Homeಮುಖಪುಟಮುಸ್ಲಿಂ ಶಾಸಕಿಯ ಭೇಟಿ ಬಳಿಕ ಗಂಗಾಜಲ ಎರಚಿ ದೇವಾಲಯ ಶುದ್ದೀಕರಣ

ಮುಸ್ಲಿಂ ಶಾಸಕಿಯ ಭೇಟಿ ಬಳಿಕ ಗಂಗಾಜಲ ಎರಚಿ ದೇವಾಲಯ ಶುದ್ದೀಕರಣ

- Advertisement -
- Advertisement -

ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯ ದೇವಸ್ಥಾನವೊಂದಕ್ಕೆ ಮುಸ್ಲಿಂ ಶಾಸಕಿಯ ಭೇಟಿಯ ನಂತರ ಹಿಂದುತ್ಳ ಸಂಘಟನೆಗಳ ಸದಸ್ಯರು ಗಂಗಾಜಲ ಎರಚಿ ಶುಚಿಗೊಳಿಸಿದ ಘಟನೆ ನಡೆದಿದೆ.

ಡೊಮರಿಯಾಗಂಜ್ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕಿ ಸೈಯಾದಾ ಖಾತೂನ್ ಅವರು ಸಿದ್ಧಾರ್ಥ್ ನಗರ ಜಿಲ್ಲೆಯ ಬಲ್ವಾ ಗ್ರಾಮದ ಸಮ್ಯ ಮಾತಾ ದೇವಸ್ಥಾನಕ್ಕೆ ರಾಮ ಕಥಾಗೆ ಅಲ್ಲಿನ ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಹೋಗಿದ್ದರು. ಮರುದಿನ ಹಿಂದುತ್ವ ಸಂಘಟನೆಗಳು ಮತ್ತು ಸ್ಥಳೀಯ ಪಂಚಾಯತ್‌ ಸದಸ್ಯರು ದೇವಸ್ಥಾನಕ್ಕೆ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ನಡೆಸಿ ಹನುಮಾನ್ ಚಾಲೀಸಾವನ್ನು ಪಠಿಸಿದರು ಮತ್ತು ಡೊಮರಿಯಾಗಂಜ್ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಈ ಕುರಿತು ಬರ್ಹ್ನಿ ಚಾಫಾ ನಗರ ಪಂಚಾಯತ್‌ ಅಧ್ಯಕ್ಷ ಧರ್ಮರಾಜ್ ವರ್ಮಾ ಮಾತನಾಡಿದ್ದು, ಸಮ್ಯ ಮಾತಾ ಮಂದಿರವು ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಸ್ಥಳೀಯ ಶಾಸಕರು ದೇವಾಲಯಕ್ಕೆ ಅಗೌರವ ತೋರಿದ್ದಾರೆ. ಅವರು ಮಾಂಸಾಹಾರಿ ಮತ್ತು ಅವರ ಭೇಟಿಯು ಸ್ಥಳದ ಪಾವಿತ್ರ್ಯತೆಯ ಮೇಲೆ ಪರಿಣಾಮ ಬೀರಿದೆ ಎಂದು  ಹೇಳಿದ್ದಾರೆ. ಈ ವೇಳೆ ಸಂತೋಷ್ ಪಾಸ್ವಾನ್, ಮಿಥ್ಲೇಶ್ ಪಾಂಡೆ, ವಿಜಯ್ ಮದೇಸಿಯಾ ಮತ್ತು ಪ್ರಮೋದ್ ಗೌತಮ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ವರ್ಮಾ ಜೊತೆಗಿದ್ದರು.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಶಾಸಕಿ ಖಾತೂನ್, ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ, ಮೇಲಾಗಿ ನಾನು ಸಾರ್ವಜನಿಕ ಪ್ರತಿನಿಧಿ. ಅದು ದೇವಸ್ಥಾನವಾಗಲಿ ಅಥವಾ ಮಸೀದಿಯಾಗಲಿ, ನನ್ನನ್ನು ಆಹ್ವಾನಿಸಿದರೆ ನಾನು ಖಂಡಿತವಾಗಿಯೂ ಅಲ್ಲಿಗೆ ಹೋಗುತ್ತೇನೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕೆ ಹಣ ನೀಡಲಾಗಿದೆ ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ, ಯಾವುದೇ ಘರ್ಷಣೆಯ ಸಾಧ್ಯತೆಯನ್ನು ತಪ್ಪಿಸಲು ಪೊಲೀಸ್ ತಂಡವು ಪ್ರದೇಶದಲ್ಲಿ ಗಸ್ತು ತಿರುಗುತ್ತಿದೆ. ಈ ಬಗ್ಗೆ ದೂರು ನೀಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಡೊಮರಿಯಾಗಂಜ್ ಸರ್ಕಲ್ ಆಫೀಸರ್ ಸುಜಿತ್ ಕುಮಾರ್ ರೈ ಹೇಳಿದ್ದಾರೆ.

ನಾವು ಘಟನೆಯ ಬಗ್ಗೆ ವಿವರಣೆ ತೆಗೆದುಕೊಂಡು ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ಧಾರ್ಥ್ ನಗರ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.

ಇದನ್ನು ಓದಿ: ಬಿಪಿನ್ ರಾವತ್ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತದ ತನಿಖೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...