Homeಕರ್ನಾಟಕವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ...

ವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ ನೋಟಿಸ್!

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯರೊಬ್ಬರು ವನ್ಯಜೀವಿಗಳ ಸೂಕ್ಷ್ಮ ಪ್ರದೇಶದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಭಾರೀ ಫಾರ್ಮ್ ಹೌಸ್‌ ನಿರ್ಮಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ, ರಾಜ್ಯ ವನ್ಯಜೀವಿ ಬೋರ್ಡ್(SBWL) ಸದಸ್ಯ ದಿನೇಶ್ ಕುಮಾರ್ ಸಿಂಘಿ ಎಂಬುವವರು ಫಾರ್ಮ್ ಹೌಸ್‌‌ ನಿರ್ಮಿಸುತ್ತಿದ್ದಾರೆ ಎನ್ನಲಾಗಿರುವ ಬಗ್ಗೆ ಉತ್ತರಿಸುವಂತೆ ಭೂಮಾಲಿಕ ಕೆ.ಎಸ್ ನರಸಿಂಹ ಮೂರ್ತಿ ಅವರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡಿದೆ.

ಎನ್ ಬೆಲತೂರ್ ಗ್ರಾಮ, ಎಚ್ ಡಿ ಕೋಟೆ ತಾಲೂಕಿನ ಸರ್ವೆ ಸಂಖ್ಯೆ 142 ಮತ್ತು 144 ರ ಕೆ ಎಸ್ ನರಸಿಂಹ ಮೂರ್ತಿ ಎಂಬವರ ಭೂಮಿಯಲ್ಲಿ ರಾಜ್ಯ ವನ್ಯಜೀವಿ ಸದಸ್ಯ ದಿನೇಶ್ ಕುಮಾರ್ ಸಿಂಘಿ ಅವರು ವಿಶಾಲವಾದ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೇ ಅವುಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿ ವಲಯ ಅರಣ್ಯಾಧಿಕಾರಿ ಅವರಿಗೆ ಏಳು ದಿನದಲ್ಲಿ ಉತ್ತರಿಸುವಂತೆ ನೋಟಿಸ್‌ ನೀಡಿದ್ದಾರೆ.

ಈ ನಿರ್ಮಾಣ ಚಟುವಟಿಕೆ ನಡೆಯುತ್ತಿರುವ ಪ್ರದೇಶ ಪರಿಸರ ಸೂಕ್ಷ್ಮ ವಲಯ (ESZ) ಕ್ಕೆ ಸೇರಿದ್ದು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅಲ್ಲಿ ಯಾವುದೇ ಚಟುವಟಿಕೆ ನಡೆಯುಂತಿಲ್ಲ. ಅಲ್ಲದೆ ಆ ಪ್ರದೇಶವು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಫರ್‌ಝೂನ್ ವ್ಯಾಪ್ತಿಯಲ್ಲಿದೆ, ಜೊತೆಗೆ ಅದು ಆನೆಗಳ ಆವಾಸ ಸ್ಥಾನವಾಗಿರುವುದರಿಂದ ಆನೆಗಳ ಸಂರಕ್ಷಿತ ಪ್ರದೇಶ ಕೂಡಾ ಆಗಿದೆ ಎನ್ನಲಾಗಿದೆ.

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಯಾವುದೇ ಹೊಸ ನಿರ್ಮಾಣ ಕಾರ್ಯಗಳನ್ನು ನಡೆಸುವ ಮೊದಲು ಅರಣ್ಯ ಅಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ದಿನೇಶ್ ಕುಮಾರ್ ಆಗಲಿ ಭೂಮಿ ಮಾಲೀಕರಾಗಲಿ ಅಂತಹ ಅನುಮತಿ ಪಡೆದಿಲ್ಲ.

ಇದೆಲ್ಲವನ್ನೂ ಮೀರಿ ಸ್ವತಃ ರಾಜ್ಯ ವನ್ಯ ಜೀವಿ ಬೋರ್ಡ್ ಇದರ ಸದಸ್ಯರಾದ ದಿನೇಶ್ ಕುಮಾರ್ ಸಿಂಘಿ ನಿರ್ಮಾಣ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಮಾಜಿ ವನ್ಯಜೀವಿ ಬೋರ್ಡ್ ಸದಸ್ಯರಾದ ಜೋಸೆಫ್ ಹೂವರ್‌, “ದಿನೇಶ್ ಕುಮಾರ್ ಸಿಂಘಿ ಅವರು ಗಣಿ ಉದ್ಯಮಿಯಾಗಿದ್ದು, ಗಣಿ ಉದ್ಯಮಿಗಳು ವನ್ಯಜೀವಿ ಬೋರ್ಡ್‌ನಲ್ಲಿ ಇರಬಾರದೆಂದು ನಿಯಮವಿದೆ. ಸುಪ್ರೀಂ ಆದೇಶವನ್ನು ಮೀರಿ ಅಲ್ಲಿ ಫಾರ್ಮ್ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ. ಅಧಿಕಾರ, ಹಣವಿದೆಯೆಂದು ಸ್ಥಳೀಯ ಅರಣ್ಯ ಅಧಿಕಾರಿಯ ನಿರಪೇಕ್ಷಣ ದೃಡೀಕರಣ  ಪತ್ರ ಪಡೆಯದೆ ನಿರ್ಮಾಣ ಕಾರ್ಯನಡೆಯುತ್ತಿದೆ. ಇದನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ತಡೆಯಬೇಕು” ಎಂದು ಹೇಳಿದ್ದಾರೆ.


ಓದಿ: ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...