Homeಅಂತರಾಷ್ಟ್ರೀಯಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್‌ಗೆ ವಿಚ್ಛೇಧನ ನೀಡಲು ಮೆಲೆನಿಯಾ, ಟ್ರಂಪ್ ಶ್ವೇತ ಭವನದ ಕಚೇರಿಯಿಂದ ಹೊರ ಬರುವ "ಪ್ರತಿ ನಿಮಿಷವನ್ನು ಎಣಿಸುತ್ತಿದ್ದಾರೆ" ಎಂದು ಅವರ ಮಾಜಿ ಸಹಾಯಕ ಹೇಳಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತು, ಡೊನಾಲ್ಡ್ ಟ್ರಂಪ್ ಶ್ವೇತಭವನದಿಂದ ಹೊರಬರುತ್ತಿರುವ ಸಂದರ್ಭದಲ್ಲಿ ಅವರು ತಮ್ಮ ಪತ್ನಿ ಮೆಲೆನಿಯಾ ಅವರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಮೆಲೆನಿಯಾ ವಿಚ್ಛೇಧನ ನೀಡಲಿದ್ದಾರೆ ಎಂದು ಅವರ ಮಾಜಿ ಸಹಾಯಕರೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ.

ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್‌ಗೆ ವಿಚ್ಛೇಧನ ನೀಡಲು ಮೆಲೆನಿಯಾ, ಟ್ರಂಪ್ ಶ್ವೇತ ಭವನದ ಕಚೇರಿಯಿಂದ ಹೊರ ಬರುವ “ಪ್ರತಿ ನಿಮಿಷವನ್ನು ಎಣಿಸುತ್ತಿದ್ದಾರೆ” ಎಂದು ಅವರ ಮಾಜಿ ಸಹಾಯಕ ಹೇಳಿದ್ದಾರೆ.

’ಡೊನಾಲ್ಡ್ ಮತ್ತು ಮೆಲೆನಿಯಾ ಟ್ರಂಪ್ ಅವರ 15 ವರ್ಷಗಳ ವಿವಾಹ ಸಂಬಂಧ ಮುಗಿದಿದೆ. “ಮೆಲಾನಿಯಾ ಅವರು ಟ್ರಂಪ್ ಕಚೇರಿಯಿಂದ ಹೊರ ಬರುವ ಪ್ರತಿ ನಿಮಿಷವನ್ನು ಎಣಿಸುತ್ತಿದ್ದಾರೆ. ಅವರು ವಿಚ್ಛೇಧನ ಪಡೆಯಬಹುದು” ಎಂದು ಒಮರೋಸಾ ಮನಿಗಾಲ್ಟ್ ನ್ಯೂಮನ್ ಹೇಳಿದ್ದಾರೆ.

ಮೆಲೆನಿಯಾ ಟ್ರಂಪ್ ಈ ಮೊದಲೇ ವಿಚ್ಚೇಧನ ನೀಡಬಹುದಿತ್ತಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಹಾಯಕ “ಡೊನಾಲ್ಡ್ ಟ್ರಂಪ್ ಅವರು ಅಧಿಕಾರದಲ್ಲಿದ್ದಾಗ, ಆಕೆ ವಿಚ್ಛೇಧನ ನೀಡಿದ್ದರೇ ಆಕೆಯನ್ನು “ಶಿಕ್ಷಿಸಲು” ಟ್ರಂಪ್ ಯಾವುದಾದರೂ ಒಂದು ಮಾರ್ಗವನ್ನು ಕಂಡುಕೊಳ್ಳುತ್ತಿದ್ದರು” ಎಂದಿದ್ದಾರೆ ಎಂದು ಡೈಲಿ ಮೇಲ್ ಉಲ್ಲೇಖಿಸಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ಇನ್ನೊಬ್ಬ ಮಾಜಿ ಸಹಾಯಕ ಸ್ಟೆಫನಿ ವೋಲ್ಕಾಫ್, ಡೊನಾಲ್ಡ್ ಮತ್ತು ಮೆಲೆನಿಯಾ ಟ್ರಂಪ್ ಅವರು ಶ್ವೇತಭವನದಲ್ಲಿ ಪ್ರತ್ಯೇಕ ಮಲಗುವ ಕೋಣೆಗಳನ್ನು ಹೊಂದಿದ್ದು, ಅವರದ್ದು,”ವ್ಯವಹಾರಿಕೆ ಮದುವೆ ಅಷ್ಟೇ” ಎಂದಿದ್ದಾರೆ.

ಜೊತೆಗೆ ಡೊನಾಲ್ಡ್ ಟ್ರಂಪ್ ಅವರ ಸಂಪತ್ತಿನ ಸಮಾನ ಪಾಲು ಮಗ ಬ್ಯಾರನ್‌ಗೂ ಬರಬೇಕು ಎಂದು ಮೆಲೆನಿಯಾ ಟ್ರಂಪ್ ಒಪ್ಪಂದದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಸ್ಟೆಫನಿ ವೋಲ್ಕಾಫ್ ಹೇಳಿದ್ದಾರೆ.

ಇನ್ನು 2016 ರಲ್ಲಿ, ಡೊನಾಲ್ಡ್ ಟ್ರಂಪ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗ ಮೆಲೆನಿಯಾ ಟ್ರಂಪ್ ಕಣ್ಣೀರು ಸುರಿಸಿದ್ದರು. ಆಗ ಆಕೆಯ ಸ್ನೇಹಿತ “ಟ್ರಂಪ್ ಗೆಲ್ಲುತ್ತಾರೆಂದು ಅವಳು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಹೇಳಿದ್ದರು.

ಇತ್ತ ಡೊನಾಲ್ಡ್ ಟ್ರಂಪ್ ತಮ್ಮ ಸೋಲನ್ನು ಒಪ್ಪಿಕೊಳ್ಳಬೇಕು ಮತ್ತು ಶ್ವೇತ ಭವನದಿಂದ ಒಳ್ಳೆಯ ನಿರ್ಗಮನವನ್ನು ಪಡೆಯಬೇಕು ಎಂದು ಪತ್ನಿ ಮೆಲೆನಿಯಾ ಟ್ರಂಪ್ ಸೇರಿದಂತೆ ಟ್ರಂಪ್ ಆಂತರಿಕ ವಲಯ ಟ್ರಂಪ್ ಮೇಲೆ ಒತ್ತಡ ಹಾಕುತ್ತಿದೆ ಎಂದು ವರದಿಗಳು ತಿಳಿಸಿವೆ.

ಚುನಾವಣೆಯ ಬಗ್ಗೆ ಮೆಲೆನಿಯಾ ಬಹಿರಂಗವಾಗಿ ಪ್ರತಿಕ್ರಿಯಿಸದಿದ್ದರೂ, ಅವರು ತಮ್ಮ ಅಭಿಪ್ರಾಯವನ್ನು ಖಾಸಗಿಯಾಗಿ ತೋರಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...