Homeಕರ್ನಾಟಕವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ...

ವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ ನೋಟಿಸ್!

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯರೊಬ್ಬರು ವನ್ಯಜೀವಿಗಳ ಸೂಕ್ಷ್ಮ ಪ್ರದೇಶದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಭಾರೀ ಫಾರ್ಮ್ ಹೌಸ್‌ ನಿರ್ಮಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ, ರಾಜ್ಯ ವನ್ಯಜೀವಿ ಬೋರ್ಡ್(SBWL) ಸದಸ್ಯ ದಿನೇಶ್ ಕುಮಾರ್ ಸಿಂಘಿ ಎಂಬುವವರು ಫಾರ್ಮ್ ಹೌಸ್‌‌ ನಿರ್ಮಿಸುತ್ತಿದ್ದಾರೆ ಎನ್ನಲಾಗಿರುವ ಬಗ್ಗೆ ಉತ್ತರಿಸುವಂತೆ ಭೂಮಾಲಿಕ ಕೆ.ಎಸ್ ನರಸಿಂಹ ಮೂರ್ತಿ ಅವರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡಿದೆ.

ಎನ್ ಬೆಲತೂರ್ ಗ್ರಾಮ, ಎಚ್ ಡಿ ಕೋಟೆ ತಾಲೂಕಿನ ಸರ್ವೆ ಸಂಖ್ಯೆ 142 ಮತ್ತು 144 ರ ಕೆ ಎಸ್ ನರಸಿಂಹ ಮೂರ್ತಿ ಎಂಬವರ ಭೂಮಿಯಲ್ಲಿ ರಾಜ್ಯ ವನ್ಯಜೀವಿ ಸದಸ್ಯ ದಿನೇಶ್ ಕುಮಾರ್ ಸಿಂಘಿ ಅವರು ವಿಶಾಲವಾದ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೇ ಅವುಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿ ವಲಯ ಅರಣ್ಯಾಧಿಕಾರಿ ಅವರಿಗೆ ಏಳು ದಿನದಲ್ಲಿ ಉತ್ತರಿಸುವಂತೆ ನೋಟಿಸ್‌ ನೀಡಿದ್ದಾರೆ.

ಈ ನಿರ್ಮಾಣ ಚಟುವಟಿಕೆ ನಡೆಯುತ್ತಿರುವ ಪ್ರದೇಶ ಪರಿಸರ ಸೂಕ್ಷ್ಮ ವಲಯ (ESZ) ಕ್ಕೆ ಸೇರಿದ್ದು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅಲ್ಲಿ ಯಾವುದೇ ಚಟುವಟಿಕೆ ನಡೆಯುಂತಿಲ್ಲ. ಅಲ್ಲದೆ ಆ ಪ್ರದೇಶವು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಫರ್‌ಝೂನ್ ವ್ಯಾಪ್ತಿಯಲ್ಲಿದೆ, ಜೊತೆಗೆ ಅದು ಆನೆಗಳ ಆವಾಸ ಸ್ಥಾನವಾಗಿರುವುದರಿಂದ ಆನೆಗಳ ಸಂರಕ್ಷಿತ ಪ್ರದೇಶ ಕೂಡಾ ಆಗಿದೆ ಎನ್ನಲಾಗಿದೆ.

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಯಾವುದೇ ಹೊಸ ನಿರ್ಮಾಣ ಕಾರ್ಯಗಳನ್ನು ನಡೆಸುವ ಮೊದಲು ಅರಣ್ಯ ಅಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ದಿನೇಶ್ ಕುಮಾರ್ ಆಗಲಿ ಭೂಮಿ ಮಾಲೀಕರಾಗಲಿ ಅಂತಹ ಅನುಮತಿ ಪಡೆದಿಲ್ಲ.

ಇದೆಲ್ಲವನ್ನೂ ಮೀರಿ ಸ್ವತಃ ರಾಜ್ಯ ವನ್ಯ ಜೀವಿ ಬೋರ್ಡ್ ಇದರ ಸದಸ್ಯರಾದ ದಿನೇಶ್ ಕುಮಾರ್ ಸಿಂಘಿ ನಿರ್ಮಾಣ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಮಾಜಿ ವನ್ಯಜೀವಿ ಬೋರ್ಡ್ ಸದಸ್ಯರಾದ ಜೋಸೆಫ್ ಹೂವರ್‌, “ದಿನೇಶ್ ಕುಮಾರ್ ಸಿಂಘಿ ಅವರು ಗಣಿ ಉದ್ಯಮಿಯಾಗಿದ್ದು, ಗಣಿ ಉದ್ಯಮಿಗಳು ವನ್ಯಜೀವಿ ಬೋರ್ಡ್‌ನಲ್ಲಿ ಇರಬಾರದೆಂದು ನಿಯಮವಿದೆ. ಸುಪ್ರೀಂ ಆದೇಶವನ್ನು ಮೀರಿ ಅಲ್ಲಿ ಫಾರ್ಮ್ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ. ಅಧಿಕಾರ, ಹಣವಿದೆಯೆಂದು ಸ್ಥಳೀಯ ಅರಣ್ಯ ಅಧಿಕಾರಿಯ ನಿರಪೇಕ್ಷಣ ದೃಡೀಕರಣ  ಪತ್ರ ಪಡೆಯದೆ ನಿರ್ಮಾಣ ಕಾರ್ಯನಡೆಯುತ್ತಿದೆ. ಇದನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ತಡೆಯಬೇಕು” ಎಂದು ಹೇಳಿದ್ದಾರೆ.


ಓದಿ: ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...