Homeಅಂಕಣಗಳುಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. ಆತ ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು.

- Advertisement -
- Advertisement -

ಅಶ್ಫಾಕುಲ್ಲಾ ಖಾನ್ ಬದುಕಿದ್ದಿದ್ದರೆ ಇದೇ ಅಕ್ಟೋಬರ್ 22ರಂದು ಅವರಿಗೆ 120 ವರ್ಷ ತುಂಬುತ್ತಿತ್ತು. ಉತ್ತರಪ್ರದೇಶದ ಶಹಜಹಾನಪುರ ಆತನ ಹುಟ್ಟೂರು. ಖಾನ್ ಬೆಳೆದದ್ದು ಗಾಂಧೀಜಿ ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ನೀಡದಂತೆ ಕರೆ ನೀಡಿ ಅಸಹಕಾರ ಚಳವಳಿ ಹೂಡಿದ್ದ ದಿನಗಳಲ್ಲಿ.

ಹಿಂದುಸ್ತಾನಿ ರಿಪಬ್ಲಿಕನ್ ಅಸೋಸಿಯೇಷನ್‍ನ (ಎಚ್.ಆರ್.ಎ) ಕ್ರಾಂತಿಕಾರಿ ತಲೆಯಾಳು ರಾಮಪ್ರಸಾದ್ ಬಿಸ್ಮಿಲ್ ಸಂಗಡ 1924ರಲ್ಲಿ ಕಾಕೋರಿ ರೈಲು ದರೋಡೆಯಲ್ಲಿ ಭಾಗವಹಿಸಿದ್ದ ಖಾನ್ ಕೇವಲ 27ನೆಯ ವಯಸ್ಸಿನಲ್ಲಿ ಬ್ರಿಟಿಷರ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಬ್ರಿಟಿಷ್ ವಿರೋಧಿ ಬೆಂಕಿಯುಂಡೆ.
ಕಾಕೋರಿಯಿಂದ ಲಖ್ನೋಗೆ ರೈಲುಗಾಡಿಯಲ್ಲಿ ಸಾಗಿಸಲಾಗುತ್ತಿದ್ದ ಬ್ರಿಟಿಷ್ ಸರ್ಕಾರಿ ಖಜಾನೆಯನ್ನು ಲೂಟಿ ಮಾಡಿ, ಆ ಹಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಬೇಕಾಗಿದ್ದ ಹತಾರುಗಳನ್ನು ಖರೀದಿಸುವುದು ಕಾಕೋರಿ ದರೋಡೆ ಹಿಂದಿನ ಕಾರ್ಯಸೂಚಿಯಾಗಿತ್ತು.

ಉರ್ದು ಕಾವ್ಯವೆಂದರೆ ಖಾನ್‍ಗೆ ಅಚ್ಚುಮೆಚ್ಚು. ವಾರಸಿ ಇಲ್ಲವೇ ಹಜರತ್ ಕಾವ್ಯನಾಮದೊಂದಿಗೆ ಬರೆಯುತ್ತಿದ್ದರು. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ರಾಮಪ್ರಸಾದ್ ಬಿಸ್ಮಿಲ್ ಕೂಡ ಸ್ವಾತಂತ್ರ್ಯ ಹೋರಾಟದ ಕೆಚ್ಚಿಗೆ ಮತ್ತು ಉರ್ದು ಕವಿತೆಗೆ ಹೆಸರಾಗಿದ್ದವರು. ಅವರ ಉರ್ದು ಕಾವ್ಯಪ್ರತಿಭೆ ಮತ್ತು ಕಲಿತನದ ಕತೆಗಳನ್ನು ಎಳೆಯ ಖಾನ್ ತನ್ನ ಅಣ್ಣನಿಂದ ಕೇಳಿ ಅರಿತಿದ್ದ. ಅವಕ್ಕೆ ಮಾರುಹೋಗಿ ಅಭಿಮಾನಿಯೇ ಆಗಿಬಿಟ್ಟಿದ್ದ. ಚೌರಿಚೌರಾ ಹಿಂಸಾತ್ಮಕ ಘಟನೆಯ ನಂತರ ಗಾಂಧೀಜಿ ತಮ್ಮ ಅಸಹಕಾರ ಚಳವಳಿಯನ್ನು ವಾಪಸು ತೆಗೆದುಕೊಂಡಿದ್ದರು. ಅವರ ಈ ಹೆಜ್ಜೆ ಸಾವಿರಾರು ಯುವ ಕ್ರಾಂತಿಕಾರಿಗಳಿಗೆ ತೀವ್ರ ನಿರಾಶೆ ಉಂಟು ಮಾಡಿತ್ತು. ಅಹಿಂಸಾತ್ಮಕ ಹಾದಿ ಕುರಿತು ಅವರಲ್ಲಿ ಭ್ರಮನಿರಸನ ಮೂಡಿಸಿತ್ತು. ಈ ಪೈಕಿ ಅಶ್ಫಾಕುಲ್ಲಾ ಖಾನ್ ಕೂಡ ಒಬ್ಬನಾಗಿದ್ದ. ರಾಮಪ್ರಸಾದ್ ಬಿಸ್ಮಿಲ್ ಸಂಘಟನೆಯನ್ನು (ಎಚ್.ಆರ್.ಎ) ಸೇರಲು ತವಕಿಸಿದ. ಆದರೆ ಸೇರಿಸಿಕೊಳ್ಳಲು ಆರಂಭದಲ್ಲಿ ಬಿಸ್ಮಿಲ್ ಉತ್ಸುಕತೆ ತೋರಲಿಲ್ಲ. ಶಹಜಹಾನಪುರದ ಇತರೆ ಪಠಾಣ ಕುಟುಂಬಗಳಂತೆ ಖಾನ್ ಕುಟುಂಬ ಕೂಡ ಸಿರಿವಂತಿಕೆ ಸೂಸಿತ್ತು. ತಂದೆ ಕೊತ್ವಾಲ ಹುದ್ದೆಯಲ್ಲಿದ್ದರು. ಅಂತಿಮವಾಗಿ ಇಬ್ಬರನ್ನೂ ಹತ್ತಿರ ತಂದದ್ದು ಉರ್ದು ಕವಿತೆಯೆಡೆಗಿನ ಕಡುಪ್ರೇಮ ಮತ್ತು ತಾಯ್ನೆಲವನ್ನು ದಾಸ್ಯದಿಂದ ಬಿಡಿಸುವ ಪಣ ತೊಟ್ಟ ನಿಗಿನಿಗಿ ದೇಶಭಕ್ತಿ. ಬ್ರಾಹ್ಮಣ ಮತ್ತು ಮುಸ್ಲಿಮ್ ತರುಣರಿಬ್ಬರು ಪ್ರಸಿದ್ಧ ಪ್ರಾಣಸ್ನೇಹಿತರಾಗಿ ಇತಿಹಾಸ ಸೇರಿದರು.

PC : Facebook

ಬಂದೂಕು, ಬಾಂಬುಗಳಂತಹ ಹತಾರುಗಳ ಖರೀದಿಗೆ ಹಣ ಹೊಂದಿಸಲು ಇಬ್ಬರೂ ಹೂಡಿದ ಹಂಚಿಕೆ ಕಾಕೋರಿ ರೈಲು ದರೋಡೆ. 1925ರ ಆಗಸ್ಟ್ ಒಂಬತ್ತರ ದರೋಡೆಯ ನಂತರ ಇವರಿಗೆ ಭಯೋತ್ಪಾದಕರು ಎಂಬ ಹಣೆಪಟ್ಟಿ ಹಚ್ಚುತ್ತದೆ ಬ್ರಿಟಿಷ್ ಸರ್ಕಾರ. ಬೇಟೆಯಾಡಿ ಸೆರೆಹಿಡಿದು ಗಲ್ಲಿಗೇರಿಸಿದ ನಾಲ್ವರು ಕ್ರಾಂತಿಕಾರಿಗಳ ಪೈಕಿ ಬಿಸ್ಮಿಲ್ ಮತ್ತು ಖಾನ್ ಪ್ರಮುಖರು. ಉಳಿದಿಬ್ಬರು ರಾಜೇಂದ್ರನಾಥ ಲಾಹಿರಿ ಮತ್ತು ರೋಶನ್ ಸಿಂಗ್.

ಯುವಕ ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. 1927ರ ಡಿಸೆಂಬರ್ 19ರಂದು ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು. ಸ್ವಾತಂತ್ರ್ಯದ ಜೊತೆಗೆ ಸಮಾನತೆ ಸಾಧಿಸುವುದೂ ಅಶ್ಫಾಕ್ ಆಸೆಯಾಗಿತ್ತು.

“ಬಡವರು ಸಂತಸದಿಂದ ಸಲೀಸಾಗಿ ಬಾಳುವೆ ಮಾಡಲು ಸಾಧ್ಯವಿರುವಂತಹ ಸ್ವಾತಂತ್ರ್ಯ ಹಿಂದೂಸ್ತಾನಕ್ಕೆ ಬೇಕಿದೆ. ವರ್ಕ್‍ಶಾಪಿನಲ್ಲಿ ಕೆಲಸ ಮಾಡುವ ಮೆಕ್ಯಾನಿಕ್ ಅಬ್ದುಲ್ಲಾ, ಚಪ್ಪಲಿ ಹೊಲೆಯುವ ಧನಿಯಾ ಹಾಗೂ ಸಾಧಾರಣ ರೈತರು ಲಖ್ನೋದ ನವಾಬರ ಅರಮನೆಯಲ್ಲಿ ಗಣ್ಯರ ಮುಂದಿನ ಸಾಲುಗಳ ಕುರ್ಚಿಗಳಲ್ಲಿ ಇದಿರುಬದಿರಾಗಿ ಕುಳಿತುಕೊಳ್ಳುವ ದಿನಗಳು ಬರಬೇಕೆಂದು ದೇವರಲ್ಲಿ ಪ್ರಾರ್ಥಿಸುವೆ. ಕಮ್ಯುನಿಸ್ಟರೊಂದಿಗೆ ನನ್ನ ಸಮಹಮತವಿದೆ. ಬಡರೈತರು ಮತ್ತು ಅಸಹಾಯಕ ಕಾರ್ಮಿಕರಿಗಾಗಿ ನನ್ನ ಹೃದಯ ಸದಾ ಅಳುತ್ತಿರುತ್ತದೆ. ಕಾಕೋರಿ ದರೋಡೆ ಪ್ರಕರಣದ ನಂತರ ತಲೆ ಮರೆಸಿಕೊಂಡು ತಿರುಗುತ್ತಿದ್ದಾಗ ಇಂತಹ ಕುಟುಂಬಗಳೊಂದಿಗೆ ವಾಸವಿದ್ದೆ. ಅವರ ಬವಣೆ ನನ್ನ ಕಣ್ಣುಗಳ ತೇವವಾಗಿಸಿತ್ತು. ನಮ್ಮ ಪೇಟೆ ಪಟ್ಟಣ ನಗರಗಳು ಥಳಗುಟ್ಟುವುದು ಇವರಿಂದಾಗಿಯೇ. ನಮ್ಮ ಗಿರಣಿಗಳು, ಕಾರ್ಖಾನೆಗಳು ನಡೆಯುವ ಹಿಂದಿನ ಶ್ರಮ ಇವರದೇ. ಪ್ರಪಂಚದ ಪ್ರತಿ ಕಾಮಗಾರಿಯ ಹಿಂದೆ ಇರುವುದು ಇವರದೇ ಬೆವರು. ಬೆಳೆಯುವ-ಉತ್ಪಾದಿಸುವ ಈ ಶ್ರಮಿಕರನ್ನು ದುಃಖ-ದುಸ್ಥಿತಿಗಳು ಬಿಡದೆ ಬೆಂಬತ್ತಿವೆ. ಅವರ ಈ ಕಷ್ಟ ಕಣ್ಣೀರಿನ ಮೂಲಕಾರಣ ಬಿಳಿತೊಗಲಿನ ಒಡೆಯರು ಮತ್ತು ಅವರ ಏಜೆಂಟರು. ಹಳ್ಳಿ ಹಳ್ಳಿಗೆ ಹೋಗಿ, ಗಿರಣಿ ಕಾರ್ಖಾನೆಗಳಿಗೆ ತೆರಳಿ ಅವರ ದುಸ್ಥಿತಿಯನ್ನು ಅಧ್ಯಯನ ಮಾಡಬೇಕು ಮತ್ತು ಅವರಲ್ಲಿ ರಾಜಕೀಯ ಎಚ್ಚರವನ್ನು ಮೂಡಿಸಬೇಕು” ಎಂಬುದು ಖಾನ್‍ನ ಅಂತಿಮ ಸಂದೇಶವಾಗಿತ್ತು. ಆರ್ಥಿಕ ಸ್ವಾತಂತ್ರ್ಯದ ಜೊತೆ ಜೊತೆಗೆ ಸಾಮಾಜಿಕ-ಸಾಂಸ್ಕೃತಿಕ ಸಮಾನತೆಯೂ ಈ ಸಂದೇಶದಲ್ಲಿ ಸೇರಿತ್ತು ಎಂಬುದನ್ನು ಗಮನಿಸಬೇಕಿದೆ.

ಎಲ್ಲ ಬಗೆಯ ಪರಕೀಯ ಆಳ್ವಿಕೆ ನ್ಯಾಯಬಾಹಿರ. ಅಂಚಿನಲ್ಲಿ ಜೋತುಬಿದ್ದು ಜೀವ ಹಿಡಿದ ದೀನ ದರಿದ್ರರ ಹಕ್ಕುಗಳನ್ನು ಮಾನ್ಯ ಮಾಡದಿರುವ, ಬಂಡವಾಳಶಾಹಿಗಳು ಮತ್ತು ಜಮೀನುದಾರರ ಹಿತವನ್ನು ಕಾಪಾಡುವ, ಕಾರ್ಮಿಕರು ಮತ್ತು ರೈತರ ಸಮಾನ ಭಾಗವಹಿಸುವಿಕೆ ಇಲ್ಲದಿರುವ ಹಾಗೂ ಯಥಾಸ್ಥಿತಿವಾದಿ ತಾರತಮ್ಯಗಳು ಮತ್ತು ವಿಶೇಷಾಧಿಕಾರಗಳನ್ನು ಕಾಪಾಡಲು ಕಾಯಿದೆ ಕಾನೂನು ಮಾಡುವ ಯಾವುದೇ ಸರ್ಕಾರ ಕೂಡ ನ್ಯಾಯಬಾಹಿರ. ಭಾರತ ಸ್ವತಂತ್ರ ದೇಶವಾಗಿ ನಮ್ಮದೇ ಜನರ ಸರ್ಕಾರ ಬಂದ ನಂತರವೂ ಬಡವರು-ಬಲ್ಲಿದರು, ಉಳುವವರು-ಜಮೀನುದಾರರ ನಡುವಣ ತಾರತಮ್ಯ ಎಂದಿನಂತೆ ಕೊನೆಸಾಗಿದರೆ ಅದಕ್ಕಿಂತ ಹೀನಾಯ ಮತ್ತೊಂದೇನಿದೆ. ಸಮಾನತೆ ಎಂಬುದು ನೆಲೆಸುವ ತನಕ ಸ್ವಾತಂತ್ರ್ಯವನ್ನು ನೀಡಬೇಡ ಎಂದು ದೇವರಲ್ಲಿ ಪ್ರಾರ್ಥಿಸುವೆ. ಇಂತಹ ನಂಬಿಕೆಗಾಗಿ ನನಗೆ ಕಮ್ಯುನಿಸ್ಟ್ ಎಂಬ ಹಣೆಪಟ್ಟಿ ಹಚ್ಚಿದರೂ ಪರವಾಗಿಲ್ಲ. ನಾನು ದೇವರಲ್ಲಿ ನಂಬಿಕೆ ಉಳ್ಳವನು. ದೇವರು ಎಲ್ಲರನ್ನೂ ಸಮಾನರನ್ನಾಗಿಯೇ ಸೃಷ್ಟಿಸುತ್ತಾನೆ ಎಂಬ ಅಶ್ಫಾಕ್ ಮಾತುಗಳಲ್ಲಿ ಆವರ ಮಾನವೀಯ ಚಿಂತನೆ ಹರಳುಗಟ್ಟಿದೆ. ಹಿಂದೂ-ಮುಸ್ಲಿಮರನ್ನು ಒಡೆವ ಪಿತೂರಿಯ ಕುರಿತೂ ಆತ ಮಾತಾಡಿದ್ದರು. ಅಂತಹವರೇ ದೇಶದ ನಿಜ ಶತ್ರುಗಳು ಎಂದು ಬಣ್ಣಿಸಿದ್ದರು.

ಅಶ್ಫಾಕ್ ಶಂಕೆ- ಸಂದೇಹಗಳು ಇಂದಿನ ಭಾರತದಲ್ಲಿ ನಿಜರೂಪ ಧರಿಸಿ ಅಬ್ಬರಿಸಿವೆ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...