Homeಕರ್ನಾಟಕಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮೇಕೆದಾಟು ಪಾದಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದರು.

- Advertisement -
- Advertisement -

“ಹರಿಯೋ ನೀರು, ಉರಿಯೋ ಸೂರ್ಯನನ್ನು ತಡೆಯಲಾಗಲ್ಲ. ಹಾಗೆಯೇ ಮೇಕೆದಾಟು ಅಣೆಕಟ್ಟು ಜಾರಿಗಾಗಿ ನಡೆಯುತ್ತಿರುವ ಹೋರಾಟವನ್ನು ಯಾರಿಂದಲೂ ನಿಲ್ಲಿಸಲಾಗಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗುಡುಗಿದರು.

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿತು. ಕನಕಪುರ ತಾಲ್ಲೂಕಿನ ‘ಸಂಗಮ’ದಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಕಾವೇರಿ ಹೋರಾಟಕ್ಕೆ ಜಯವಾಗಲಿ”, “ಭಾರತ್‌ ಮಾತಾಕೀ ಜೈ” ಎಂದು ಮಾತು ಆರಂಭಿಸಿದ ಅವರು, “ಇಲ್ಲಿ ಹಾರಾಡುತ್ತಿರುವ ಭಾರತದ ಧ್ವಜ, ಕರ್ನಾಟಕದ ಧ್ವಜ, ಕಾಂಗ್ರೆಸ್‌ ಧ್ವಜ, ಈ ಕಾವೇರಿ ನದಿಯ ಮೇಕೆದಾಟಿನ ಹೋರಾಟ ಧ್ವಜವನ್ನು ಮುಟ್ಟಲು ನಿಮ್ಮಿಂದ ಸಾಧ್ಯವಿಲ್ಲ. ಈ ನಡಿಗೆ ನಮ್ಮ ಪಕ್ಷಕ್ಕಲ್ಲ. ನೀರಿಗಾಗಿ. ಎರಡೂವರೆ ಕೋಟಿ ಜನರ ಬದುಕಿಗಾಗಿ” ಎಂದು ಸ್ಪಷ್ಟಪಡಿಸಿದರು.

“ಇದೊಂದು ಐತಿಹಾಸಿಕ ಕಾರ್ಯಕ್ರಮ. ಮನುಷ್ಯ ಎಷ್ಟು ದಿನ ಇರುತ್ತಾನೋ ಹೇಳಲು ಆಗಲ್ಲ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ” ಎಂದು ತಿಳಿಸಿದರು.

ಈ ಹೋರಾಟಕ್ಕೆ ತೊಂದರೆ ಮಾಡಬೇಕೆಂದು ತೊಂದರೆ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಟೀಕೆ-ಟಿಪ್ಪಣಿಯನ್ನು ನಮ್ಮ ನಡಿಗೆಗೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ನೀವು ರೈತರ ಮಕ್ಕಳು. ಈ ರಾಜ್ಯವನ್ನು ಪ್ರತಿನಿಧಿಸುತ್ತಿರಿ. ಆದರೆ ಹೋರಾಟವನ್ನು ಮುಗಿಸಬೇಕೆಂದು ನಿಷೇದಾಜ್ಞೆ ಜಾರಿ ಮಾಡಿದ್ದೀರಲ್ಲ, ಇಲ್ಲಿ ಭಾಗವಹಿಸಿರುವ ಧರ್ಮ ಪೀಠದ ಪ್ರತಿನಿಧಿಗಳನ್ನು, ಸಿದ್ದರಾಮಯ್ಯನವರನ್ನು, ಖರ್ಗೆಯವರನ್ನು, ನೂರು ಜನ ಶಾಸಕರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು.

ಹೋರಾಟಕ್ಕೆ ಬೆಂಬಲ ಕೊಡಬೇಡಿ ಎಂದು ನಿಮಗೆ ಕರೆ ಮಾಡಿ ಯಾರಾದರೂ ಹೇಳಬಹುದು. ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯದ ಮಕ್ಕಳು ವೇದಿಕೆ ಮೇಲೆ ಕೂತಿದ್ದಾರೆ ಎಂದು ಗುಡುಗಿದರು.

“ನಮ್ಮ ಕಾಂಗ್ರೆಸ್ ನಾಯಕರಲ್ಲಿ ಹೋರಾಟ ರಕ್ತಗತವಾಗಿದೆ. ಈ ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಹೋರಾಡಿದೆ. ಕಾಂಗ್ರೆಸ್‌ ನಾಯಕರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸ. ಈ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಬಡಜನರ ಅಭಿವೃದ್ಧಿಗಾಗಿ” ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಅವರು ಕಾವೇರಿ ನದಿಗೆ ಪೂಜೆ ಸಲ್ಲಿಸಿದರು. ಕಾವೇರಿ ನದಿಯಲ್ಲಿ ಮಿಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಪಾದಯಾತ್ರೆಯನ್ನು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ಈ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಕೊಡುತ್ತದೆ. ಹಲವು ಹಳ್ಳಿಗಳಿಗೆ ನೀರು ಕೊಡುತ್ತದೆ. ನಾಲ್ಕು ನೂರು ಮೆಗಾವ್ಯಾಟ್ ವಿದ್ಯುತ್‌ ಶಕ್ತಿ ಉತ್ಪಾದಿಸಬಹುದು. ಇದೊಂದು ದೊಡ್ಡ ಕೆಲಸ. ಈ ಯೋಜನೆಯ ವೆಚ್ಚ 9,000 ಕೋಟಿ ರೂ.ಗಳು. ಇಂತಹದೊಂದು ದೊಡ್ಡ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಪ್ರಾರಂಭಿಸಿತ್ತು” ಎಂದರು.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿದ್ದಾಗ ಈ ಯೋಜನೆ ರೂಪ ಪಡೆಯಿತು. ಡಿ.ಕೆ.ಶಿವಕುಮಾರ್‌ ಅವರು ನೀರಾವರಿ ಸಚಿವರಾಗಿದ್ದಾಗ ಮತ್ತಷ್ಟು ಸ್ಪಷ್ಟತೆ ಪಡೆಯಿತು. ಕರ್ನಾಟಕ ರಾಜ್ಯದ ಎಲ್ಲ ಜನತೆಯು ಈ ಯೋಜನೆಗೆ ಸಂಪೂರ್ಣವಾದ ಬೆಂಬಲವನ್ನು ಕೊಡುತ್ತದೆ. ಇದು ಎಲ್ಲರಿಗೂ ಬೇಕಾದ ಯೋಜನೆಯಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಾಗಾಗಿ ಪದೇ ಪದೇ ಕಚ್ಚಾಡುತ್ತಿದ್ದೇವೆ. 67 ಟಿಎಂಸಿ ನೀರು ಸಂಗ್ರಹಿಸುವ ಯೋಜನೆಯ ಪ್ರಯತ್ನಕ್ಕಾಗಿ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುವೆ. ಈ ಯೋಜನೆ ಕಾರ್ಯಗತವಾಗುವವರೆಗೂ ಬಿಡಬಾರದು. ಈ ಛಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಲ್ಲಿ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಾಲ್ಕೈದು ದಿನ ಪಾದಯಾತ್ರೆ ನಡೆಯಲಿದೆ. ಆರೋಗ್ಯ ಕಾಪಾಡಿಕೊಳ್ಳಿ. ಕೋವಿಡ್ ಸೂಚನೆಯನ್ನು ಪಾಲನೆ ಮಾಡಿರಿ. ನಮ್ಮ ವಿರುದ್ಧ ಏನಾದರೂ ಹೇಳಿಕೊಳ್ಳುವಂತಹದ್ದು ಆಗಬಾರದು. ಮಾಸ್ಕ್‌ ಧರಿಸಬೇಕು. ದೈಹಿಕ ಅಂತ ಕಾಪಾಡಿಕೊಂಡು ಸಾಗಬೇಕು. ಹೋರಾಟದ ಕ್ರೆಡಿಟ್‌ ಕಾಂಗ್ರೆಸ್‌ ನಾಯಕರಿಗೆ ಹೋಗುತ್ತದೆ ಎಂದು ಭಾವಿಸಿ ಈ ಹೋರಾಟವನ್ನು ವಿಫಲ ಮಾಡಲು ಯತ್ನಿಸುತ್ತಿದೆ. ಆದರೆ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, “ನಾಲ್ಕೈದು ವರ್ಷಗಳಲ್ಲಿ 260 ಟಿಎಂಸಿ ನೀರು ಹೆಚ್ಚುವರಿಯಾಗಿ ಸಮುದ್ರಕ್ಕೆ ಹೋಗಿದೆ. ಮಳೆಗಾಲದಲ್ಲಿ ಹೆಚ್ಚು ನೀರನ್ನು ನಾವು ಶೇಖರಣೆ ಮಾಡಿಕೊಳ್ಳುತ್ತೇವೆ. ಕುಡಿಯಲು ಬೆಂಗಳೂರಿಗೆ ನೀಡುತ್ತೇವೆ. ತಮಿಳುನಾಡಿನಲ್ಲಿ ನೀರಿಲ್ಲದಿದ್ದಾಗ ಅವರಿಗೂ ನೀಡುತ್ತೇವೆ. ಎರಡು ರಾಜ್ಯಕ್ಕೂ ಈ ಯೋಜನೆ ಸೂಕ್ತವಾಗಿದೆ” ಎಂದು ವಿವರಿಸಿದರು.

ಈ ಯೋಜನೆಯ ಕುರಿತು ತರಕಾರು ತೆಗೆಯಲು ಯಾವುದೇ ದಾಖಲಾತಿ, ಆಧಾರಗಳಿಲ್ಲ. ತಮಿಳುನಾಡಿದವರು ಕ್ಯಾತೆ ತೆಗೆದಯುವುದು ಸರಿ, ಇವರು (ಬಿಜೆಪಿಯವರು) ಯಾಕೆ ಅವರ ಜೊತೆ ಸೇರಿಕೊಂಡಿದ್ದಾರೆ. ಅಣ್ಣಾ ಮಲೈ (ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ) ಕರ್ನಾಟಕದಲ್ಲಿ ಇದ್ದ ಅಧಿಕಾರಿ. ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲ ನೀಡುವುದು ಏನನ್ನು ಸೂಚಿಸುತ್ತದೆ. ನಿಮ್ಮ ಶಕ್ತಿಯನ್ನು ವಿಸ್ತರಿಸಲು ಅಲ್ಲಿಗೆ ಸಪೋರ್ಟ್ ಮಾಡುತ್ತೀರಿ. ಈ ಯೋಜನೆ ಮಾಡಬಾರದು ಎಂಬುದು ಬಿಜೆಪಿಯ ಉದ್ದೇಶವಾಗಿದೆ. ಇದು ಕನ್ನಡ ನಾಡಿಗೆ ಮಾಡುವ ದ್ರೋಹ ಅಲ್ಲವಾ? ಅದಕ್ಕಾಗಿ ಈ ಪಾದಯಾತ್ರೆ ಮಾಡಬಾರದಾ? ಎಂದು ಪ್ರಶ್ನಿಸಿದರು.

“ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಿ, ಗ್ಲೌಸ್ ಹಾಕಿಕೊಳ್ಳಿ. ಸ್ಯಾನಿಟೈಸ್ ಮಾಡಿಕೊಳ್ಳಿ. ಮಾಸ್ಕ್‌ ಹಾಕಿಕೊಳ್ಳದವರನ್ನು ವಾಪಸ್‌ ಕಳಿಸುತ್ತೇವೆ. ಸರ್ಕಾರದ ನಿಯಮಗಳಿಗೆ ಗೌರವ ಕೊಡಬೇಕು. ಆ ಜವಾಬ್ದಾರಿಯನ್ನು ನಿರ್ವಹಿಸಿ ಮುನ್ನಡೆಯಬೇಕು” ಎಂದು ಸೂಚಿಸಿದರು.

ಸಾಧುಕೋಕಿಲ ಅವರ ತಂಡವು ಮೇಕೆದಾಟು ಕಾವೇರಿ ಗೀತೆಯನ್ನು ಹಾಡಿತು. “ಹರಿಯುತಿಹಳು ನಮಗಾಗಿ. ಹೆಜ್ಜೆ ಹಾಕುತ್ತೇವೆ ನಾವು, ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿಗಾಗಿ ಹೆಜ್ಜೆ. ನಮ್ಮ ನೀರಿಗಾಗಿ ಹೆಜ್ಜೆ. ನಾಡಿಗಾಗಿ ಹೆಜ್ಜೆ. ನಾಡ ಜನತೆಗಾಗಿ ಹೆಜ್ಜೆ. ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿ ತಾಯಿಗಾಗಿ ಹೆಜ್ಜೆ” ಎಂದು ಸಾಧು ಕೋಕಿಲ ತಂಡ ಹಾಡಿತು.

ಕಾಂಗ್ರೆಸ್ ನಾಯಕಿ, ಹಿರಿಯ ನಟಿ ಜಯಮಾಲ, ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್, ನಟ ದುನಿಯಾ ವಿಜಯ್‌ ಭಾಗಿಯಾಗಿ ಚಿತ್ರರಂಗದ ಪರ ಬೆಂಬಲ ಸೂಚಿಸಿದರು.

ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ ಮಾಡಿದರು. ಸ್ವಾಗತ ಹಾಗೂ ಪ್ರಸ್ತಾವಿಕ ಭಾಷಣವನ್ನು ಡಿ.ಕೆ.ಸುರೇಶ್‌ ನೆರವೇರಿಸಿದರು. ಕೆಪಿಸಿಸಿ ಮಾಜಿ ಅಧ್ಯಕ್ಷರಾದ, ಆರ್‌.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್‌‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌, ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಸಲೀಂ ಮಹಮದ್, ಈಶ್ವರ್‌ ಖಂಡ್ರೆ, ಹರಿಪ್ರಸಾದ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಮೋಟಮ್ಮ, ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ರಮೇಶ್‌ಕುಮಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...