Homeಅಂಕಣಗಳುಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. ಆತ ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು.

- Advertisement -
- Advertisement -

ಅಶ್ಫಾಕುಲ್ಲಾ ಖಾನ್ ಬದುಕಿದ್ದಿದ್ದರೆ ಇದೇ ಅಕ್ಟೋಬರ್ 22ರಂದು ಅವರಿಗೆ 120 ವರ್ಷ ತುಂಬುತ್ತಿತ್ತು. ಉತ್ತರಪ್ರದೇಶದ ಶಹಜಹಾನಪುರ ಆತನ ಹುಟ್ಟೂರು. ಖಾನ್ ಬೆಳೆದದ್ದು ಗಾಂಧೀಜಿ ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ನೀಡದಂತೆ ಕರೆ ನೀಡಿ ಅಸಹಕಾರ ಚಳವಳಿ ಹೂಡಿದ್ದ ದಿನಗಳಲ್ಲಿ.

ಹಿಂದುಸ್ತಾನಿ ರಿಪಬ್ಲಿಕನ್ ಅಸೋಸಿಯೇಷನ್‍ನ (ಎಚ್.ಆರ್.ಎ) ಕ್ರಾಂತಿಕಾರಿ ತಲೆಯಾಳು ರಾಮಪ್ರಸಾದ್ ಬಿಸ್ಮಿಲ್ ಸಂಗಡ 1924ರಲ್ಲಿ ಕಾಕೋರಿ ರೈಲು ದರೋಡೆಯಲ್ಲಿ ಭಾಗವಹಿಸಿದ್ದ ಖಾನ್ ಕೇವಲ 27ನೆಯ ವಯಸ್ಸಿನಲ್ಲಿ ಬ್ರಿಟಿಷರ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಬ್ರಿಟಿಷ್ ವಿರೋಧಿ ಬೆಂಕಿಯುಂಡೆ.
ಕಾಕೋರಿಯಿಂದ ಲಖ್ನೋಗೆ ರೈಲುಗಾಡಿಯಲ್ಲಿ ಸಾಗಿಸಲಾಗುತ್ತಿದ್ದ ಬ್ರಿಟಿಷ್ ಸರ್ಕಾರಿ ಖಜಾನೆಯನ್ನು ಲೂಟಿ ಮಾಡಿ, ಆ ಹಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಬೇಕಾಗಿದ್ದ ಹತಾರುಗಳನ್ನು ಖರೀದಿಸುವುದು ಕಾಕೋರಿ ದರೋಡೆ ಹಿಂದಿನ ಕಾರ್ಯಸೂಚಿಯಾಗಿತ್ತು.

ಉರ್ದು ಕಾವ್ಯವೆಂದರೆ ಖಾನ್‍ಗೆ ಅಚ್ಚುಮೆಚ್ಚು. ವಾರಸಿ ಇಲ್ಲವೇ ಹಜರತ್ ಕಾವ್ಯನಾಮದೊಂದಿಗೆ ಬರೆಯುತ್ತಿದ್ದರು. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ರಾಮಪ್ರಸಾದ್ ಬಿಸ್ಮಿಲ್ ಕೂಡ ಸ್ವಾತಂತ್ರ್ಯ ಹೋರಾಟದ ಕೆಚ್ಚಿಗೆ ಮತ್ತು ಉರ್ದು ಕವಿತೆಗೆ ಹೆಸರಾಗಿದ್ದವರು. ಅವರ ಉರ್ದು ಕಾವ್ಯಪ್ರತಿಭೆ ಮತ್ತು ಕಲಿತನದ ಕತೆಗಳನ್ನು ಎಳೆಯ ಖಾನ್ ತನ್ನ ಅಣ್ಣನಿಂದ ಕೇಳಿ ಅರಿತಿದ್ದ. ಅವಕ್ಕೆ ಮಾರುಹೋಗಿ ಅಭಿಮಾನಿಯೇ ಆಗಿಬಿಟ್ಟಿದ್ದ. ಚೌರಿಚೌರಾ ಹಿಂಸಾತ್ಮಕ ಘಟನೆಯ ನಂತರ ಗಾಂಧೀಜಿ ತಮ್ಮ ಅಸಹಕಾರ ಚಳವಳಿಯನ್ನು ವಾಪಸು ತೆಗೆದುಕೊಂಡಿದ್ದರು. ಅವರ ಈ ಹೆಜ್ಜೆ ಸಾವಿರಾರು ಯುವ ಕ್ರಾಂತಿಕಾರಿಗಳಿಗೆ ತೀವ್ರ ನಿರಾಶೆ ಉಂಟು ಮಾಡಿತ್ತು. ಅಹಿಂಸಾತ್ಮಕ ಹಾದಿ ಕುರಿತು ಅವರಲ್ಲಿ ಭ್ರಮನಿರಸನ ಮೂಡಿಸಿತ್ತು. ಈ ಪೈಕಿ ಅಶ್ಫಾಕುಲ್ಲಾ ಖಾನ್ ಕೂಡ ಒಬ್ಬನಾಗಿದ್ದ. ರಾಮಪ್ರಸಾದ್ ಬಿಸ್ಮಿಲ್ ಸಂಘಟನೆಯನ್ನು (ಎಚ್.ಆರ್.ಎ) ಸೇರಲು ತವಕಿಸಿದ. ಆದರೆ ಸೇರಿಸಿಕೊಳ್ಳಲು ಆರಂಭದಲ್ಲಿ ಬಿಸ್ಮಿಲ್ ಉತ್ಸುಕತೆ ತೋರಲಿಲ್ಲ. ಶಹಜಹಾನಪುರದ ಇತರೆ ಪಠಾಣ ಕುಟುಂಬಗಳಂತೆ ಖಾನ್ ಕುಟುಂಬ ಕೂಡ ಸಿರಿವಂತಿಕೆ ಸೂಸಿತ್ತು. ತಂದೆ ಕೊತ್ವಾಲ ಹುದ್ದೆಯಲ್ಲಿದ್ದರು. ಅಂತಿಮವಾಗಿ ಇಬ್ಬರನ್ನೂ ಹತ್ತಿರ ತಂದದ್ದು ಉರ್ದು ಕವಿತೆಯೆಡೆಗಿನ ಕಡುಪ್ರೇಮ ಮತ್ತು ತಾಯ್ನೆಲವನ್ನು ದಾಸ್ಯದಿಂದ ಬಿಡಿಸುವ ಪಣ ತೊಟ್ಟ ನಿಗಿನಿಗಿ ದೇಶಭಕ್ತಿ. ಬ್ರಾಹ್ಮಣ ಮತ್ತು ಮುಸ್ಲಿಮ್ ತರುಣರಿಬ್ಬರು ಪ್ರಸಿದ್ಧ ಪ್ರಾಣಸ್ನೇಹಿತರಾಗಿ ಇತಿಹಾಸ ಸೇರಿದರು.

PC : Facebook

ಬಂದೂಕು, ಬಾಂಬುಗಳಂತಹ ಹತಾರುಗಳ ಖರೀದಿಗೆ ಹಣ ಹೊಂದಿಸಲು ಇಬ್ಬರೂ ಹೂಡಿದ ಹಂಚಿಕೆ ಕಾಕೋರಿ ರೈಲು ದರೋಡೆ. 1925ರ ಆಗಸ್ಟ್ ಒಂಬತ್ತರ ದರೋಡೆಯ ನಂತರ ಇವರಿಗೆ ಭಯೋತ್ಪಾದಕರು ಎಂಬ ಹಣೆಪಟ್ಟಿ ಹಚ್ಚುತ್ತದೆ ಬ್ರಿಟಿಷ್ ಸರ್ಕಾರ. ಬೇಟೆಯಾಡಿ ಸೆರೆಹಿಡಿದು ಗಲ್ಲಿಗೇರಿಸಿದ ನಾಲ್ವರು ಕ್ರಾಂತಿಕಾರಿಗಳ ಪೈಕಿ ಬಿಸ್ಮಿಲ್ ಮತ್ತು ಖಾನ್ ಪ್ರಮುಖರು. ಉಳಿದಿಬ್ಬರು ರಾಜೇಂದ್ರನಾಥ ಲಾಹಿರಿ ಮತ್ತು ರೋಶನ್ ಸಿಂಗ್.

ಯುವಕ ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. 1927ರ ಡಿಸೆಂಬರ್ 19ರಂದು ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು. ಸ್ವಾತಂತ್ರ್ಯದ ಜೊತೆಗೆ ಸಮಾನತೆ ಸಾಧಿಸುವುದೂ ಅಶ್ಫಾಕ್ ಆಸೆಯಾಗಿತ್ತು.

“ಬಡವರು ಸಂತಸದಿಂದ ಸಲೀಸಾಗಿ ಬಾಳುವೆ ಮಾಡಲು ಸಾಧ್ಯವಿರುವಂತಹ ಸ್ವಾತಂತ್ರ್ಯ ಹಿಂದೂಸ್ತಾನಕ್ಕೆ ಬೇಕಿದೆ. ವರ್ಕ್‍ಶಾಪಿನಲ್ಲಿ ಕೆಲಸ ಮಾಡುವ ಮೆಕ್ಯಾನಿಕ್ ಅಬ್ದುಲ್ಲಾ, ಚಪ್ಪಲಿ ಹೊಲೆಯುವ ಧನಿಯಾ ಹಾಗೂ ಸಾಧಾರಣ ರೈತರು ಲಖ್ನೋದ ನವಾಬರ ಅರಮನೆಯಲ್ಲಿ ಗಣ್ಯರ ಮುಂದಿನ ಸಾಲುಗಳ ಕುರ್ಚಿಗಳಲ್ಲಿ ಇದಿರುಬದಿರಾಗಿ ಕುಳಿತುಕೊಳ್ಳುವ ದಿನಗಳು ಬರಬೇಕೆಂದು ದೇವರಲ್ಲಿ ಪ್ರಾರ್ಥಿಸುವೆ. ಕಮ್ಯುನಿಸ್ಟರೊಂದಿಗೆ ನನ್ನ ಸಮಹಮತವಿದೆ. ಬಡರೈತರು ಮತ್ತು ಅಸಹಾಯಕ ಕಾರ್ಮಿಕರಿಗಾಗಿ ನನ್ನ ಹೃದಯ ಸದಾ ಅಳುತ್ತಿರುತ್ತದೆ. ಕಾಕೋರಿ ದರೋಡೆ ಪ್ರಕರಣದ ನಂತರ ತಲೆ ಮರೆಸಿಕೊಂಡು ತಿರುಗುತ್ತಿದ್ದಾಗ ಇಂತಹ ಕುಟುಂಬಗಳೊಂದಿಗೆ ವಾಸವಿದ್ದೆ. ಅವರ ಬವಣೆ ನನ್ನ ಕಣ್ಣುಗಳ ತೇವವಾಗಿಸಿತ್ತು. ನಮ್ಮ ಪೇಟೆ ಪಟ್ಟಣ ನಗರಗಳು ಥಳಗುಟ್ಟುವುದು ಇವರಿಂದಾಗಿಯೇ. ನಮ್ಮ ಗಿರಣಿಗಳು, ಕಾರ್ಖಾನೆಗಳು ನಡೆಯುವ ಹಿಂದಿನ ಶ್ರಮ ಇವರದೇ. ಪ್ರಪಂಚದ ಪ್ರತಿ ಕಾಮಗಾರಿಯ ಹಿಂದೆ ಇರುವುದು ಇವರದೇ ಬೆವರು. ಬೆಳೆಯುವ-ಉತ್ಪಾದಿಸುವ ಈ ಶ್ರಮಿಕರನ್ನು ದುಃಖ-ದುಸ್ಥಿತಿಗಳು ಬಿಡದೆ ಬೆಂಬತ್ತಿವೆ. ಅವರ ಈ ಕಷ್ಟ ಕಣ್ಣೀರಿನ ಮೂಲಕಾರಣ ಬಿಳಿತೊಗಲಿನ ಒಡೆಯರು ಮತ್ತು ಅವರ ಏಜೆಂಟರು. ಹಳ್ಳಿ ಹಳ್ಳಿಗೆ ಹೋಗಿ, ಗಿರಣಿ ಕಾರ್ಖಾನೆಗಳಿಗೆ ತೆರಳಿ ಅವರ ದುಸ್ಥಿತಿಯನ್ನು ಅಧ್ಯಯನ ಮಾಡಬೇಕು ಮತ್ತು ಅವರಲ್ಲಿ ರಾಜಕೀಯ ಎಚ್ಚರವನ್ನು ಮೂಡಿಸಬೇಕು” ಎಂಬುದು ಖಾನ್‍ನ ಅಂತಿಮ ಸಂದೇಶವಾಗಿತ್ತು. ಆರ್ಥಿಕ ಸ್ವಾತಂತ್ರ್ಯದ ಜೊತೆ ಜೊತೆಗೆ ಸಾಮಾಜಿಕ-ಸಾಂಸ್ಕೃತಿಕ ಸಮಾನತೆಯೂ ಈ ಸಂದೇಶದಲ್ಲಿ ಸೇರಿತ್ತು ಎಂಬುದನ್ನು ಗಮನಿಸಬೇಕಿದೆ.

ಎಲ್ಲ ಬಗೆಯ ಪರಕೀಯ ಆಳ್ವಿಕೆ ನ್ಯಾಯಬಾಹಿರ. ಅಂಚಿನಲ್ಲಿ ಜೋತುಬಿದ್ದು ಜೀವ ಹಿಡಿದ ದೀನ ದರಿದ್ರರ ಹಕ್ಕುಗಳನ್ನು ಮಾನ್ಯ ಮಾಡದಿರುವ, ಬಂಡವಾಳಶಾಹಿಗಳು ಮತ್ತು ಜಮೀನುದಾರರ ಹಿತವನ್ನು ಕಾಪಾಡುವ, ಕಾರ್ಮಿಕರು ಮತ್ತು ರೈತರ ಸಮಾನ ಭಾಗವಹಿಸುವಿಕೆ ಇಲ್ಲದಿರುವ ಹಾಗೂ ಯಥಾಸ್ಥಿತಿವಾದಿ ತಾರತಮ್ಯಗಳು ಮತ್ತು ವಿಶೇಷಾಧಿಕಾರಗಳನ್ನು ಕಾಪಾಡಲು ಕಾಯಿದೆ ಕಾನೂನು ಮಾಡುವ ಯಾವುದೇ ಸರ್ಕಾರ ಕೂಡ ನ್ಯಾಯಬಾಹಿರ. ಭಾರತ ಸ್ವತಂತ್ರ ದೇಶವಾಗಿ ನಮ್ಮದೇ ಜನರ ಸರ್ಕಾರ ಬಂದ ನಂತರವೂ ಬಡವರು-ಬಲ್ಲಿದರು, ಉಳುವವರು-ಜಮೀನುದಾರರ ನಡುವಣ ತಾರತಮ್ಯ ಎಂದಿನಂತೆ ಕೊನೆಸಾಗಿದರೆ ಅದಕ್ಕಿಂತ ಹೀನಾಯ ಮತ್ತೊಂದೇನಿದೆ. ಸಮಾನತೆ ಎಂಬುದು ನೆಲೆಸುವ ತನಕ ಸ್ವಾತಂತ್ರ್ಯವನ್ನು ನೀಡಬೇಡ ಎಂದು ದೇವರಲ್ಲಿ ಪ್ರಾರ್ಥಿಸುವೆ. ಇಂತಹ ನಂಬಿಕೆಗಾಗಿ ನನಗೆ ಕಮ್ಯುನಿಸ್ಟ್ ಎಂಬ ಹಣೆಪಟ್ಟಿ ಹಚ್ಚಿದರೂ ಪರವಾಗಿಲ್ಲ. ನಾನು ದೇವರಲ್ಲಿ ನಂಬಿಕೆ ಉಳ್ಳವನು. ದೇವರು ಎಲ್ಲರನ್ನೂ ಸಮಾನರನ್ನಾಗಿಯೇ ಸೃಷ್ಟಿಸುತ್ತಾನೆ ಎಂಬ ಅಶ್ಫಾಕ್ ಮಾತುಗಳಲ್ಲಿ ಆವರ ಮಾನವೀಯ ಚಿಂತನೆ ಹರಳುಗಟ್ಟಿದೆ. ಹಿಂದೂ-ಮುಸ್ಲಿಮರನ್ನು ಒಡೆವ ಪಿತೂರಿಯ ಕುರಿತೂ ಆತ ಮಾತಾಡಿದ್ದರು. ಅಂತಹವರೇ ದೇಶದ ನಿಜ ಶತ್ರುಗಳು ಎಂದು ಬಣ್ಣಿಸಿದ್ದರು.

ಅಶ್ಫಾಕ್ ಶಂಕೆ- ಸಂದೇಹಗಳು ಇಂದಿನ ಭಾರತದಲ್ಲಿ ನಿಜರೂಪ ಧರಿಸಿ ಅಬ್ಬರಿಸಿವೆ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...