Homeಮುಖಪುಟ40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ 'ಕೆಂಪರಾಜ ಅರಸ್'ರವರ ಸ್ಮರಣೆ

40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ ‘ಕೆಂಪರಾಜ ಅರಸ್’ರವರ ಸ್ಮರಣೆ

- Advertisement -
- Advertisement -

ನಲವತ್ತರ ದಶಕದಲ್ಲಿನ್ನೂ ಕನ್ನಡ ಚಿತ್ರರಂಗ ನೆಲೆಕಂಡುಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೆಂಪರಾಜ ಅರಸು ಅಭಿನಯದ ಚಿತ್ರಗಳು ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತದ ಇತರೆ ಚಿತ್ರರಂಗಗಳ ಗಮನ ಸೆಳೆದಿದ್ದವು. ಇಂದು (ಮೇ 18) ಅವರು ಅಗಲಿದ ದಿನ.

***

ಕನ್ನಡ ವಾಕ್ಚಿತ್ರ ಪರಂಪರೆ ಶುರುವಾಗಿದ್ದು 1934ರಲ್ಲಿ. ಆರಂಭದ ಎರಡು ದಶಕಗಳು ಕನ್ನಡ ಚಿತ್ರರಂಗಕ್ಕೆ ಕಲ್ಲುಮುಳ್ಳಿನ ಹಾದಿಯೇ. ಸ್ಟುಡಿಯೋ ಸೌಲಭ್ಯಗಳು ಇಲ್ಲದಿದ್ದುದು, ಬಂಡವಾಳದ ಕೊರತೆ, ತಂತ್ರಜ್ಞರ ಅಭಾವದ ಜೊತೆ ಚಿತ್ರ ನಿರ್ಮಿಸುವವರೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನಲವತ್ತರ ದಶಕದ ಅವಧಿಯಲ್ಲಿ ತಯಾರಾದ ಕೆಲವು ಚಿತ್ರಗಳಲ್ಲಿ ಕೆಂಪರಾಜ ಅರಸು ಅವರು ನಾಯಕನಾಗಿ ನಟಿಸಿ ಗಮನ ಸೆಳೆದಿದ್ದರು. ಹಾಗಾಗಿ ಕನ್ನಡ ಸಿನಿಮಾ ನಾಯಕನಟರ ಪರಂಪರೆಯಲ್ಲಿ ಅವರ ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ ’ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ನಂತರ ’ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶನಕ್ಕೂ ಕೈ ಹಾಕಿದರು. ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ದೊಡ್ಡ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಆಗಿದ್ದು ವಿಶೇಷ.

ಮುಂದೆ ’ಜಲದುರ್ಗ’, ’ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ’ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳಾಗಿವೆ. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

***

ಫೋಟೊ : ಬೆಂಗಳೂರು ಇಂಟರ್‌ನ್ಯಾಷನಲ್ ಹೋಟೆಲ್‍ನಲ್ಲಿ `ದೇವರ ಕಣ್ಣು’ ಚಿತ್ರದ ಸುದ್ದಿಗೋಷ್ಠಿ ಸಂದರ್ಭ. ಭಗವತಿ ಪ್ರೊಡಕ್ಷನ್ಸ್‌ನ ಪಾಲ್ ನಿರ್ಮಾಣದ ಚಿತ್ರವಿದು. ಹಿಂದೆ ಪಾಲ್, ಸಾಹಿತಿ ತ.ರಾ.ಸು. ಅವರ ’ಚಕ್ರತೀರ್ಥ’ ಕೃತಿಯನ್ನು ಆಧರಿಸಿ ಸಿನಿಮಾ ನಿರ್ಮಿಸಿದ್ದರು. ಪಾಲ್ ಆಹ್ವಾನದ ಮೇರೆಗೆ ತ.ರಾ.ಸು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರೊಂದಿಗಿರುವವರು ನಟ, ನಿರ್ದೇಶಕ, ನಿರ್ಮಾಪಕ ಕೆಂಪರಾಜ ಅರಸು. ಆಗ ಅರಸು ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. (ಫೋಟೊ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ, ಜೆಪಿ)


ಇದನ್ನೂ ಓದಿ: ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...