Homeಮುಖಪುಟಅಪಘಾತದಿಂದ ಸತ್ತ ಮಗನ ನೆನಪಲ್ಲಿ 650ಕ್ಕೂ ಹೆಚ್ಚು ರಸ್ತೆ ಹೊಂಡಗಳನ್ನು ಮುಚ್ಚಿದ ಮಹಾನ್ ತಂದೆ!

ಅಪಘಾತದಿಂದ ಸತ್ತ ಮಗನ ನೆನಪಲ್ಲಿ 650ಕ್ಕೂ ಹೆಚ್ಚು ರಸ್ತೆ ಹೊಂಡಗಳನ್ನು ಮುಚ್ಚಿದ ಮಹಾನ್ ತಂದೆ!

ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕವೇ ರಸ್ತೆ ಹೊಂಡಕ್ಕೆ ಬಲಿಯಾದ ತನ್ನ ಮಗನ ನೆನಪನ್ನು ಜೀವಂತವಾಗಿರಿಸಿಕೊಂಡಿರುವ ಈ ವಾತ್ಸಲ್ಯಮಯೀ ತಂದೆಗೆ ಇತರ ತಂದೆತಾಯಿಗಳು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು.

- Advertisement -
- Advertisement -

ರಸ್ತೆಯ ನಡುವಿನ ಹೊಂಡದಿಂದ ಅಪಘಾತದಲ್ಲಿ ಸಾವನ್ನಪ್ಪಿದ್ದ ತನ್ನ ಮಗನ ನೆನಪಿನಲ್ಲಿಯೇ ಸಾಧ್ಯವಾದಷ್ಟು ಮಟ್ಟಿಗೆ ಅಪಘಾತ ಸಂಭವಿಸದಂತೆ ತಡೆಯಲು ಇಲ್ಲೊಬ್ಬ ಭಗೀರಥ ಹೊರಟಿದ್ದಾರೆ. ರಸ್ತೆಯ ಹೊಂಡಗಳನ್ನು ಸಮತಟ್ಟಾಗಿಸುವ ಕೆಲಸವನ್ನು ದಾದಾರಾವ್ ಭಿಲ್ಲೋರೆ ಮಾಡಿಕೊಂಡು ಬರುತ್ತಿದ್ದಾರೆ. ಇವರ ಕೆಲಸಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

2015 ರಲ್ಲಿ ದಾದಾರಾವ್ ಭಿಲ್ಲೋರೆಯವರ 16 ವರ್ಷ ಪ್ರಾಯದ ಮಗ ಚಲಿಸುತ್ತಿದ್ದ ಗಾಡಿ ರಸ್ತೆ ಹೊಂಡಕ್ಕೆ ಸಿಕ್ಕಿ ಅಪಘಾತಕ್ಕೀಡಾಗಿ ಮೃತ ಪಟ್ಟನು. ಒಂದು ತಿಂಗಳ ನಂತರ ಮಗನ ಅಕಾಲಿಕ ಮರಣದ ಆಘಾತದಿಂದ ಹೊರ ಬಂದ ಭಿಲ್ಲೋರೆ, ಇಂತಹ ದುಃಖ ಬೇರಾವ ತಂದೆಗೂ ಬಾರದಿರಲಿ ಎಂದು ಮುಂಬೈ ರಸ್ತೆ ಹೊಂಡಗಳನ್ನು ಮುಚ್ಚುವುದನ್ನು ತನ್ನ ಬದುಕಿನ ಗುರಿಯಾಗಿಸಿಕೊಂಡಿದ್ದಾರೆ. ಅವರ ವಿಡಿಯೋ ನೋಡಿ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಂದಿನಿಂದ ಭಿಲ್ಲೋರೆ ಮುಂಬೈಯಲ್ಲಿ ಎಲ್ಲೇ ರಸ್ತೆ ಹೊಂಡ ಕಾಣಿಸಿದರೂ, ಪೇವರ್ ಬ್ಲಾಕ್ ತುಂಡು, ಮರಳು, ಜೆಲ್ಲಿ ಇತ್ಯಾದಿ ತಂದು ಸುರಿದು ಅದನ್ನು ಆದಷ್ಟು ಸಮತಟ್ಟುಗೊಳಿಸುತ್ತಾರೆ.

2015 ರಿಂದ ಈವರೆಗೆ ದಾದಾ ಭಿಲ್ಲೋರೆ ಕನಿಷ್ಟ 650ಕ್ಕೂ ಹೆಚ್ಚು ರಸ್ತೆ ಹೊಂಡಗಳನ್ನು ಹೀಗೇ ಮುಚ್ಚಿದ್ದು, ಎಷ್ಟೋ ಸಂಭಾವ್ಯ ಪ್ರಾಣ ಹಾನಿಗಳನ್ನು ತಪ್ಪಿಸಿದ್ದಾರೆ. ಅಷ್ಟೇ ಅಲ್ಲದೇ, ಹೀಗೆ ಹೊಂಡಗಳು ಬೀಳುವ ರಸ್ತೆಯ ಕಾಂಟ್ರಾಕ್ಟರ್, ಮುನಿಸಿಪಾಲಿಟಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕವೇ ರಸ್ತೆ ಹೊಂಡಕ್ಕೆ ಬಲಿಯಾದ ತನ್ನ ಮಗನ ನೆನಪನ್ನು ಜೀವಂತವಾಗಿರಿಸಿಕೊಂಡಿರುವ ಈ ವಾತ್ಸಲ್ಯಮಯೀ ತಂದೆಗೆ ಇತರ ತಂದೆತಾಯಿಗಳು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...