Homeಮುಖಪುಟಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

’ಯಡಿಯೂರಪ್ಪ ಅವರು ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’- ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ‌ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.

’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...