Homeಅಂತರಾಷ್ಟ್ರೀಯಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್‌ಗೆ ವಿಚ್ಛೇಧನ ನೀಡಲು ಮೆಲೆನಿಯಾ, ಟ್ರಂಪ್ ಶ್ವೇತ ಭವನದ ಕಚೇರಿಯಿಂದ ಹೊರ ಬರುವ "ಪ್ರತಿ ನಿಮಿಷವನ್ನು ಎಣಿಸುತ್ತಿದ್ದಾರೆ" ಎಂದು ಅವರ ಮಾಜಿ ಸಹಾಯಕ ಹೇಳಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತು, ಡೊನಾಲ್ಡ್ ಟ್ರಂಪ್ ಶ್ವೇತಭವನದಿಂದ ಹೊರಬರುತ್ತಿರುವ ಸಂದರ್ಭದಲ್ಲಿ ಅವರು ತಮ್ಮ ಪತ್ನಿ ಮೆಲೆನಿಯಾ ಅವರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಮೆಲೆನಿಯಾ ವಿಚ್ಛೇಧನ ನೀಡಲಿದ್ದಾರೆ ಎಂದು ಅವರ ಮಾಜಿ ಸಹಾಯಕರೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ.

ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್‌ಗೆ ವಿಚ್ಛೇಧನ ನೀಡಲು ಮೆಲೆನಿಯಾ, ಟ್ರಂಪ್ ಶ್ವೇತ ಭವನದ ಕಚೇರಿಯಿಂದ ಹೊರ ಬರುವ “ಪ್ರತಿ ನಿಮಿಷವನ್ನು ಎಣಿಸುತ್ತಿದ್ದಾರೆ” ಎಂದು ಅವರ ಮಾಜಿ ಸಹಾಯಕ ಹೇಳಿದ್ದಾರೆ.

’ಡೊನಾಲ್ಡ್ ಮತ್ತು ಮೆಲೆನಿಯಾ ಟ್ರಂಪ್ ಅವರ 15 ವರ್ಷಗಳ ವಿವಾಹ ಸಂಬಂಧ ಮುಗಿದಿದೆ. “ಮೆಲಾನಿಯಾ ಅವರು ಟ್ರಂಪ್ ಕಚೇರಿಯಿಂದ ಹೊರ ಬರುವ ಪ್ರತಿ ನಿಮಿಷವನ್ನು ಎಣಿಸುತ್ತಿದ್ದಾರೆ. ಅವರು ವಿಚ್ಛೇಧನ ಪಡೆಯಬಹುದು” ಎಂದು ಒಮರೋಸಾ ಮನಿಗಾಲ್ಟ್ ನ್ಯೂಮನ್ ಹೇಳಿದ್ದಾರೆ.

ಮೆಲೆನಿಯಾ ಟ್ರಂಪ್ ಈ ಮೊದಲೇ ವಿಚ್ಚೇಧನ ನೀಡಬಹುದಿತ್ತಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಹಾಯಕ “ಡೊನಾಲ್ಡ್ ಟ್ರಂಪ್ ಅವರು ಅಧಿಕಾರದಲ್ಲಿದ್ದಾಗ, ಆಕೆ ವಿಚ್ಛೇಧನ ನೀಡಿದ್ದರೇ ಆಕೆಯನ್ನು “ಶಿಕ್ಷಿಸಲು” ಟ್ರಂಪ್ ಯಾವುದಾದರೂ ಒಂದು ಮಾರ್ಗವನ್ನು ಕಂಡುಕೊಳ್ಳುತ್ತಿದ್ದರು” ಎಂದಿದ್ದಾರೆ ಎಂದು ಡೈಲಿ ಮೇಲ್ ಉಲ್ಲೇಖಿಸಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ಇನ್ನೊಬ್ಬ ಮಾಜಿ ಸಹಾಯಕ ಸ್ಟೆಫನಿ ವೋಲ್ಕಾಫ್, ಡೊನಾಲ್ಡ್ ಮತ್ತು ಮೆಲೆನಿಯಾ ಟ್ರಂಪ್ ಅವರು ಶ್ವೇತಭವನದಲ್ಲಿ ಪ್ರತ್ಯೇಕ ಮಲಗುವ ಕೋಣೆಗಳನ್ನು ಹೊಂದಿದ್ದು, ಅವರದ್ದು,”ವ್ಯವಹಾರಿಕೆ ಮದುವೆ ಅಷ್ಟೇ” ಎಂದಿದ್ದಾರೆ.

ಜೊತೆಗೆ ಡೊನಾಲ್ಡ್ ಟ್ರಂಪ್ ಅವರ ಸಂಪತ್ತಿನ ಸಮಾನ ಪಾಲು ಮಗ ಬ್ಯಾರನ್‌ಗೂ ಬರಬೇಕು ಎಂದು ಮೆಲೆನಿಯಾ ಟ್ರಂಪ್ ಒಪ್ಪಂದದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಸ್ಟೆಫನಿ ವೋಲ್ಕಾಫ್ ಹೇಳಿದ್ದಾರೆ.

ಇನ್ನು 2016 ರಲ್ಲಿ, ಡೊನಾಲ್ಡ್ ಟ್ರಂಪ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗ ಮೆಲೆನಿಯಾ ಟ್ರಂಪ್ ಕಣ್ಣೀರು ಸುರಿಸಿದ್ದರು. ಆಗ ಆಕೆಯ ಸ್ನೇಹಿತ “ಟ್ರಂಪ್ ಗೆಲ್ಲುತ್ತಾರೆಂದು ಅವಳು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಹೇಳಿದ್ದರು.

ಇತ್ತ ಡೊನಾಲ್ಡ್ ಟ್ರಂಪ್ ತಮ್ಮ ಸೋಲನ್ನು ಒಪ್ಪಿಕೊಳ್ಳಬೇಕು ಮತ್ತು ಶ್ವೇತ ಭವನದಿಂದ ಒಳ್ಳೆಯ ನಿರ್ಗಮನವನ್ನು ಪಡೆಯಬೇಕು ಎಂದು ಪತ್ನಿ ಮೆಲೆನಿಯಾ ಟ್ರಂಪ್ ಸೇರಿದಂತೆ ಟ್ರಂಪ್ ಆಂತರಿಕ ವಲಯ ಟ್ರಂಪ್ ಮೇಲೆ ಒತ್ತಡ ಹಾಕುತ್ತಿದೆ ಎಂದು ವರದಿಗಳು ತಿಳಿಸಿವೆ.

ಚುನಾವಣೆಯ ಬಗ್ಗೆ ಮೆಲೆನಿಯಾ ಬಹಿರಂಗವಾಗಿ ಪ್ರತಿಕ್ರಿಯಿಸದಿದ್ದರೂ, ಅವರು ತಮ್ಮ ಅಭಿಪ್ರಾಯವನ್ನು ಖಾಸಗಿಯಾಗಿ ತೋರಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...