Homeಮುಖಪುಟಶ್ರದ್ಧಾಂಜಲಿ: ಲಂಕೇಶರ ಆಪ್ತ ನಮ್ಮ ಯೋಗಪ್ಪನವರು

ಶ್ರದ್ಧಾಂಜಲಿ: ಲಂಕೇಶರ ಆಪ್ತ ನಮ್ಮ ಯೋಗಪ್ಪನವರು

ಜಗತ್ತಿನ ಲೇಖಕರ ಬಗ್ಗೆ ಯೋಗಪ್ಪನವರು ಮಾತನಾಡುತ್ತಿದ್ದರೆ, ಲಂಕೇಶ್ ತಮ್ಮ ಅಭಿಪ್ರಾಯವನ್ನು ಸೇರಿಸುತ್ತ ವಿಸ್ಕಿ ಗುಳುಕರಿಸುವುದನ್ನು ಮರೆತು ಆಲಿಸುತ್ತಿದ್ದರು...

- Advertisement -
- Advertisement -

ನಮ್ಮ ಯೋಗಪ್ಪನವರನ್ನು ಕೊರೊನಾ ಬಲಿ ಪಡೆದಿದೆ. ಇದು ಕನ್ನಡ ಸಾಹಿತ್ಯಾಕ್ಕಾದ ದೊಡ್ಡ ನಷ್ಟ. ಏಕೆಂದರೆ, ಯೋಗಪ್ಪನವರು ಇನ್ನೂ ಮಹತ್ತರವಾದುದನ್ನು ಬರೆಯುವವರಿದ್ದರು. ಅವರು ಲಂಕೇಶರಿಗೆ ಪರಿಚಯವಾದುದ್ದೇ ತಮ್ಮ ಗಟ್ಟಿಯಾದ ಬರಹ ಮತ್ತು ಓದಿನ ಮುಖಾಂತರ. ಇಂಗ್ಲಿಷ್ ಸಾಹಿತ್ಯದ ಓದಿನ ವಿಷಯದಲ್ಲಿ ಪಾಂಡಿತ್ಯದ ಔನ್ನತ್ಯದಲ್ಲಿದ್ದ ಯೋಗಪ್ಪನವರು ನಮ್ಮಂತವರ ಜೊತೆಯೂ ಸಹಜವಾದ ಸ್ನೇಹದಿಂದಿದ್ದರು. ಅವರು ಲಂಕೇಶ್ ಜೊತೆ ಮಾತನಾಡುತ್ತ ಕುಳಿತಿದ್ದರೆ ನಾವು ಉಸಿರೆತ್ತದೆ ಸುಮ್ಮನೆ ಕೇಳಿಸಿಕೊಳ್ಳುವಂತಾಗುತ್ತಿತ್ತು.

ಜಗತ್ತಿನ ಲೇಖಕರ ಬಗ್ಗೆ ಯೋಗಪ್ಪನವರು ಮಾತನಾಡುತ್ತಿದ್ದರೆ, ಲಂಕೇಶ್ ತಮ್ಮ ಅಭಿಪ್ರಾಯವನ್ನು ಸೇರಿಸುತ್ತ ವಿಸ್ಕಿ ಗುಳುಕರಿಸುವುದನ್ನು ಮರೆತು ಆಲಿಸುತ್ತಿದ್ದರು. ಆಗಲೇ ಅವರ ಮನದಾಳದಲ್ಲಿ ಈ ಜಗತ್ತಿನ ರೂಪಕ ಲೇಖಕರ ಬಗ್ಗೆ ಕನ್ನಡದ ಮನಸ್ಸುಗಳಿಗೆ ಸಂಕ್ಷಿಪ್ತವಾಗಿ ಕೊಡಬೇಕೆನ್ನಿಸಿರಬೇಕು. ಲಂಕೇಶ್ ಪತ್ರಿಕೆಯನ್ನ ನಿರಂತರ ಪ್ರಯೋಗಶೀಲತೆಗೆ ಗುರಿ ಮಾಡುತ್ತಿದ್ದರಿಂದ ಈ ಹಿಂದೆ ಎನ್.ಎಸ್ ಶಂಕರ್ ಕೈಲಿ ’ಚಂಚಲೆ’ ಮತ್ತು ನಟರಾಜ್ ಹುಳಿಯಾರ್‌ರಿಂದ ’ಬರೆವ ಬದುಕು’ ಅಂಕಣಗಳನ್ನು ಬರೆಸಿದ್ದರು. ಮಹಿಳಾ ಲೇಖಕಿಯರಿಂದ ’ನಿಮ್ಮಿ’ ಬರೆಸಿದ್ದರು. ಇವನ್ನೆಲ್ಲಾ ಶುರುಮಾಡಿ ಪತ್ರಿಕೆಯ ನೌಕರರಿಗೆ ಮುಂದುವರಿಸಲು ಬಿಡುತ್ತಿದ್ದರು.

ಹಾಗೆಯೇ ಯೋಗಪ್ಪನವರಿಂದ ಜಗತ್ತಿನ ವಿಸ್ಮಯಕಾರಿ ಲೇಖಕರ ಬಗೆಗಿನ ಸಂಗತಿಗಳನ್ನು ಬರೆಸುತ್ತಿದ್ದರು. ಪತ್ರಿಕೆಯ ಸಾಹಿತ್ಯ ಮತ್ತು ರಾಜಕಾರಣದ ಸಮತೂಕವನ್ನು ನಿಭಾಯಿಸುವುದರಲ್ಲಿ ಯೋಗಪ್ಪನವರ ಬರವಣಿಗೆ ಮಹತ್ವ ಪಡೆದುಕೊಂಡಿದ್ದವು.

ಅವರು ನನಗೆ ಅಷ್ಟಾಗಿ ಪರಿಚಯವಿಲ್ಲದ ಸಮಯದಲ್ಲಿ ಅವರ ಗೆಳೆಯನಂತಿದ್ದ ಉತ್ತರ ಕರ್ನಾಟಕದ ವರದಿಗಾರನೊಬ್ಬ ಲಂಕೇಶರಿಗೆ ಯೋಗಪ್ಪನವರ ವಿಷಯದಲ್ಲಿ ಚಾಡಿ ಹೇಳುತ್ತ ಕುಳಿತಿದ್ದ. ಅದನ್ನ ಕೇಳಿಸಿಕೊಂಡ ನಾನು ಇನ್ನು ಯೋಗಪ್ಪನವರು ಪತ್ರಿಕೆಯಿಂದ ಹೊರನಡೆದಂತೆಯೇ ಎಂದು ಭಾವಿಸಿದ್ದೆ. ಆದರೆ ಲಂಕೇಶ್ ಚಾಡಿ ಹೇಳಿದವನ ಮಾತನ್ನು ಪಕ್ಕಕ್ಕಿಟ್ಟು ಯೋಗಪ್ಪನವರನ್ನು ಗೌರವಿಸಿದ್ದರು. ಆಗೊಮ್ಮೆ ಪತ್ರಿಕೆ ಆಫೀಸಿನಲ್ಲಿ ಶರ್ಮರ ಕಾವ್ಯ ಕುರಿತ ಚರ್ಚೆಯಲ್ಲಿ ಯೋಗಪ್ಪನವರು ಶರ್ಮರ ಎದುರೇ ಅವರ ಕಾವ್ಯದ ಅಂತರಾಳವನ್ನು ಅನಾವರಣ ಮಾಡಿದ್ದರು. ಇದರಿಂದ ಕೆರಳಿದ ಶರ್ಮರು ಯೋಗ್ಯಪ್ಪನವರು ಎಂದು ವ್ಯಂಗ್ಯವಾಗಿ ಮೂದಲಿಸಿದ್ದರು. ಆದರೂ ಯೋಗಪ್ಪನವರು ಅದನ್ನು ಮನಸ್ಸಿಗೆ ಹಾಕಿಕೊಳ್ಳದೆ ತುಟಿಬಿರಿದರು. ಆಗ ನಟರಾಜ್ ಹುಳಿಯಾರ್ ಮತ್ತು ಲಂಕೇಶರು ಯೋಗಪ್ಪನವರ ವ್ಯಾಖ್ಯಾನವನ್ನು ಸಮರ್ಥಿಸಿಕೊಂಡಿದ್ದರು.

ಒಮ್ಮೆ ಪಶುಸಂಗೋಪನಾ ಸಚಿವರಾಗಿದ್ದ ಬಿ.ಬಿ ನಿಂಗಯ್ಯ ನನ್ನ ಗೆಳೆಯರಾದ ಕಾರಣಕ್ಕೆ ಆಫೀಸಿಗೆ ಕರೆದರು. ಹೋದಾಗ ಇಲ್ಲೆ ಊಟ ಮಾಡಿ ಎಂದರು. ಆಯ್ತು ಎಂದು ಊಟಕ್ಕೆ ಕುಳಿತಾಗ ನಿಂಗಯ್ಯನವರಿಗೆ ಪಿ.ಎಸ್ ಆಗಿದ್ದ ಯೋಗಪ್ಪನವರು ವಿಧೇಯ ಪರಿಚಾರಕನಂತೆ ಊಟ ಬಡಿಸಿದ್ದು ನಾನು ಮರೆಯಲಾಗದ ಮುಜುಗರಕ್ಕೆ ಈಡುಮಾಡಿತ್ತು. ಆದರೆ ಯೋಗಪ್ಪನವರಿಗೆ ಏನೂ ಅನ್ನಿಸಿರಲಿಲ್ಲ ಬದಲಿಗೆ ಗೆಳೆಯನಿಗೆ ಆತಿಥ್ಯ ನೀಡಿದ ಖುಷಿಯಲ್ಲಿದ್ದರು.

ಅವರು ಪಿ.ಎಸ್‌ ಆಗಿ ಕೆಲಸ ಮಾಡಿದ ಮಂತ್ರಿಗಳು ನೆನೆಸಿಕೊಳ್ಳುವಂತಹ ಅಧಿಕಾರಿಯಾಗಿದ್ದರು. ಅವರು ಉದಾಸಿ ಬಳಿಯಿದ್ದಾಗ ನಾನೊಮ್ಮೆ ಹೋಗಿದ್ದೆ. ನನ್ನನ್ನು ಉದಾಸಿಗೆ ಪರಿಚಯಿಸಿದ್ದನ್ನು ನೋಡಿ ದಂಗು ಬಡಿದಿದ್ದೆ. ಏಕೆಂದರೆ, ನನ್ನ ಕಟ್ಟೆಪುರಾಣವನ್ನು ಆ ರೂಪದಲ್ಲಿ ಉದಾಸಿಗೆ ವಿವರಿಸಿದ್ದರು. ಉದಾಸಿ ಕೂಡ ಎಂ.ಪಿ ಪ್ರಕಾಶರ ಒಡನಾಡಿಯಾದ್ದರಿಂದ ಯೋಗಪ್ಪನವರ ಮಾತುಗಳನ್ನು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಮುಂದೆ ನಾನು ಕಟ್ಟೆಪುರಾಣವನ್ನು ಪುಸ್ತಕವಾಗಿ ಪ್ರಕಟಿಸಿದಾಗ ಯೋಗಪ್ಪನವರಿಂದಲೇ ಮುನ್ನುಡಿ ಬರೆಸಿದ್ದೆ.

“ಪ್ರೀತಿಯೆಂಬುದು ಚಂದ್ರನ ದಯೆ” ಎಂಬ ಕಾವ್ಯದ ಗಣಿಯಂತಿರುವ ಪುಸ್ತಕವನ್ನು ಅವರು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಈಗಾಗಲೇ ಕೆಎಎಸ್ ಅಧಿಕಾರಿಯಾಗಿರುವ ಅವರ ಮಗಳೊಂದಿಗೆ ದಿಢೀರನೆ ಪತ್ರಿಕೆ ಆಫೀಸಿಗೆ ಬಂದು ಗೌರಿ ಕೈಯಿಂದ ಬಿಡುಗಡೆ ಮಾಡಿಸಿದರು. ನಂತರ ಕ್ರಿಕೆಟ್ ಕ್ಲಬ್ಬಿನಲ್ಲಿ ಗೌರಿ, ಸತೀಶ್, ಶ್ರೀನಿವಾಸ ಕರಿಯಪ್ಪ ಮತ್ತು ಈ ಚಂದ್ರನಿಗೆ ಪಾರ್ಟಿ ಕೊಟ್ಟರು. ಸಾಮಾನ್ಯವಾಗಿ ಯಾರಾದರೂ ಕುಡಿಸಿದಾಗ ಆಗುವಂತೆಯೇ, ಜಾಸ್ತಿ ಕುಡಿದು ಪೊಲೀಸರಿಗೆ ಸಿಕ್ಕಿಬಿದ್ದೆವು. ಆಗ ಪೊಲೀಸರಿಗೆ, ಕೆಎಎಸ್ ಅಧಿಕಾರಿ ಮತ್ತು ಕನ್ನಡದ ದೊಡ್ಡ ಸಾಹಿತಿ ಯೋಗಪ್ಪನವರು ಪಾರ್ಟಿ ಕೊಟ್ಟರು, ಆದ್ದರಿಂದ ಬಿಡಿ ಸಾರ್ ಎಂದೆವು. ಸಾಹಿತಿ ಪಾರ್ಟಿ ಕೊಟ್ರು ಅಂತ ಇಷ್ಟೊಂದೇನ್ರಿ ಕುಡಿಯದು. ಈ ಕಡೆ ಬನ್ನಿ ಗಾಡಿ ಹಾಕಿ ಎಂದರು. ದಿಕ್ಕು ಕಾಣದ ನಾನು  ಕೊನೆಗೆ ಕಷ್ಟಪಟ್ಟು ಬಿಡಿಸಿಕೊಂಡು ಬರುವಷ್ಟರಲ್ಲಿ ಅರ್ಧ ರಾತ್ರಿಯಾಯ್ತು. ಇದನ್ನು ಯೋಗಪ್ಪನವರಿಗೆ ಹೇಳಿದಾಗ, ಅದಾಗಲೇ ಜಗತ್ತಿನ ರೂಪಕ ಲೇಖಕರ ಬಗ್ಗೆ ಅರೆದು ಕುಡಿದಿದ್ದ ಯೋಗಪ್ಪನವರು ತುಟಿ ಬಿರಿದು ಹೌದ್ರಾ ಎಂದಿದ್ದರು!

ಅವರು ’ಪ್ರೀತಿಯೆಂಬುದು ಚಂದ್ರನ ದಯೆ’ ಎಂಬ ಪುಸ್ತಕ ಕೊಟ್ಟು ಅಭಿಪ್ರಾಯ ಕೇಳಿದ್ದರು. ಆಗ ನಾನು ಫೋನು ಮಾಡಿ “ಸಂಗವ್ವಕ್ಕನ ಮುದ್ದಿನ.. ಬನಶಂಕರಿ ಜಾತ್ರೆಯಲ್ಲಿ ಮಾಯವಾದವಲ್ಲೊ ಎಂಬ ಹಾಡಿನ ಸಾಲುಗಳನ್ನು ರಾಗವಾಗಿ ಹೇಳಿ ಬನಶಂಕರಿ ಜಾತ್ರೆ ನೋಡಬೇಕಲ್ರಿ ಸರ ಎಂದಿದ್ದೆ. ಅದಕೇನಂತೆ ಈ ಬಾರಿ ನೋಡೋನು ಎಂದು ಆ ಜಾತ್ರೆಯನ್ನು ವರ್ಣಿಸಿದ್ದರು.

ಕಳೆದ ಕೊರೊನಾ ಟೈಮಿನಲ್ಲಿ ನಾನು ಮನೆಯಲ್ಲೇ ಇದ್ದು ಲಂಕೇಶರ ಒಡನಾಟದಲ್ಲಿನ ವಿವರಕ್ಕೆ ರೂಪಕೊಟ್ಟು ಒಂದು ಪುಸ್ತಕ ಮಾಡಿ ಅದಕ್ಕೊಂದು ಟೈಟಲ್ ಬೇಕು ಎಂದು ಕೇಳಿದ್ದೆ. ಅದಕ್ಕವರು, ಲಂಕೇಶ್ ಜೊತೆಯಾಗಿದ್ದವುರು ಏನೇನಾದ್ರು ಅನ್ನದನ್ನ ನೀವು ಮಾತ್ರ ಬರೀತಿರಿ ಅದಕ “ಲಂಕೇಶ್ ಜೊತೆಗೆ” ಅಂತ ಟೈಟಲ್ ಇಡ್ರಲ್ಲಾ ಎಂದಿದ್ದರು. ಆ ಪುಸ್ತಕವನ್ನು ಅವರಿಗೆ ಕೊಡಲು ಇಂದು ನಾಳೆ ಎನ್ನುತ್ತಿದ್ದ ನನಗೆ ಕೊರೊನಾ ಸರಿಯಾದ ಉತ್ತರ ಕೊಟ್ಟಿತು. ಆರೋಗ್ಯದ ವಿಷಯದಲ್ಲಿ ತುಂಬ ಶಿಸ್ತಿನ ವ್ಯಕ್ತಿಯಾಗಿದ್ದ ಯೋಗಪ್ಪನವರು ಮಗನ ಮದುವೆ ಸಲುವಾಗಿ ಲಗ್ನಪತ್ರಿಕೆ ಕೊಡಲು ಹೋದಾಗ ಕೊರೊನಾಕ್ಕೆ ಬಲಿಯಾಗಿದ್ದಾರೆ. ಅವರ ಪತ್ನಿ ಮತ್ತು ಮಗ ಚೇತರಿಸಿಕೊಂಡಿರುವುದು ಸುದೈವ. ಈಗಿನ ಸರಕಾರದ ಸುಮಾರು ಜನ ನಮಗೊಬ್ಬ ಸಮರ್ಥ ಪಿಎಸ್ ಬೇಕಾಗಿದ್ದಾರೆಂದು ವಿಚಾರಿಸುತ್ತಿದ್ದಾಗ ಬಸವರಾಜ ಹೊರಟ್ಟಿಯವರ ಗಮನಕ್ಕೆ ಯೋಗಪ್ಪನವರು ಬಂದಿದ್ದರು. ಇನ್ನೇನು ನೇಮಕ ಹೊರಬೀಳುವ ಸಮಯಕ್ಕೆ ಸರಿಯಾಗಿ ಅಪ್ಪ ಮಕ್ಕಳ ಪಕ್ಷ ತಮ್ಮ ಕಡೆಯವರೊಬ್ಬರನ್ನು ಹೊರಟ್ಟಿಯವರ ಮೇಲೆ ಹೇರಿದ್ದರು. ಎಂದಿನಂತೆ ಯೋಗಪ್ಪನವರು “ಬೇಷಾತು ಬಿಡ್ರಿ” ಎಂದು ನೆಮ್ಮದಿಯಾಗಿದ್ದರು.

ಯೋಗಪ್ಪನವರ ಬರವಣಿಗೆ ಕಡಿಮೆಯಿದ್ದರೂ ಅವು ಮತ್ತೆ ಮತ್ತೆ ಓದುವಂತಹ ತೂಕವುಳ್ಳ ಕೃತಿಗಳಾಗಿವೆ. ’ದೇವರ ಹೆಸರಲ್ಲಿ ಪ್ರಮಾಣ ಮಾಡಿ’ ಎಂಬ ಕಾದಂಬರಿ, ’ಆರಾಮ ಕುರ್ಚಿ’ ಎಂಬ ಕಥಾಸಂಕಲನ, ’ರೂಪಕ ಲೇಖಕರು’, ’ಪ್ರೀತಿಯೆಂಬುದು ಚಂದ್ರನ ದಯೆ’, ನೀಲು ಕುರಿತ ವಿಶ್ಲೇಷಣೆ ಇವೆಲ್ಲಾ ಕನ್ನಡ ಸಾಹಿತ್ಯಕ್ಕೆ ಯೋಗಪ್ಪನವರು ನೀಡಿದ ಅಮೂಲ್ಯ ಕಾಣಿಕೆಗಳಾಗಿವೆ.


ಇದನ್ನೂ ಓದಿ: ದ್ವೇಷ-ಅಸೂಯೆ ಮತ್ತು ಹಿಂಸೆಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡದಿರೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...