Homeಕರ್ನಾಟಕವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ...

ವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ ನೋಟಿಸ್!

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯರೊಬ್ಬರು ವನ್ಯಜೀವಿಗಳ ಸೂಕ್ಷ್ಮ ಪ್ರದೇಶದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಭಾರೀ ಫಾರ್ಮ್ ಹೌಸ್‌ ನಿರ್ಮಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ, ರಾಜ್ಯ ವನ್ಯಜೀವಿ ಬೋರ್ಡ್(SBWL) ಸದಸ್ಯ ದಿನೇಶ್ ಕುಮಾರ್ ಸಿಂಘಿ ಎಂಬುವವರು ಫಾರ್ಮ್ ಹೌಸ್‌‌ ನಿರ್ಮಿಸುತ್ತಿದ್ದಾರೆ ಎನ್ನಲಾಗಿರುವ ಬಗ್ಗೆ ಉತ್ತರಿಸುವಂತೆ ಭೂಮಾಲಿಕ ಕೆ.ಎಸ್ ನರಸಿಂಹ ಮೂರ್ತಿ ಅವರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡಿದೆ.

ಎನ್ ಬೆಲತೂರ್ ಗ್ರಾಮ, ಎಚ್ ಡಿ ಕೋಟೆ ತಾಲೂಕಿನ ಸರ್ವೆ ಸಂಖ್ಯೆ 142 ಮತ್ತು 144 ರ ಕೆ ಎಸ್ ನರಸಿಂಹ ಮೂರ್ತಿ ಎಂಬವರ ಭೂಮಿಯಲ್ಲಿ ರಾಜ್ಯ ವನ್ಯಜೀವಿ ಸದಸ್ಯ ದಿನೇಶ್ ಕುಮಾರ್ ಸಿಂಘಿ ಅವರು ವಿಶಾಲವಾದ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೇ ಅವುಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿ ವಲಯ ಅರಣ್ಯಾಧಿಕಾರಿ ಅವರಿಗೆ ಏಳು ದಿನದಲ್ಲಿ ಉತ್ತರಿಸುವಂತೆ ನೋಟಿಸ್‌ ನೀಡಿದ್ದಾರೆ.

ಈ ನಿರ್ಮಾಣ ಚಟುವಟಿಕೆ ನಡೆಯುತ್ತಿರುವ ಪ್ರದೇಶ ಪರಿಸರ ಸೂಕ್ಷ್ಮ ವಲಯ (ESZ) ಕ್ಕೆ ಸೇರಿದ್ದು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅಲ್ಲಿ ಯಾವುದೇ ಚಟುವಟಿಕೆ ನಡೆಯುಂತಿಲ್ಲ. ಅಲ್ಲದೆ ಆ ಪ್ರದೇಶವು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಫರ್‌ಝೂನ್ ವ್ಯಾಪ್ತಿಯಲ್ಲಿದೆ, ಜೊತೆಗೆ ಅದು ಆನೆಗಳ ಆವಾಸ ಸ್ಥಾನವಾಗಿರುವುದರಿಂದ ಆನೆಗಳ ಸಂರಕ್ಷಿತ ಪ್ರದೇಶ ಕೂಡಾ ಆಗಿದೆ ಎನ್ನಲಾಗಿದೆ.

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಯಾವುದೇ ಹೊಸ ನಿರ್ಮಾಣ ಕಾರ್ಯಗಳನ್ನು ನಡೆಸುವ ಮೊದಲು ಅರಣ್ಯ ಅಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ದಿನೇಶ್ ಕುಮಾರ್ ಆಗಲಿ ಭೂಮಿ ಮಾಲೀಕರಾಗಲಿ ಅಂತಹ ಅನುಮತಿ ಪಡೆದಿಲ್ಲ.

ಇದೆಲ್ಲವನ್ನೂ ಮೀರಿ ಸ್ವತಃ ರಾಜ್ಯ ವನ್ಯ ಜೀವಿ ಬೋರ್ಡ್ ಇದರ ಸದಸ್ಯರಾದ ದಿನೇಶ್ ಕುಮಾರ್ ಸಿಂಘಿ ನಿರ್ಮಾಣ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಮಾಜಿ ವನ್ಯಜೀವಿ ಬೋರ್ಡ್ ಸದಸ್ಯರಾದ ಜೋಸೆಫ್ ಹೂವರ್‌, “ದಿನೇಶ್ ಕುಮಾರ್ ಸಿಂಘಿ ಅವರು ಗಣಿ ಉದ್ಯಮಿಯಾಗಿದ್ದು, ಗಣಿ ಉದ್ಯಮಿಗಳು ವನ್ಯಜೀವಿ ಬೋರ್ಡ್‌ನಲ್ಲಿ ಇರಬಾರದೆಂದು ನಿಯಮವಿದೆ. ಸುಪ್ರೀಂ ಆದೇಶವನ್ನು ಮೀರಿ ಅಲ್ಲಿ ಫಾರ್ಮ್ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ. ಅಧಿಕಾರ, ಹಣವಿದೆಯೆಂದು ಸ್ಥಳೀಯ ಅರಣ್ಯ ಅಧಿಕಾರಿಯ ನಿರಪೇಕ್ಷಣ ದೃಡೀಕರಣ  ಪತ್ರ ಪಡೆಯದೆ ನಿರ್ಮಾಣ ಕಾರ್ಯನಡೆಯುತ್ತಿದೆ. ಇದನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ತಡೆಯಬೇಕು” ಎಂದು ಹೇಳಿದ್ದಾರೆ.


ಓದಿ: ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...