Homeಮುಖಪುಟ40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ 'ಕೆಂಪರಾಜ ಅರಸ್'ರವರ ಸ್ಮರಣೆ

40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ ‘ಕೆಂಪರಾಜ ಅರಸ್’ರವರ ಸ್ಮರಣೆ

- Advertisement -
- Advertisement -

ನಲವತ್ತರ ದಶಕದಲ್ಲಿನ್ನೂ ಕನ್ನಡ ಚಿತ್ರರಂಗ ನೆಲೆಕಂಡುಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೆಂಪರಾಜ ಅರಸು ಅಭಿನಯದ ಚಿತ್ರಗಳು ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತದ ಇತರೆ ಚಿತ್ರರಂಗಗಳ ಗಮನ ಸೆಳೆದಿದ್ದವು. ಇಂದು (ಮೇ 18) ಅವರು ಅಗಲಿದ ದಿನ.

***

ಕನ್ನಡ ವಾಕ್ಚಿತ್ರ ಪರಂಪರೆ ಶುರುವಾಗಿದ್ದು 1934ರಲ್ಲಿ. ಆರಂಭದ ಎರಡು ದಶಕಗಳು ಕನ್ನಡ ಚಿತ್ರರಂಗಕ್ಕೆ ಕಲ್ಲುಮುಳ್ಳಿನ ಹಾದಿಯೇ. ಸ್ಟುಡಿಯೋ ಸೌಲಭ್ಯಗಳು ಇಲ್ಲದಿದ್ದುದು, ಬಂಡವಾಳದ ಕೊರತೆ, ತಂತ್ರಜ್ಞರ ಅಭಾವದ ಜೊತೆ ಚಿತ್ರ ನಿರ್ಮಿಸುವವರೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನಲವತ್ತರ ದಶಕದ ಅವಧಿಯಲ್ಲಿ ತಯಾರಾದ ಕೆಲವು ಚಿತ್ರಗಳಲ್ಲಿ ಕೆಂಪರಾಜ ಅರಸು ಅವರು ನಾಯಕನಾಗಿ ನಟಿಸಿ ಗಮನ ಸೆಳೆದಿದ್ದರು. ಹಾಗಾಗಿ ಕನ್ನಡ ಸಿನಿಮಾ ನಾಯಕನಟರ ಪರಂಪರೆಯಲ್ಲಿ ಅವರ ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ ’ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ನಂತರ ’ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶನಕ್ಕೂ ಕೈ ಹಾಕಿದರು. ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ದೊಡ್ಡ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಆಗಿದ್ದು ವಿಶೇಷ.

ಮುಂದೆ ’ಜಲದುರ್ಗ’, ’ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ’ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳಾಗಿವೆ. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

***

ಫೋಟೊ : ಬೆಂಗಳೂರು ಇಂಟರ್‌ನ್ಯಾಷನಲ್ ಹೋಟೆಲ್‍ನಲ್ಲಿ `ದೇವರ ಕಣ್ಣು’ ಚಿತ್ರದ ಸುದ್ದಿಗೋಷ್ಠಿ ಸಂದರ್ಭ. ಭಗವತಿ ಪ್ರೊಡಕ್ಷನ್ಸ್‌ನ ಪಾಲ್ ನಿರ್ಮಾಣದ ಚಿತ್ರವಿದು. ಹಿಂದೆ ಪಾಲ್, ಸಾಹಿತಿ ತ.ರಾ.ಸು. ಅವರ ’ಚಕ್ರತೀರ್ಥ’ ಕೃತಿಯನ್ನು ಆಧರಿಸಿ ಸಿನಿಮಾ ನಿರ್ಮಿಸಿದ್ದರು. ಪಾಲ್ ಆಹ್ವಾನದ ಮೇರೆಗೆ ತ.ರಾ.ಸು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರೊಂದಿಗಿರುವವರು ನಟ, ನಿರ್ದೇಶಕ, ನಿರ್ಮಾಪಕ ಕೆಂಪರಾಜ ಅರಸು. ಆಗ ಅರಸು ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. (ಫೋಟೊ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ, ಜೆಪಿ)


ಇದನ್ನೂ ಓದಿ: ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...