Homeಮುಖಪುಟಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

’ಯಡಿಯೂರಪ್ಪ ಅವರು ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’- ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ‌ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.

’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...