Homeಮುಖಪುಟ40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ 'ಕೆಂಪರಾಜ ಅರಸ್'ರವರ ಸ್ಮರಣೆ

40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ ‘ಕೆಂಪರಾಜ ಅರಸ್’ರವರ ಸ್ಮರಣೆ

- Advertisement -
- Advertisement -

ನಲವತ್ತರ ದಶಕದಲ್ಲಿನ್ನೂ ಕನ್ನಡ ಚಿತ್ರರಂಗ ನೆಲೆಕಂಡುಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೆಂಪರಾಜ ಅರಸು ಅಭಿನಯದ ಚಿತ್ರಗಳು ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತದ ಇತರೆ ಚಿತ್ರರಂಗಗಳ ಗಮನ ಸೆಳೆದಿದ್ದವು. ಇಂದು (ಮೇ 18) ಅವರು ಅಗಲಿದ ದಿನ.

***

ಕನ್ನಡ ವಾಕ್ಚಿತ್ರ ಪರಂಪರೆ ಶುರುವಾಗಿದ್ದು 1934ರಲ್ಲಿ. ಆರಂಭದ ಎರಡು ದಶಕಗಳು ಕನ್ನಡ ಚಿತ್ರರಂಗಕ್ಕೆ ಕಲ್ಲುಮುಳ್ಳಿನ ಹಾದಿಯೇ. ಸ್ಟುಡಿಯೋ ಸೌಲಭ್ಯಗಳು ಇಲ್ಲದಿದ್ದುದು, ಬಂಡವಾಳದ ಕೊರತೆ, ತಂತ್ರಜ್ಞರ ಅಭಾವದ ಜೊತೆ ಚಿತ್ರ ನಿರ್ಮಿಸುವವರೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನಲವತ್ತರ ದಶಕದ ಅವಧಿಯಲ್ಲಿ ತಯಾರಾದ ಕೆಲವು ಚಿತ್ರಗಳಲ್ಲಿ ಕೆಂಪರಾಜ ಅರಸು ಅವರು ನಾಯಕನಾಗಿ ನಟಿಸಿ ಗಮನ ಸೆಳೆದಿದ್ದರು. ಹಾಗಾಗಿ ಕನ್ನಡ ಸಿನಿಮಾ ನಾಯಕನಟರ ಪರಂಪರೆಯಲ್ಲಿ ಅವರ ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ ’ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ನಂತರ ’ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶನಕ್ಕೂ ಕೈ ಹಾಕಿದರು. ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ದೊಡ್ಡ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಆಗಿದ್ದು ವಿಶೇಷ.

ಮುಂದೆ ’ಜಲದುರ್ಗ’, ’ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ’ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳಾಗಿವೆ. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

***

ಫೋಟೊ : ಬೆಂಗಳೂರು ಇಂಟರ್‌ನ್ಯಾಷನಲ್ ಹೋಟೆಲ್‍ನಲ್ಲಿ `ದೇವರ ಕಣ್ಣು’ ಚಿತ್ರದ ಸುದ್ದಿಗೋಷ್ಠಿ ಸಂದರ್ಭ. ಭಗವತಿ ಪ್ರೊಡಕ್ಷನ್ಸ್‌ನ ಪಾಲ್ ನಿರ್ಮಾಣದ ಚಿತ್ರವಿದು. ಹಿಂದೆ ಪಾಲ್, ಸಾಹಿತಿ ತ.ರಾ.ಸು. ಅವರ ’ಚಕ್ರತೀರ್ಥ’ ಕೃತಿಯನ್ನು ಆಧರಿಸಿ ಸಿನಿಮಾ ನಿರ್ಮಿಸಿದ್ದರು. ಪಾಲ್ ಆಹ್ವಾನದ ಮೇರೆಗೆ ತ.ರಾ.ಸು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರೊಂದಿಗಿರುವವರು ನಟ, ನಿರ್ದೇಶಕ, ನಿರ್ಮಾಪಕ ಕೆಂಪರಾಜ ಅರಸು. ಆಗ ಅರಸು ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. (ಫೋಟೊ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ, ಜೆಪಿ)


ಇದನ್ನೂ ಓದಿ: ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...