Homeಕರ್ನಾಟಕವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ...

ವನ್ಯಜೀವಿ ವಲಯದಲ್ಲಿ ಅಕ್ರಮ ಫಾರ್ಮ್ ಹೌಸ್ ನಿರ್ಮಾಣ: ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯನಿಗೆ ಅರಣ್ಯ ಇಲಾಖೆ ನೋಟಿಸ್!

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ರಾಜ್ಯ ವನ್ಯಜೀವಿ ಬೋರ್ಡ್ ಸದಸ್ಯರೊಬ್ಬರು ವನ್ಯಜೀವಿಗಳ ಸೂಕ್ಷ್ಮ ಪ್ರದೇಶದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಭಾರೀ ಫಾರ್ಮ್ ಹೌಸ್‌ ನಿರ್ಮಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ, ರಾಜ್ಯ ವನ್ಯಜೀವಿ ಬೋರ್ಡ್(SBWL) ಸದಸ್ಯ ದಿನೇಶ್ ಕುಮಾರ್ ಸಿಂಘಿ ಎಂಬುವವರು ಫಾರ್ಮ್ ಹೌಸ್‌‌ ನಿರ್ಮಿಸುತ್ತಿದ್ದಾರೆ ಎನ್ನಲಾಗಿರುವ ಬಗ್ಗೆ ಉತ್ತರಿಸುವಂತೆ ಭೂಮಾಲಿಕ ಕೆ.ಎಸ್ ನರಸಿಂಹ ಮೂರ್ತಿ ಅವರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡಿದೆ.

ಎನ್ ಬೆಲತೂರ್ ಗ್ರಾಮ, ಎಚ್ ಡಿ ಕೋಟೆ ತಾಲೂಕಿನ ಸರ್ವೆ ಸಂಖ್ಯೆ 142 ಮತ್ತು 144 ರ ಕೆ ಎಸ್ ನರಸಿಂಹ ಮೂರ್ತಿ ಎಂಬವರ ಭೂಮಿಯಲ್ಲಿ ರಾಜ್ಯ ವನ್ಯಜೀವಿ ಸದಸ್ಯ ದಿನೇಶ್ ಕುಮಾರ್ ಸಿಂಘಿ ಅವರು ವಿಶಾಲವಾದ ಫಾರ್ಮ್ ಹೌಸ್ ನಿರ್ಮಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೇ ಅವುಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿ ವಲಯ ಅರಣ್ಯಾಧಿಕಾರಿ ಅವರಿಗೆ ಏಳು ದಿನದಲ್ಲಿ ಉತ್ತರಿಸುವಂತೆ ನೋಟಿಸ್‌ ನೀಡಿದ್ದಾರೆ.

ಈ ನಿರ್ಮಾಣ ಚಟುವಟಿಕೆ ನಡೆಯುತ್ತಿರುವ ಪ್ರದೇಶ ಪರಿಸರ ಸೂಕ್ಷ್ಮ ವಲಯ (ESZ) ಕ್ಕೆ ಸೇರಿದ್ದು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅಲ್ಲಿ ಯಾವುದೇ ಚಟುವಟಿಕೆ ನಡೆಯುಂತಿಲ್ಲ. ಅಲ್ಲದೆ ಆ ಪ್ರದೇಶವು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಫರ್‌ಝೂನ್ ವ್ಯಾಪ್ತಿಯಲ್ಲಿದೆ, ಜೊತೆಗೆ ಅದು ಆನೆಗಳ ಆವಾಸ ಸ್ಥಾನವಾಗಿರುವುದರಿಂದ ಆನೆಗಳ ಸಂರಕ್ಷಿತ ಪ್ರದೇಶ ಕೂಡಾ ಆಗಿದೆ ಎನ್ನಲಾಗಿದೆ.

ಕಬಿನಿ ಹಿನ್ನೀರಿನ ಈ ಪ್ರದೇಶದಲ್ಲಿ ನೀರು ನಾಯಿಗಳು ಮರಿ ಹಾಕಿ ಸಲಹುವ ರೀಡ್‌ಗಳನ್ನು ನಾಶಪಡಿಸಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಯಾವುದೇ ಹೊಸ ನಿರ್ಮಾಣ ಕಾರ್ಯಗಳನ್ನು ನಡೆಸುವ ಮೊದಲು ಅರಣ್ಯ ಅಧಿಕಾರಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ದಿನೇಶ್ ಕುಮಾರ್ ಆಗಲಿ ಭೂಮಿ ಮಾಲೀಕರಾಗಲಿ ಅಂತಹ ಅನುಮತಿ ಪಡೆದಿಲ್ಲ.

ಇದೆಲ್ಲವನ್ನೂ ಮೀರಿ ಸ್ವತಃ ರಾಜ್ಯ ವನ್ಯ ಜೀವಿ ಬೋರ್ಡ್ ಇದರ ಸದಸ್ಯರಾದ ದಿನೇಶ್ ಕುಮಾರ್ ಸಿಂಘಿ ನಿರ್ಮಾಣ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಮಾಜಿ ವನ್ಯಜೀವಿ ಬೋರ್ಡ್ ಸದಸ್ಯರಾದ ಜೋಸೆಫ್ ಹೂವರ್‌, “ದಿನೇಶ್ ಕುಮಾರ್ ಸಿಂಘಿ ಅವರು ಗಣಿ ಉದ್ಯಮಿಯಾಗಿದ್ದು, ಗಣಿ ಉದ್ಯಮಿಗಳು ವನ್ಯಜೀವಿ ಬೋರ್ಡ್‌ನಲ್ಲಿ ಇರಬಾರದೆಂದು ನಿಯಮವಿದೆ. ಸುಪ್ರೀಂ ಆದೇಶವನ್ನು ಮೀರಿ ಅಲ್ಲಿ ಫಾರ್ಮ್ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ. ಅಧಿಕಾರ, ಹಣವಿದೆಯೆಂದು ಸ್ಥಳೀಯ ಅರಣ್ಯ ಅಧಿಕಾರಿಯ ನಿರಪೇಕ್ಷಣ ದೃಡೀಕರಣ  ಪತ್ರ ಪಡೆಯದೆ ನಿರ್ಮಾಣ ಕಾರ್ಯನಡೆಯುತ್ತಿದೆ. ಇದನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ತಡೆಯಬೇಕು” ಎಂದು ಹೇಳಿದ್ದಾರೆ.


ಓದಿ: ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...