Homeಮುಖಪುಟಶ್ರದ್ಧಾಂಜಲಿ: ಲಂಕೇಶರ ಆಪ್ತ ನಮ್ಮ ಯೋಗಪ್ಪನವರು

ಶ್ರದ್ಧಾಂಜಲಿ: ಲಂಕೇಶರ ಆಪ್ತ ನಮ್ಮ ಯೋಗಪ್ಪನವರು

ಜಗತ್ತಿನ ಲೇಖಕರ ಬಗ್ಗೆ ಯೋಗಪ್ಪನವರು ಮಾತನಾಡುತ್ತಿದ್ದರೆ, ಲಂಕೇಶ್ ತಮ್ಮ ಅಭಿಪ್ರಾಯವನ್ನು ಸೇರಿಸುತ್ತ ವಿಸ್ಕಿ ಗುಳುಕರಿಸುವುದನ್ನು ಮರೆತು ಆಲಿಸುತ್ತಿದ್ದರು...

- Advertisement -
- Advertisement -

ನಮ್ಮ ಯೋಗಪ್ಪನವರನ್ನು ಕೊರೊನಾ ಬಲಿ ಪಡೆದಿದೆ. ಇದು ಕನ್ನಡ ಸಾಹಿತ್ಯಾಕ್ಕಾದ ದೊಡ್ಡ ನಷ್ಟ. ಏಕೆಂದರೆ, ಯೋಗಪ್ಪನವರು ಇನ್ನೂ ಮಹತ್ತರವಾದುದನ್ನು ಬರೆಯುವವರಿದ್ದರು. ಅವರು ಲಂಕೇಶರಿಗೆ ಪರಿಚಯವಾದುದ್ದೇ ತಮ್ಮ ಗಟ್ಟಿಯಾದ ಬರಹ ಮತ್ತು ಓದಿನ ಮುಖಾಂತರ. ಇಂಗ್ಲಿಷ್ ಸಾಹಿತ್ಯದ ಓದಿನ ವಿಷಯದಲ್ಲಿ ಪಾಂಡಿತ್ಯದ ಔನ್ನತ್ಯದಲ್ಲಿದ್ದ ಯೋಗಪ್ಪನವರು ನಮ್ಮಂತವರ ಜೊತೆಯೂ ಸಹಜವಾದ ಸ್ನೇಹದಿಂದಿದ್ದರು. ಅವರು ಲಂಕೇಶ್ ಜೊತೆ ಮಾತನಾಡುತ್ತ ಕುಳಿತಿದ್ದರೆ ನಾವು ಉಸಿರೆತ್ತದೆ ಸುಮ್ಮನೆ ಕೇಳಿಸಿಕೊಳ್ಳುವಂತಾಗುತ್ತಿತ್ತು.

ಜಗತ್ತಿನ ಲೇಖಕರ ಬಗ್ಗೆ ಯೋಗಪ್ಪನವರು ಮಾತನಾಡುತ್ತಿದ್ದರೆ, ಲಂಕೇಶ್ ತಮ್ಮ ಅಭಿಪ್ರಾಯವನ್ನು ಸೇರಿಸುತ್ತ ವಿಸ್ಕಿ ಗುಳುಕರಿಸುವುದನ್ನು ಮರೆತು ಆಲಿಸುತ್ತಿದ್ದರು. ಆಗಲೇ ಅವರ ಮನದಾಳದಲ್ಲಿ ಈ ಜಗತ್ತಿನ ರೂಪಕ ಲೇಖಕರ ಬಗ್ಗೆ ಕನ್ನಡದ ಮನಸ್ಸುಗಳಿಗೆ ಸಂಕ್ಷಿಪ್ತವಾಗಿ ಕೊಡಬೇಕೆನ್ನಿಸಿರಬೇಕು. ಲಂಕೇಶ್ ಪತ್ರಿಕೆಯನ್ನ ನಿರಂತರ ಪ್ರಯೋಗಶೀಲತೆಗೆ ಗುರಿ ಮಾಡುತ್ತಿದ್ದರಿಂದ ಈ ಹಿಂದೆ ಎನ್.ಎಸ್ ಶಂಕರ್ ಕೈಲಿ ’ಚಂಚಲೆ’ ಮತ್ತು ನಟರಾಜ್ ಹುಳಿಯಾರ್‌ರಿಂದ ’ಬರೆವ ಬದುಕು’ ಅಂಕಣಗಳನ್ನು ಬರೆಸಿದ್ದರು. ಮಹಿಳಾ ಲೇಖಕಿಯರಿಂದ ’ನಿಮ್ಮಿ’ ಬರೆಸಿದ್ದರು. ಇವನ್ನೆಲ್ಲಾ ಶುರುಮಾಡಿ ಪತ್ರಿಕೆಯ ನೌಕರರಿಗೆ ಮುಂದುವರಿಸಲು ಬಿಡುತ್ತಿದ್ದರು.

ಹಾಗೆಯೇ ಯೋಗಪ್ಪನವರಿಂದ ಜಗತ್ತಿನ ವಿಸ್ಮಯಕಾರಿ ಲೇಖಕರ ಬಗೆಗಿನ ಸಂಗತಿಗಳನ್ನು ಬರೆಸುತ್ತಿದ್ದರು. ಪತ್ರಿಕೆಯ ಸಾಹಿತ್ಯ ಮತ್ತು ರಾಜಕಾರಣದ ಸಮತೂಕವನ್ನು ನಿಭಾಯಿಸುವುದರಲ್ಲಿ ಯೋಗಪ್ಪನವರ ಬರವಣಿಗೆ ಮಹತ್ವ ಪಡೆದುಕೊಂಡಿದ್ದವು.

ಅವರು ನನಗೆ ಅಷ್ಟಾಗಿ ಪರಿಚಯವಿಲ್ಲದ ಸಮಯದಲ್ಲಿ ಅವರ ಗೆಳೆಯನಂತಿದ್ದ ಉತ್ತರ ಕರ್ನಾಟಕದ ವರದಿಗಾರನೊಬ್ಬ ಲಂಕೇಶರಿಗೆ ಯೋಗಪ್ಪನವರ ವಿಷಯದಲ್ಲಿ ಚಾಡಿ ಹೇಳುತ್ತ ಕುಳಿತಿದ್ದ. ಅದನ್ನ ಕೇಳಿಸಿಕೊಂಡ ನಾನು ಇನ್ನು ಯೋಗಪ್ಪನವರು ಪತ್ರಿಕೆಯಿಂದ ಹೊರನಡೆದಂತೆಯೇ ಎಂದು ಭಾವಿಸಿದ್ದೆ. ಆದರೆ ಲಂಕೇಶ್ ಚಾಡಿ ಹೇಳಿದವನ ಮಾತನ್ನು ಪಕ್ಕಕ್ಕಿಟ್ಟು ಯೋಗಪ್ಪನವರನ್ನು ಗೌರವಿಸಿದ್ದರು. ಆಗೊಮ್ಮೆ ಪತ್ರಿಕೆ ಆಫೀಸಿನಲ್ಲಿ ಶರ್ಮರ ಕಾವ್ಯ ಕುರಿತ ಚರ್ಚೆಯಲ್ಲಿ ಯೋಗಪ್ಪನವರು ಶರ್ಮರ ಎದುರೇ ಅವರ ಕಾವ್ಯದ ಅಂತರಾಳವನ್ನು ಅನಾವರಣ ಮಾಡಿದ್ದರು. ಇದರಿಂದ ಕೆರಳಿದ ಶರ್ಮರು ಯೋಗ್ಯಪ್ಪನವರು ಎಂದು ವ್ಯಂಗ್ಯವಾಗಿ ಮೂದಲಿಸಿದ್ದರು. ಆದರೂ ಯೋಗಪ್ಪನವರು ಅದನ್ನು ಮನಸ್ಸಿಗೆ ಹಾಕಿಕೊಳ್ಳದೆ ತುಟಿಬಿರಿದರು. ಆಗ ನಟರಾಜ್ ಹುಳಿಯಾರ್ ಮತ್ತು ಲಂಕೇಶರು ಯೋಗಪ್ಪನವರ ವ್ಯಾಖ್ಯಾನವನ್ನು ಸಮರ್ಥಿಸಿಕೊಂಡಿದ್ದರು.

ಒಮ್ಮೆ ಪಶುಸಂಗೋಪನಾ ಸಚಿವರಾಗಿದ್ದ ಬಿ.ಬಿ ನಿಂಗಯ್ಯ ನನ್ನ ಗೆಳೆಯರಾದ ಕಾರಣಕ್ಕೆ ಆಫೀಸಿಗೆ ಕರೆದರು. ಹೋದಾಗ ಇಲ್ಲೆ ಊಟ ಮಾಡಿ ಎಂದರು. ಆಯ್ತು ಎಂದು ಊಟಕ್ಕೆ ಕುಳಿತಾಗ ನಿಂಗಯ್ಯನವರಿಗೆ ಪಿ.ಎಸ್ ಆಗಿದ್ದ ಯೋಗಪ್ಪನವರು ವಿಧೇಯ ಪರಿಚಾರಕನಂತೆ ಊಟ ಬಡಿಸಿದ್ದು ನಾನು ಮರೆಯಲಾಗದ ಮುಜುಗರಕ್ಕೆ ಈಡುಮಾಡಿತ್ತು. ಆದರೆ ಯೋಗಪ್ಪನವರಿಗೆ ಏನೂ ಅನ್ನಿಸಿರಲಿಲ್ಲ ಬದಲಿಗೆ ಗೆಳೆಯನಿಗೆ ಆತಿಥ್ಯ ನೀಡಿದ ಖುಷಿಯಲ್ಲಿದ್ದರು.

ಅವರು ಪಿ.ಎಸ್‌ ಆಗಿ ಕೆಲಸ ಮಾಡಿದ ಮಂತ್ರಿಗಳು ನೆನೆಸಿಕೊಳ್ಳುವಂತಹ ಅಧಿಕಾರಿಯಾಗಿದ್ದರು. ಅವರು ಉದಾಸಿ ಬಳಿಯಿದ್ದಾಗ ನಾನೊಮ್ಮೆ ಹೋಗಿದ್ದೆ. ನನ್ನನ್ನು ಉದಾಸಿಗೆ ಪರಿಚಯಿಸಿದ್ದನ್ನು ನೋಡಿ ದಂಗು ಬಡಿದಿದ್ದೆ. ಏಕೆಂದರೆ, ನನ್ನ ಕಟ್ಟೆಪುರಾಣವನ್ನು ಆ ರೂಪದಲ್ಲಿ ಉದಾಸಿಗೆ ವಿವರಿಸಿದ್ದರು. ಉದಾಸಿ ಕೂಡ ಎಂ.ಪಿ ಪ್ರಕಾಶರ ಒಡನಾಡಿಯಾದ್ದರಿಂದ ಯೋಗಪ್ಪನವರ ಮಾತುಗಳನ್ನು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಮುಂದೆ ನಾನು ಕಟ್ಟೆಪುರಾಣವನ್ನು ಪುಸ್ತಕವಾಗಿ ಪ್ರಕಟಿಸಿದಾಗ ಯೋಗಪ್ಪನವರಿಂದಲೇ ಮುನ್ನುಡಿ ಬರೆಸಿದ್ದೆ.

“ಪ್ರೀತಿಯೆಂಬುದು ಚಂದ್ರನ ದಯೆ” ಎಂಬ ಕಾವ್ಯದ ಗಣಿಯಂತಿರುವ ಪುಸ್ತಕವನ್ನು ಅವರು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಈಗಾಗಲೇ ಕೆಎಎಸ್ ಅಧಿಕಾರಿಯಾಗಿರುವ ಅವರ ಮಗಳೊಂದಿಗೆ ದಿಢೀರನೆ ಪತ್ರಿಕೆ ಆಫೀಸಿಗೆ ಬಂದು ಗೌರಿ ಕೈಯಿಂದ ಬಿಡುಗಡೆ ಮಾಡಿಸಿದರು. ನಂತರ ಕ್ರಿಕೆಟ್ ಕ್ಲಬ್ಬಿನಲ್ಲಿ ಗೌರಿ, ಸತೀಶ್, ಶ್ರೀನಿವಾಸ ಕರಿಯಪ್ಪ ಮತ್ತು ಈ ಚಂದ್ರನಿಗೆ ಪಾರ್ಟಿ ಕೊಟ್ಟರು. ಸಾಮಾನ್ಯವಾಗಿ ಯಾರಾದರೂ ಕುಡಿಸಿದಾಗ ಆಗುವಂತೆಯೇ, ಜಾಸ್ತಿ ಕುಡಿದು ಪೊಲೀಸರಿಗೆ ಸಿಕ್ಕಿಬಿದ್ದೆವು. ಆಗ ಪೊಲೀಸರಿಗೆ, ಕೆಎಎಸ್ ಅಧಿಕಾರಿ ಮತ್ತು ಕನ್ನಡದ ದೊಡ್ಡ ಸಾಹಿತಿ ಯೋಗಪ್ಪನವರು ಪಾರ್ಟಿ ಕೊಟ್ಟರು, ಆದ್ದರಿಂದ ಬಿಡಿ ಸಾರ್ ಎಂದೆವು. ಸಾಹಿತಿ ಪಾರ್ಟಿ ಕೊಟ್ರು ಅಂತ ಇಷ್ಟೊಂದೇನ್ರಿ ಕುಡಿಯದು. ಈ ಕಡೆ ಬನ್ನಿ ಗಾಡಿ ಹಾಕಿ ಎಂದರು. ದಿಕ್ಕು ಕಾಣದ ನಾನು  ಕೊನೆಗೆ ಕಷ್ಟಪಟ್ಟು ಬಿಡಿಸಿಕೊಂಡು ಬರುವಷ್ಟರಲ್ಲಿ ಅರ್ಧ ರಾತ್ರಿಯಾಯ್ತು. ಇದನ್ನು ಯೋಗಪ್ಪನವರಿಗೆ ಹೇಳಿದಾಗ, ಅದಾಗಲೇ ಜಗತ್ತಿನ ರೂಪಕ ಲೇಖಕರ ಬಗ್ಗೆ ಅರೆದು ಕುಡಿದಿದ್ದ ಯೋಗಪ್ಪನವರು ತುಟಿ ಬಿರಿದು ಹೌದ್ರಾ ಎಂದಿದ್ದರು!

ಅವರು ’ಪ್ರೀತಿಯೆಂಬುದು ಚಂದ್ರನ ದಯೆ’ ಎಂಬ ಪುಸ್ತಕ ಕೊಟ್ಟು ಅಭಿಪ್ರಾಯ ಕೇಳಿದ್ದರು. ಆಗ ನಾನು ಫೋನು ಮಾಡಿ “ಸಂಗವ್ವಕ್ಕನ ಮುದ್ದಿನ.. ಬನಶಂಕರಿ ಜಾತ್ರೆಯಲ್ಲಿ ಮಾಯವಾದವಲ್ಲೊ ಎಂಬ ಹಾಡಿನ ಸಾಲುಗಳನ್ನು ರಾಗವಾಗಿ ಹೇಳಿ ಬನಶಂಕರಿ ಜಾತ್ರೆ ನೋಡಬೇಕಲ್ರಿ ಸರ ಎಂದಿದ್ದೆ. ಅದಕೇನಂತೆ ಈ ಬಾರಿ ನೋಡೋನು ಎಂದು ಆ ಜಾತ್ರೆಯನ್ನು ವರ್ಣಿಸಿದ್ದರು.

ಕಳೆದ ಕೊರೊನಾ ಟೈಮಿನಲ್ಲಿ ನಾನು ಮನೆಯಲ್ಲೇ ಇದ್ದು ಲಂಕೇಶರ ಒಡನಾಟದಲ್ಲಿನ ವಿವರಕ್ಕೆ ರೂಪಕೊಟ್ಟು ಒಂದು ಪುಸ್ತಕ ಮಾಡಿ ಅದಕ್ಕೊಂದು ಟೈಟಲ್ ಬೇಕು ಎಂದು ಕೇಳಿದ್ದೆ. ಅದಕ್ಕವರು, ಲಂಕೇಶ್ ಜೊತೆಯಾಗಿದ್ದವುರು ಏನೇನಾದ್ರು ಅನ್ನದನ್ನ ನೀವು ಮಾತ್ರ ಬರೀತಿರಿ ಅದಕ “ಲಂಕೇಶ್ ಜೊತೆಗೆ” ಅಂತ ಟೈಟಲ್ ಇಡ್ರಲ್ಲಾ ಎಂದಿದ್ದರು. ಆ ಪುಸ್ತಕವನ್ನು ಅವರಿಗೆ ಕೊಡಲು ಇಂದು ನಾಳೆ ಎನ್ನುತ್ತಿದ್ದ ನನಗೆ ಕೊರೊನಾ ಸರಿಯಾದ ಉತ್ತರ ಕೊಟ್ಟಿತು. ಆರೋಗ್ಯದ ವಿಷಯದಲ್ಲಿ ತುಂಬ ಶಿಸ್ತಿನ ವ್ಯಕ್ತಿಯಾಗಿದ್ದ ಯೋಗಪ್ಪನವರು ಮಗನ ಮದುವೆ ಸಲುವಾಗಿ ಲಗ್ನಪತ್ರಿಕೆ ಕೊಡಲು ಹೋದಾಗ ಕೊರೊನಾಕ್ಕೆ ಬಲಿಯಾಗಿದ್ದಾರೆ. ಅವರ ಪತ್ನಿ ಮತ್ತು ಮಗ ಚೇತರಿಸಿಕೊಂಡಿರುವುದು ಸುದೈವ. ಈಗಿನ ಸರಕಾರದ ಸುಮಾರು ಜನ ನಮಗೊಬ್ಬ ಸಮರ್ಥ ಪಿಎಸ್ ಬೇಕಾಗಿದ್ದಾರೆಂದು ವಿಚಾರಿಸುತ್ತಿದ್ದಾಗ ಬಸವರಾಜ ಹೊರಟ್ಟಿಯವರ ಗಮನಕ್ಕೆ ಯೋಗಪ್ಪನವರು ಬಂದಿದ್ದರು. ಇನ್ನೇನು ನೇಮಕ ಹೊರಬೀಳುವ ಸಮಯಕ್ಕೆ ಸರಿಯಾಗಿ ಅಪ್ಪ ಮಕ್ಕಳ ಪಕ್ಷ ತಮ್ಮ ಕಡೆಯವರೊಬ್ಬರನ್ನು ಹೊರಟ್ಟಿಯವರ ಮೇಲೆ ಹೇರಿದ್ದರು. ಎಂದಿನಂತೆ ಯೋಗಪ್ಪನವರು “ಬೇಷಾತು ಬಿಡ್ರಿ” ಎಂದು ನೆಮ್ಮದಿಯಾಗಿದ್ದರು.

ಯೋಗಪ್ಪನವರ ಬರವಣಿಗೆ ಕಡಿಮೆಯಿದ್ದರೂ ಅವು ಮತ್ತೆ ಮತ್ತೆ ಓದುವಂತಹ ತೂಕವುಳ್ಳ ಕೃತಿಗಳಾಗಿವೆ. ’ದೇವರ ಹೆಸರಲ್ಲಿ ಪ್ರಮಾಣ ಮಾಡಿ’ ಎಂಬ ಕಾದಂಬರಿ, ’ಆರಾಮ ಕುರ್ಚಿ’ ಎಂಬ ಕಥಾಸಂಕಲನ, ’ರೂಪಕ ಲೇಖಕರು’, ’ಪ್ರೀತಿಯೆಂಬುದು ಚಂದ್ರನ ದಯೆ’, ನೀಲು ಕುರಿತ ವಿಶ್ಲೇಷಣೆ ಇವೆಲ್ಲಾ ಕನ್ನಡ ಸಾಹಿತ್ಯಕ್ಕೆ ಯೋಗಪ್ಪನವರು ನೀಡಿದ ಅಮೂಲ್ಯ ಕಾಣಿಕೆಗಳಾಗಿವೆ.


ಇದನ್ನೂ ಓದಿ: ದ್ವೇಷ-ಅಸೂಯೆ ಮತ್ತು ಹಿಂಸೆಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡದಿರೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...