Homeಮುಖಪುಟಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

’ಯಡಿಯೂರಪ್ಪ ಅವರು ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’- ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ‌ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.

’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...