Homeಮುಖಪುಟ40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ 'ಕೆಂಪರಾಜ ಅರಸ್'ರವರ ಸ್ಮರಣೆ

40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ ‘ಕೆಂಪರಾಜ ಅರಸ್’ರವರ ಸ್ಮರಣೆ

- Advertisement -
- Advertisement -

ನಲವತ್ತರ ದಶಕದಲ್ಲಿನ್ನೂ ಕನ್ನಡ ಚಿತ್ರರಂಗ ನೆಲೆಕಂಡುಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೆಂಪರಾಜ ಅರಸು ಅಭಿನಯದ ಚಿತ್ರಗಳು ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತದ ಇತರೆ ಚಿತ್ರರಂಗಗಳ ಗಮನ ಸೆಳೆದಿದ್ದವು. ಇಂದು (ಮೇ 18) ಅವರು ಅಗಲಿದ ದಿನ.

***

ಕನ್ನಡ ವಾಕ್ಚಿತ್ರ ಪರಂಪರೆ ಶುರುವಾಗಿದ್ದು 1934ರಲ್ಲಿ. ಆರಂಭದ ಎರಡು ದಶಕಗಳು ಕನ್ನಡ ಚಿತ್ರರಂಗಕ್ಕೆ ಕಲ್ಲುಮುಳ್ಳಿನ ಹಾದಿಯೇ. ಸ್ಟುಡಿಯೋ ಸೌಲಭ್ಯಗಳು ಇಲ್ಲದಿದ್ದುದು, ಬಂಡವಾಳದ ಕೊರತೆ, ತಂತ್ರಜ್ಞರ ಅಭಾವದ ಜೊತೆ ಚಿತ್ರ ನಿರ್ಮಿಸುವವರೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನಲವತ್ತರ ದಶಕದ ಅವಧಿಯಲ್ಲಿ ತಯಾರಾದ ಕೆಲವು ಚಿತ್ರಗಳಲ್ಲಿ ಕೆಂಪರಾಜ ಅರಸು ಅವರು ನಾಯಕನಾಗಿ ನಟಿಸಿ ಗಮನ ಸೆಳೆದಿದ್ದರು. ಹಾಗಾಗಿ ಕನ್ನಡ ಸಿನಿಮಾ ನಾಯಕನಟರ ಪರಂಪರೆಯಲ್ಲಿ ಅವರ ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ ’ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ನಂತರ ’ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶನಕ್ಕೂ ಕೈ ಹಾಕಿದರು. ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ದೊಡ್ಡ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಆಗಿದ್ದು ವಿಶೇಷ.

ಮುಂದೆ ’ಜಲದುರ್ಗ’, ’ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ’ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳಾಗಿವೆ. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

***

ಫೋಟೊ : ಬೆಂಗಳೂರು ಇಂಟರ್‌ನ್ಯಾಷನಲ್ ಹೋಟೆಲ್‍ನಲ್ಲಿ `ದೇವರ ಕಣ್ಣು’ ಚಿತ್ರದ ಸುದ್ದಿಗೋಷ್ಠಿ ಸಂದರ್ಭ. ಭಗವತಿ ಪ್ರೊಡಕ್ಷನ್ಸ್‌ನ ಪಾಲ್ ನಿರ್ಮಾಣದ ಚಿತ್ರವಿದು. ಹಿಂದೆ ಪಾಲ್, ಸಾಹಿತಿ ತ.ರಾ.ಸು. ಅವರ ’ಚಕ್ರತೀರ್ಥ’ ಕೃತಿಯನ್ನು ಆಧರಿಸಿ ಸಿನಿಮಾ ನಿರ್ಮಿಸಿದ್ದರು. ಪಾಲ್ ಆಹ್ವಾನದ ಮೇರೆಗೆ ತ.ರಾ.ಸು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರೊಂದಿಗಿರುವವರು ನಟ, ನಿರ್ದೇಶಕ, ನಿರ್ಮಾಪಕ ಕೆಂಪರಾಜ ಅರಸು. ಆಗ ಅರಸು ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. (ಫೋಟೊ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ, ಜೆಪಿ)


ಇದನ್ನೂ ಓದಿ: ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...