Homeಕರ್ನಾಟಕಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮೇಕೆದಾಟು ಪಾದಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದರು.

- Advertisement -
- Advertisement -

“ಹರಿಯೋ ನೀರು, ಉರಿಯೋ ಸೂರ್ಯನನ್ನು ತಡೆಯಲಾಗಲ್ಲ. ಹಾಗೆಯೇ ಮೇಕೆದಾಟು ಅಣೆಕಟ್ಟು ಜಾರಿಗಾಗಿ ನಡೆಯುತ್ತಿರುವ ಹೋರಾಟವನ್ನು ಯಾರಿಂದಲೂ ನಿಲ್ಲಿಸಲಾಗಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗುಡುಗಿದರು.

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿತು. ಕನಕಪುರ ತಾಲ್ಲೂಕಿನ ‘ಸಂಗಮ’ದಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಕಾವೇರಿ ಹೋರಾಟಕ್ಕೆ ಜಯವಾಗಲಿ”, “ಭಾರತ್‌ ಮಾತಾಕೀ ಜೈ” ಎಂದು ಮಾತು ಆರಂಭಿಸಿದ ಅವರು, “ಇಲ್ಲಿ ಹಾರಾಡುತ್ತಿರುವ ಭಾರತದ ಧ್ವಜ, ಕರ್ನಾಟಕದ ಧ್ವಜ, ಕಾಂಗ್ರೆಸ್‌ ಧ್ವಜ, ಈ ಕಾವೇರಿ ನದಿಯ ಮೇಕೆದಾಟಿನ ಹೋರಾಟ ಧ್ವಜವನ್ನು ಮುಟ್ಟಲು ನಿಮ್ಮಿಂದ ಸಾಧ್ಯವಿಲ್ಲ. ಈ ನಡಿಗೆ ನಮ್ಮ ಪಕ್ಷಕ್ಕಲ್ಲ. ನೀರಿಗಾಗಿ. ಎರಡೂವರೆ ಕೋಟಿ ಜನರ ಬದುಕಿಗಾಗಿ” ಎಂದು ಸ್ಪಷ್ಟಪಡಿಸಿದರು.

“ಇದೊಂದು ಐತಿಹಾಸಿಕ ಕಾರ್ಯಕ್ರಮ. ಮನುಷ್ಯ ಎಷ್ಟು ದಿನ ಇರುತ್ತಾನೋ ಹೇಳಲು ಆಗಲ್ಲ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ” ಎಂದು ತಿಳಿಸಿದರು.

ಈ ಹೋರಾಟಕ್ಕೆ ತೊಂದರೆ ಮಾಡಬೇಕೆಂದು ತೊಂದರೆ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಟೀಕೆ-ಟಿಪ್ಪಣಿಯನ್ನು ನಮ್ಮ ನಡಿಗೆಗೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ನೀವು ರೈತರ ಮಕ್ಕಳು. ಈ ರಾಜ್ಯವನ್ನು ಪ್ರತಿನಿಧಿಸುತ್ತಿರಿ. ಆದರೆ ಹೋರಾಟವನ್ನು ಮುಗಿಸಬೇಕೆಂದು ನಿಷೇದಾಜ್ಞೆ ಜಾರಿ ಮಾಡಿದ್ದೀರಲ್ಲ, ಇಲ್ಲಿ ಭಾಗವಹಿಸಿರುವ ಧರ್ಮ ಪೀಠದ ಪ್ರತಿನಿಧಿಗಳನ್ನು, ಸಿದ್ದರಾಮಯ್ಯನವರನ್ನು, ಖರ್ಗೆಯವರನ್ನು, ನೂರು ಜನ ಶಾಸಕರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು.

ಹೋರಾಟಕ್ಕೆ ಬೆಂಬಲ ಕೊಡಬೇಡಿ ಎಂದು ನಿಮಗೆ ಕರೆ ಮಾಡಿ ಯಾರಾದರೂ ಹೇಳಬಹುದು. ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯದ ಮಕ್ಕಳು ವೇದಿಕೆ ಮೇಲೆ ಕೂತಿದ್ದಾರೆ ಎಂದು ಗುಡುಗಿದರು.

“ನಮ್ಮ ಕಾಂಗ್ರೆಸ್ ನಾಯಕರಲ್ಲಿ ಹೋರಾಟ ರಕ್ತಗತವಾಗಿದೆ. ಈ ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಹೋರಾಡಿದೆ. ಕಾಂಗ್ರೆಸ್‌ ನಾಯಕರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸ. ಈ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಬಡಜನರ ಅಭಿವೃದ್ಧಿಗಾಗಿ” ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಅವರು ಕಾವೇರಿ ನದಿಗೆ ಪೂಜೆ ಸಲ್ಲಿಸಿದರು. ಕಾವೇರಿ ನದಿಯಲ್ಲಿ ಮಿಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಪಾದಯಾತ್ರೆಯನ್ನು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ಈ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಕೊಡುತ್ತದೆ. ಹಲವು ಹಳ್ಳಿಗಳಿಗೆ ನೀರು ಕೊಡುತ್ತದೆ. ನಾಲ್ಕು ನೂರು ಮೆಗಾವ್ಯಾಟ್ ವಿದ್ಯುತ್‌ ಶಕ್ತಿ ಉತ್ಪಾದಿಸಬಹುದು. ಇದೊಂದು ದೊಡ್ಡ ಕೆಲಸ. ಈ ಯೋಜನೆಯ ವೆಚ್ಚ 9,000 ಕೋಟಿ ರೂ.ಗಳು. ಇಂತಹದೊಂದು ದೊಡ್ಡ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಪ್ರಾರಂಭಿಸಿತ್ತು” ಎಂದರು.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿದ್ದಾಗ ಈ ಯೋಜನೆ ರೂಪ ಪಡೆಯಿತು. ಡಿ.ಕೆ.ಶಿವಕುಮಾರ್‌ ಅವರು ನೀರಾವರಿ ಸಚಿವರಾಗಿದ್ದಾಗ ಮತ್ತಷ್ಟು ಸ್ಪಷ್ಟತೆ ಪಡೆಯಿತು. ಕರ್ನಾಟಕ ರಾಜ್ಯದ ಎಲ್ಲ ಜನತೆಯು ಈ ಯೋಜನೆಗೆ ಸಂಪೂರ್ಣವಾದ ಬೆಂಬಲವನ್ನು ಕೊಡುತ್ತದೆ. ಇದು ಎಲ್ಲರಿಗೂ ಬೇಕಾದ ಯೋಜನೆಯಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಾಗಾಗಿ ಪದೇ ಪದೇ ಕಚ್ಚಾಡುತ್ತಿದ್ದೇವೆ. 67 ಟಿಎಂಸಿ ನೀರು ಸಂಗ್ರಹಿಸುವ ಯೋಜನೆಯ ಪ್ರಯತ್ನಕ್ಕಾಗಿ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುವೆ. ಈ ಯೋಜನೆ ಕಾರ್ಯಗತವಾಗುವವರೆಗೂ ಬಿಡಬಾರದು. ಈ ಛಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಲ್ಲಿ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಾಲ್ಕೈದು ದಿನ ಪಾದಯಾತ್ರೆ ನಡೆಯಲಿದೆ. ಆರೋಗ್ಯ ಕಾಪಾಡಿಕೊಳ್ಳಿ. ಕೋವಿಡ್ ಸೂಚನೆಯನ್ನು ಪಾಲನೆ ಮಾಡಿರಿ. ನಮ್ಮ ವಿರುದ್ಧ ಏನಾದರೂ ಹೇಳಿಕೊಳ್ಳುವಂತಹದ್ದು ಆಗಬಾರದು. ಮಾಸ್ಕ್‌ ಧರಿಸಬೇಕು. ದೈಹಿಕ ಅಂತ ಕಾಪಾಡಿಕೊಂಡು ಸಾಗಬೇಕು. ಹೋರಾಟದ ಕ್ರೆಡಿಟ್‌ ಕಾಂಗ್ರೆಸ್‌ ನಾಯಕರಿಗೆ ಹೋಗುತ್ತದೆ ಎಂದು ಭಾವಿಸಿ ಈ ಹೋರಾಟವನ್ನು ವಿಫಲ ಮಾಡಲು ಯತ್ನಿಸುತ್ತಿದೆ. ಆದರೆ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, “ನಾಲ್ಕೈದು ವರ್ಷಗಳಲ್ಲಿ 260 ಟಿಎಂಸಿ ನೀರು ಹೆಚ್ಚುವರಿಯಾಗಿ ಸಮುದ್ರಕ್ಕೆ ಹೋಗಿದೆ. ಮಳೆಗಾಲದಲ್ಲಿ ಹೆಚ್ಚು ನೀರನ್ನು ನಾವು ಶೇಖರಣೆ ಮಾಡಿಕೊಳ್ಳುತ್ತೇವೆ. ಕುಡಿಯಲು ಬೆಂಗಳೂರಿಗೆ ನೀಡುತ್ತೇವೆ. ತಮಿಳುನಾಡಿನಲ್ಲಿ ನೀರಿಲ್ಲದಿದ್ದಾಗ ಅವರಿಗೂ ನೀಡುತ್ತೇವೆ. ಎರಡು ರಾಜ್ಯಕ್ಕೂ ಈ ಯೋಜನೆ ಸೂಕ್ತವಾಗಿದೆ” ಎಂದು ವಿವರಿಸಿದರು.

ಈ ಯೋಜನೆಯ ಕುರಿತು ತರಕಾರು ತೆಗೆಯಲು ಯಾವುದೇ ದಾಖಲಾತಿ, ಆಧಾರಗಳಿಲ್ಲ. ತಮಿಳುನಾಡಿದವರು ಕ್ಯಾತೆ ತೆಗೆದಯುವುದು ಸರಿ, ಇವರು (ಬಿಜೆಪಿಯವರು) ಯಾಕೆ ಅವರ ಜೊತೆ ಸೇರಿಕೊಂಡಿದ್ದಾರೆ. ಅಣ್ಣಾ ಮಲೈ (ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ) ಕರ್ನಾಟಕದಲ್ಲಿ ಇದ್ದ ಅಧಿಕಾರಿ. ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲ ನೀಡುವುದು ಏನನ್ನು ಸೂಚಿಸುತ್ತದೆ. ನಿಮ್ಮ ಶಕ್ತಿಯನ್ನು ವಿಸ್ತರಿಸಲು ಅಲ್ಲಿಗೆ ಸಪೋರ್ಟ್ ಮಾಡುತ್ತೀರಿ. ಈ ಯೋಜನೆ ಮಾಡಬಾರದು ಎಂಬುದು ಬಿಜೆಪಿಯ ಉದ್ದೇಶವಾಗಿದೆ. ಇದು ಕನ್ನಡ ನಾಡಿಗೆ ಮಾಡುವ ದ್ರೋಹ ಅಲ್ಲವಾ? ಅದಕ್ಕಾಗಿ ಈ ಪಾದಯಾತ್ರೆ ಮಾಡಬಾರದಾ? ಎಂದು ಪ್ರಶ್ನಿಸಿದರು.

“ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಿ, ಗ್ಲೌಸ್ ಹಾಕಿಕೊಳ್ಳಿ. ಸ್ಯಾನಿಟೈಸ್ ಮಾಡಿಕೊಳ್ಳಿ. ಮಾಸ್ಕ್‌ ಹಾಕಿಕೊಳ್ಳದವರನ್ನು ವಾಪಸ್‌ ಕಳಿಸುತ್ತೇವೆ. ಸರ್ಕಾರದ ನಿಯಮಗಳಿಗೆ ಗೌರವ ಕೊಡಬೇಕು. ಆ ಜವಾಬ್ದಾರಿಯನ್ನು ನಿರ್ವಹಿಸಿ ಮುನ್ನಡೆಯಬೇಕು” ಎಂದು ಸೂಚಿಸಿದರು.

ಸಾಧುಕೋಕಿಲ ಅವರ ತಂಡವು ಮೇಕೆದಾಟು ಕಾವೇರಿ ಗೀತೆಯನ್ನು ಹಾಡಿತು. “ಹರಿಯುತಿಹಳು ನಮಗಾಗಿ. ಹೆಜ್ಜೆ ಹಾಕುತ್ತೇವೆ ನಾವು, ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿಗಾಗಿ ಹೆಜ್ಜೆ. ನಮ್ಮ ನೀರಿಗಾಗಿ ಹೆಜ್ಜೆ. ನಾಡಿಗಾಗಿ ಹೆಜ್ಜೆ. ನಾಡ ಜನತೆಗಾಗಿ ಹೆಜ್ಜೆ. ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿ ತಾಯಿಗಾಗಿ ಹೆಜ್ಜೆ” ಎಂದು ಸಾಧು ಕೋಕಿಲ ತಂಡ ಹಾಡಿತು.

ಕಾಂಗ್ರೆಸ್ ನಾಯಕಿ, ಹಿರಿಯ ನಟಿ ಜಯಮಾಲ, ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್, ನಟ ದುನಿಯಾ ವಿಜಯ್‌ ಭಾಗಿಯಾಗಿ ಚಿತ್ರರಂಗದ ಪರ ಬೆಂಬಲ ಸೂಚಿಸಿದರು.

ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ ಮಾಡಿದರು. ಸ್ವಾಗತ ಹಾಗೂ ಪ್ರಸ್ತಾವಿಕ ಭಾಷಣವನ್ನು ಡಿ.ಕೆ.ಸುರೇಶ್‌ ನೆರವೇರಿಸಿದರು. ಕೆಪಿಸಿಸಿ ಮಾಜಿ ಅಧ್ಯಕ್ಷರಾದ, ಆರ್‌.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್‌‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌, ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಸಲೀಂ ಮಹಮದ್, ಈಶ್ವರ್‌ ಖಂಡ್ರೆ, ಹರಿಪ್ರಸಾದ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಮೋಟಮ್ಮ, ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ರಮೇಶ್‌ಕುಮಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...