕ್ಕು ಕರ್ನಾಟಕಕ್ಕಿದ್ದರೆ, ಅದನ್ನು ನಿಲ್ಲಿಸುವ ಹಕ್ಕು ನಮಗೂ ಇದೆ: ತಮಿಳುನಾಡು

ಮೇಕೆದಾಟು ಡ್ಯಾಂ ಕಟ್ಟುವ ಹಕ್ಕು ಕರ್ನಾಟಕಕ್ಕಿದ್ದರೆ, ಅದನ್ನು ನಿಲ್ಲಿಸುವ ಹಕ್ಕು ನಮಗೂ ಇದೆ: ತಮಿಳುನಾಡು

- Advertisement -
- Advertisement -

ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಕರ್ನಾಟಕ ಸರ್ಕಾರ ಆರಂಭಿಸಿರುವ ಮೇಕೆದಾಟು ಯೋಜನೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಮೇಕೆದಾಟು ಯೋಜನೆ  ವಿರುದ್ಧ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ನಡೆಸಿ, ಯೋಜನೆ ವಿರೋಧಿಸುವ ನಿರ್ಣಯ ತೆಗೆದುಕೊಂಡಿತ್ತು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ “ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಯಿಂದ ಹಿಂದೆ ಸರಿಯುವುದಿಲ್ಲ” ಎಂದು ಹೇಳಿಕೆ ನೀಡಿದ್ದರು. ಸಚಿವ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್, “ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ತೀರ್ಪಿನ ವಿರುದ್ಧ ಅಣೆಕಟ್ಟು ನಿರ್ಮಿಸುವುದಾಗಿ ಹೇಳುವ ಹಕ್ಕು ಕರ್ನಾಟಕಕ್ಕೆ ಇದ್ದರೆ, ಕಾನೂನು ಮಾರ್ಗದ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸುವ ಹಕ್ಕು ನಮಗೂ ಇದೆ” ಎಂದು ಹೇಳಿದ್ದಾರೆ.

ಸೋಮವಾರ ಸರ್ವಪಕ್ಷ ಸಭೆ ನಡೆಸಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದೆಂದು ಕೇಂದ್ರವನ್ನು ಒತ್ತಾಯಿಸಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಗಿತ್ತು.

ಆದರೆ, ಈ ಬಗ್ಗೆ ಕಟು ಹೇಳಿಕೆ ನೀಡಿದ್ದ ಸಚಿವ ಬಸವರಾಜ ಬೊಮ್ಮಾಯಿ, “ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಸಿದ್ದವಾಗಿರುವ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಇದು ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡುವ ಯೋಜನೆ. ಈ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕುಗಳು ಕರ್ನಾಟಕಕ್ಕೆ ಇವೆ” ಎಂದು ಪ್ರತಿಪಾಸಿದ್ದರು.

ಇದನ್ನೂ ಓದಿ: ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ತಮಿಳುನಾಡು ಸಚಿವ ದೊರೈ ಮುರುಗನ್, “ರಾಜ್ಯಕ್ಕೆ ಹರಿಸಬೇಕಾದ ನೀರಿನ ಪ್ರಮಾಣ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದೆ. ಈ ಪರಿಸ್ಥಿತಿಯಲ್ಲಿ, ತಮಿಳುನಾಡಿನ ಕಡೆಗೆ ಹರಿಯುವ ನೀರಿನ ಹಾದಿಯನ್ನು ತಡೆಯುವ ಅಣೆಕಟ್ಟು ನಿರ್ಮಿಸುವುದಾಗಿ ಹೇಳುವ ಮೂಲಕ ಕರ್ನಾಟಕ ಸರ್ಕಾರ ಉನ್ನತ ನ್ಯಾಯಾಲಯದ ತೀರ್ಪನ್ನು ಕಡೆಗಣಿಸುತ್ತಿದೆ” ಎಂದಿದ್ದಾರೆ.

“ಕರ್ನಾಟಕದ ಸಚಿವರು ಕಾವೇರಿ ಟ್ರಿಬ್ಯೂನಲ್ ಮತ್ತು ಸುಪ್ರೀಂ ಕೋರ್ಟ್​ನ ತೀರ್ಪುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಆಶ್ಚರ್ಯವಾಗುತ್ತಿದೆ. ಇದು ಪ್ರಜಾಪ್ರಭುತ್ವ ದೇಶ. ಕರ್ನಾಟಕದಲ್ಲಿ ಇಂತಹ ಪ್ರವೃತ್ತಿಗಳು ಬೆಳೆಯುತ್ತಿರುವಾಗ ಕೇಂದ್ರ ಸರ್ಕಾರ ಪ್ರೇಕ್ಷಕರಾಗಿ ಉಳಿಯುವುದು ಸರಿಯಲ್ಲ. ನೆರೆಯ ರಾಜ್ಯಗಳ ನಡುವಿನ ಆರೋಗ್ಯಕರ ಸಂಬಂಧಕ್ಕೆ ಇದು ಒಳ್ಳೆಯದಲ್ಲ” ಎಂದು ತಮಿಳುನಾಡು ಸಚಿವ ದೊರೈ ಮುರುಗನ್ ತಿಳಿಸಿದ್ದಾರೆ.

ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ, ಮೇಕೆದಾಟು ಯೋಜನೆಯನ್ನು ಮುಂದುವರಿಸುವ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಖಂಡಿಸಿ ತಂಜಾವೂರಿನಲ್ಲಿ ಬ್ಯಾನರ್‌ಗಳನ್ನು ಹೊತ್ತುಕೊಂಡು ಘೋಷಣೆಗಳನ್ನು ಕೂಗಿದ್ದಾರೆ.

ರಾಜ್ಯದಲ್ಲಿ ಆಡಳಿತ ಮತ್ತು ವಿಪಕ್ಷಗಳು ಕೂಡ ಮೇಕೆದಾಟು ಯೋಜನೆಗೆ ಬೆಂಬಲ ಸೂಚಿಸಿವೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಈ ಬಗ್ಗೆ ಪ್ರತಿಕ್ರಿಯಿಸಿ, “ಈ ಯೋಜನೆಗೆ ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಹೇಳಿದ್ದರು.


ಇದನ್ನೂ ಓದಿ: ‘ಮೇಕೆದಾಟು’ ಯೋಜನೆ ರಾಜ್ಯದ ಹಕ್ಕು, ಅದನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...