Homeಮುಖಪುಟಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

’ಯಡಿಯೂರಪ್ಪ ಅವರು ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’- ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ‌ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.

’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...