Homeಮುಖಪುಟ40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ 'ಕೆಂಪರಾಜ ಅರಸ್'ರವರ ಸ್ಮರಣೆ

40ರ ದಶಕದ ಕನ್ನಡದ ಪ್ರಮುಖ ನಟ ರಾಜಾವಿಕ್ರಮ ‘ಕೆಂಪರಾಜ ಅರಸ್’ರವರ ಸ್ಮರಣೆ

- Advertisement -
- Advertisement -

ನಲವತ್ತರ ದಶಕದಲ್ಲಿನ್ನೂ ಕನ್ನಡ ಚಿತ್ರರಂಗ ನೆಲೆಕಂಡುಕೊಳ್ಳುತ್ತಿತ್ತು. ಈ ಸಂದರ್ಭದಲ್ಲಿ ಕೆಂಪರಾಜ ಅರಸು ಅಭಿನಯದ ಚಿತ್ರಗಳು ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತದ ಇತರೆ ಚಿತ್ರರಂಗಗಳ ಗಮನ ಸೆಳೆದಿದ್ದವು. ಇಂದು (ಮೇ 18) ಅವರು ಅಗಲಿದ ದಿನ.

***

ಕನ್ನಡ ವಾಕ್ಚಿತ್ರ ಪರಂಪರೆ ಶುರುವಾಗಿದ್ದು 1934ರಲ್ಲಿ. ಆರಂಭದ ಎರಡು ದಶಕಗಳು ಕನ್ನಡ ಚಿತ್ರರಂಗಕ್ಕೆ ಕಲ್ಲುಮುಳ್ಳಿನ ಹಾದಿಯೇ. ಸ್ಟುಡಿಯೋ ಸೌಲಭ್ಯಗಳು ಇಲ್ಲದಿದ್ದುದು, ಬಂಡವಾಳದ ಕೊರತೆ, ತಂತ್ರಜ್ಞರ ಅಭಾವದ ಜೊತೆ ಚಿತ್ರ ನಿರ್ಮಿಸುವವರೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನಲವತ್ತರ ದಶಕದ ಅವಧಿಯಲ್ಲಿ ತಯಾರಾದ ಕೆಲವು ಚಿತ್ರಗಳಲ್ಲಿ ಕೆಂಪರಾಜ ಅರಸು ಅವರು ನಾಯಕನಾಗಿ ನಟಿಸಿ ಗಮನ ಸೆಳೆದಿದ್ದರು. ಹಾಗಾಗಿ ಕನ್ನಡ ಸಿನಿಮಾ ನಾಯಕನಟರ ಪರಂಪರೆಯಲ್ಲಿ ಅವರ ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ ’ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ನಂತರ ’ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶನಕ್ಕೂ ಕೈ ಹಾಕಿದರು. ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ದೊಡ್ಡ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಆಗಿದ್ದು ವಿಶೇಷ.

ಮುಂದೆ ’ಜಲದುರ್ಗ’, ’ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ’ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳಾಗಿವೆ. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

***

ಫೋಟೊ : ಬೆಂಗಳೂರು ಇಂಟರ್‌ನ್ಯಾಷನಲ್ ಹೋಟೆಲ್‍ನಲ್ಲಿ `ದೇವರ ಕಣ್ಣು’ ಚಿತ್ರದ ಸುದ್ದಿಗೋಷ್ಠಿ ಸಂದರ್ಭ. ಭಗವತಿ ಪ್ರೊಡಕ್ಷನ್ಸ್‌ನ ಪಾಲ್ ನಿರ್ಮಾಣದ ಚಿತ್ರವಿದು. ಹಿಂದೆ ಪಾಲ್, ಸಾಹಿತಿ ತ.ರಾ.ಸು. ಅವರ ’ಚಕ್ರತೀರ್ಥ’ ಕೃತಿಯನ್ನು ಆಧರಿಸಿ ಸಿನಿಮಾ ನಿರ್ಮಿಸಿದ್ದರು. ಪಾಲ್ ಆಹ್ವಾನದ ಮೇರೆಗೆ ತ.ರಾ.ಸು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರೊಂದಿಗಿರುವವರು ನಟ, ನಿರ್ದೇಶಕ, ನಿರ್ಮಾಪಕ ಕೆಂಪರಾಜ ಅರಸು. ಆಗ ಅರಸು ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. (ಫೋಟೊ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ, ಜೆಪಿ)


ಇದನ್ನೂ ಓದಿ: ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...