Homeಅಂಕಣಗಳುಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. ಆತ ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು.

- Advertisement -
- Advertisement -

ಅಶ್ಫಾಕುಲ್ಲಾ ಖಾನ್ ಬದುಕಿದ್ದಿದ್ದರೆ ಇದೇ ಅಕ್ಟೋಬರ್ 22ರಂದು ಅವರಿಗೆ 120 ವರ್ಷ ತುಂಬುತ್ತಿತ್ತು. ಉತ್ತರಪ್ರದೇಶದ ಶಹಜಹಾನಪುರ ಆತನ ಹುಟ್ಟೂರು. ಖಾನ್ ಬೆಳೆದದ್ದು ಗಾಂಧೀಜಿ ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ನೀಡದಂತೆ ಕರೆ ನೀಡಿ ಅಸಹಕಾರ ಚಳವಳಿ ಹೂಡಿದ್ದ ದಿನಗಳಲ್ಲಿ.

ಹಿಂದುಸ್ತಾನಿ ರಿಪಬ್ಲಿಕನ್ ಅಸೋಸಿಯೇಷನ್‍ನ (ಎಚ್.ಆರ್.ಎ) ಕ್ರಾಂತಿಕಾರಿ ತಲೆಯಾಳು ರಾಮಪ್ರಸಾದ್ ಬಿಸ್ಮಿಲ್ ಸಂಗಡ 1924ರಲ್ಲಿ ಕಾಕೋರಿ ರೈಲು ದರೋಡೆಯಲ್ಲಿ ಭಾಗವಹಿಸಿದ್ದ ಖಾನ್ ಕೇವಲ 27ನೆಯ ವಯಸ್ಸಿನಲ್ಲಿ ಬ್ರಿಟಿಷರ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಬ್ರಿಟಿಷ್ ವಿರೋಧಿ ಬೆಂಕಿಯುಂಡೆ.
ಕಾಕೋರಿಯಿಂದ ಲಖ್ನೋಗೆ ರೈಲುಗಾಡಿಯಲ್ಲಿ ಸಾಗಿಸಲಾಗುತ್ತಿದ್ದ ಬ್ರಿಟಿಷ್ ಸರ್ಕಾರಿ ಖಜಾನೆಯನ್ನು ಲೂಟಿ ಮಾಡಿ, ಆ ಹಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಬೇಕಾಗಿದ್ದ ಹತಾರುಗಳನ್ನು ಖರೀದಿಸುವುದು ಕಾಕೋರಿ ದರೋಡೆ ಹಿಂದಿನ ಕಾರ್ಯಸೂಚಿಯಾಗಿತ್ತು.

ಉರ್ದು ಕಾವ್ಯವೆಂದರೆ ಖಾನ್‍ಗೆ ಅಚ್ಚುಮೆಚ್ಚು. ವಾರಸಿ ಇಲ್ಲವೇ ಹಜರತ್ ಕಾವ್ಯನಾಮದೊಂದಿಗೆ ಬರೆಯುತ್ತಿದ್ದರು. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ರಾಮಪ್ರಸಾದ್ ಬಿಸ್ಮಿಲ್ ಕೂಡ ಸ್ವಾತಂತ್ರ್ಯ ಹೋರಾಟದ ಕೆಚ್ಚಿಗೆ ಮತ್ತು ಉರ್ದು ಕವಿತೆಗೆ ಹೆಸರಾಗಿದ್ದವರು. ಅವರ ಉರ್ದು ಕಾವ್ಯಪ್ರತಿಭೆ ಮತ್ತು ಕಲಿತನದ ಕತೆಗಳನ್ನು ಎಳೆಯ ಖಾನ್ ತನ್ನ ಅಣ್ಣನಿಂದ ಕೇಳಿ ಅರಿತಿದ್ದ. ಅವಕ್ಕೆ ಮಾರುಹೋಗಿ ಅಭಿಮಾನಿಯೇ ಆಗಿಬಿಟ್ಟಿದ್ದ. ಚೌರಿಚೌರಾ ಹಿಂಸಾತ್ಮಕ ಘಟನೆಯ ನಂತರ ಗಾಂಧೀಜಿ ತಮ್ಮ ಅಸಹಕಾರ ಚಳವಳಿಯನ್ನು ವಾಪಸು ತೆಗೆದುಕೊಂಡಿದ್ದರು. ಅವರ ಈ ಹೆಜ್ಜೆ ಸಾವಿರಾರು ಯುವ ಕ್ರಾಂತಿಕಾರಿಗಳಿಗೆ ತೀವ್ರ ನಿರಾಶೆ ಉಂಟು ಮಾಡಿತ್ತು. ಅಹಿಂಸಾತ್ಮಕ ಹಾದಿ ಕುರಿತು ಅವರಲ್ಲಿ ಭ್ರಮನಿರಸನ ಮೂಡಿಸಿತ್ತು. ಈ ಪೈಕಿ ಅಶ್ಫಾಕುಲ್ಲಾ ಖಾನ್ ಕೂಡ ಒಬ್ಬನಾಗಿದ್ದ. ರಾಮಪ್ರಸಾದ್ ಬಿಸ್ಮಿಲ್ ಸಂಘಟನೆಯನ್ನು (ಎಚ್.ಆರ್.ಎ) ಸೇರಲು ತವಕಿಸಿದ. ಆದರೆ ಸೇರಿಸಿಕೊಳ್ಳಲು ಆರಂಭದಲ್ಲಿ ಬಿಸ್ಮಿಲ್ ಉತ್ಸುಕತೆ ತೋರಲಿಲ್ಲ. ಶಹಜಹಾನಪುರದ ಇತರೆ ಪಠಾಣ ಕುಟುಂಬಗಳಂತೆ ಖಾನ್ ಕುಟುಂಬ ಕೂಡ ಸಿರಿವಂತಿಕೆ ಸೂಸಿತ್ತು. ತಂದೆ ಕೊತ್ವಾಲ ಹುದ್ದೆಯಲ್ಲಿದ್ದರು. ಅಂತಿಮವಾಗಿ ಇಬ್ಬರನ್ನೂ ಹತ್ತಿರ ತಂದದ್ದು ಉರ್ದು ಕವಿತೆಯೆಡೆಗಿನ ಕಡುಪ್ರೇಮ ಮತ್ತು ತಾಯ್ನೆಲವನ್ನು ದಾಸ್ಯದಿಂದ ಬಿಡಿಸುವ ಪಣ ತೊಟ್ಟ ನಿಗಿನಿಗಿ ದೇಶಭಕ್ತಿ. ಬ್ರಾಹ್ಮಣ ಮತ್ತು ಮುಸ್ಲಿಮ್ ತರುಣರಿಬ್ಬರು ಪ್ರಸಿದ್ಧ ಪ್ರಾಣಸ್ನೇಹಿತರಾಗಿ ಇತಿಹಾಸ ಸೇರಿದರು.

PC : Facebook

ಬಂದೂಕು, ಬಾಂಬುಗಳಂತಹ ಹತಾರುಗಳ ಖರೀದಿಗೆ ಹಣ ಹೊಂದಿಸಲು ಇಬ್ಬರೂ ಹೂಡಿದ ಹಂಚಿಕೆ ಕಾಕೋರಿ ರೈಲು ದರೋಡೆ. 1925ರ ಆಗಸ್ಟ್ ಒಂಬತ್ತರ ದರೋಡೆಯ ನಂತರ ಇವರಿಗೆ ಭಯೋತ್ಪಾದಕರು ಎಂಬ ಹಣೆಪಟ್ಟಿ ಹಚ್ಚುತ್ತದೆ ಬ್ರಿಟಿಷ್ ಸರ್ಕಾರ. ಬೇಟೆಯಾಡಿ ಸೆರೆಹಿಡಿದು ಗಲ್ಲಿಗೇರಿಸಿದ ನಾಲ್ವರು ಕ್ರಾಂತಿಕಾರಿಗಳ ಪೈಕಿ ಬಿಸ್ಮಿಲ್ ಮತ್ತು ಖಾನ್ ಪ್ರಮುಖರು. ಉಳಿದಿಬ್ಬರು ರಾಜೇಂದ್ರನಾಥ ಲಾಹಿರಿ ಮತ್ತು ರೋಶನ್ ಸಿಂಗ್.

ಯುವಕ ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. 1927ರ ಡಿಸೆಂಬರ್ 19ರಂದು ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು. ಸ್ವಾತಂತ್ರ್ಯದ ಜೊತೆಗೆ ಸಮಾನತೆ ಸಾಧಿಸುವುದೂ ಅಶ್ಫಾಕ್ ಆಸೆಯಾಗಿತ್ತು.

“ಬಡವರು ಸಂತಸದಿಂದ ಸಲೀಸಾಗಿ ಬಾಳುವೆ ಮಾಡಲು ಸಾಧ್ಯವಿರುವಂತಹ ಸ್ವಾತಂತ್ರ್ಯ ಹಿಂದೂಸ್ತಾನಕ್ಕೆ ಬೇಕಿದೆ. ವರ್ಕ್‍ಶಾಪಿನಲ್ಲಿ ಕೆಲಸ ಮಾಡುವ ಮೆಕ್ಯಾನಿಕ್ ಅಬ್ದುಲ್ಲಾ, ಚಪ್ಪಲಿ ಹೊಲೆಯುವ ಧನಿಯಾ ಹಾಗೂ ಸಾಧಾರಣ ರೈತರು ಲಖ್ನೋದ ನವಾಬರ ಅರಮನೆಯಲ್ಲಿ ಗಣ್ಯರ ಮುಂದಿನ ಸಾಲುಗಳ ಕುರ್ಚಿಗಳಲ್ಲಿ ಇದಿರುಬದಿರಾಗಿ ಕುಳಿತುಕೊಳ್ಳುವ ದಿನಗಳು ಬರಬೇಕೆಂದು ದೇವರಲ್ಲಿ ಪ್ರಾರ್ಥಿಸುವೆ. ಕಮ್ಯುನಿಸ್ಟರೊಂದಿಗೆ ನನ್ನ ಸಮಹಮತವಿದೆ. ಬಡರೈತರು ಮತ್ತು ಅಸಹಾಯಕ ಕಾರ್ಮಿಕರಿಗಾಗಿ ನನ್ನ ಹೃದಯ ಸದಾ ಅಳುತ್ತಿರುತ್ತದೆ. ಕಾಕೋರಿ ದರೋಡೆ ಪ್ರಕರಣದ ನಂತರ ತಲೆ ಮರೆಸಿಕೊಂಡು ತಿರುಗುತ್ತಿದ್ದಾಗ ಇಂತಹ ಕುಟುಂಬಗಳೊಂದಿಗೆ ವಾಸವಿದ್ದೆ. ಅವರ ಬವಣೆ ನನ್ನ ಕಣ್ಣುಗಳ ತೇವವಾಗಿಸಿತ್ತು. ನಮ್ಮ ಪೇಟೆ ಪಟ್ಟಣ ನಗರಗಳು ಥಳಗುಟ್ಟುವುದು ಇವರಿಂದಾಗಿಯೇ. ನಮ್ಮ ಗಿರಣಿಗಳು, ಕಾರ್ಖಾನೆಗಳು ನಡೆಯುವ ಹಿಂದಿನ ಶ್ರಮ ಇವರದೇ. ಪ್ರಪಂಚದ ಪ್ರತಿ ಕಾಮಗಾರಿಯ ಹಿಂದೆ ಇರುವುದು ಇವರದೇ ಬೆವರು. ಬೆಳೆಯುವ-ಉತ್ಪಾದಿಸುವ ಈ ಶ್ರಮಿಕರನ್ನು ದುಃಖ-ದುಸ್ಥಿತಿಗಳು ಬಿಡದೆ ಬೆಂಬತ್ತಿವೆ. ಅವರ ಈ ಕಷ್ಟ ಕಣ್ಣೀರಿನ ಮೂಲಕಾರಣ ಬಿಳಿತೊಗಲಿನ ಒಡೆಯರು ಮತ್ತು ಅವರ ಏಜೆಂಟರು. ಹಳ್ಳಿ ಹಳ್ಳಿಗೆ ಹೋಗಿ, ಗಿರಣಿ ಕಾರ್ಖಾನೆಗಳಿಗೆ ತೆರಳಿ ಅವರ ದುಸ್ಥಿತಿಯನ್ನು ಅಧ್ಯಯನ ಮಾಡಬೇಕು ಮತ್ತು ಅವರಲ್ಲಿ ರಾಜಕೀಯ ಎಚ್ಚರವನ್ನು ಮೂಡಿಸಬೇಕು” ಎಂಬುದು ಖಾನ್‍ನ ಅಂತಿಮ ಸಂದೇಶವಾಗಿತ್ತು. ಆರ್ಥಿಕ ಸ್ವಾತಂತ್ರ್ಯದ ಜೊತೆ ಜೊತೆಗೆ ಸಾಮಾಜಿಕ-ಸಾಂಸ್ಕೃತಿಕ ಸಮಾನತೆಯೂ ಈ ಸಂದೇಶದಲ್ಲಿ ಸೇರಿತ್ತು ಎಂಬುದನ್ನು ಗಮನಿಸಬೇಕಿದೆ.

ಎಲ್ಲ ಬಗೆಯ ಪರಕೀಯ ಆಳ್ವಿಕೆ ನ್ಯಾಯಬಾಹಿರ. ಅಂಚಿನಲ್ಲಿ ಜೋತುಬಿದ್ದು ಜೀವ ಹಿಡಿದ ದೀನ ದರಿದ್ರರ ಹಕ್ಕುಗಳನ್ನು ಮಾನ್ಯ ಮಾಡದಿರುವ, ಬಂಡವಾಳಶಾಹಿಗಳು ಮತ್ತು ಜಮೀನುದಾರರ ಹಿತವನ್ನು ಕಾಪಾಡುವ, ಕಾರ್ಮಿಕರು ಮತ್ತು ರೈತರ ಸಮಾನ ಭಾಗವಹಿಸುವಿಕೆ ಇಲ್ಲದಿರುವ ಹಾಗೂ ಯಥಾಸ್ಥಿತಿವಾದಿ ತಾರತಮ್ಯಗಳು ಮತ್ತು ವಿಶೇಷಾಧಿಕಾರಗಳನ್ನು ಕಾಪಾಡಲು ಕಾಯಿದೆ ಕಾನೂನು ಮಾಡುವ ಯಾವುದೇ ಸರ್ಕಾರ ಕೂಡ ನ್ಯಾಯಬಾಹಿರ. ಭಾರತ ಸ್ವತಂತ್ರ ದೇಶವಾಗಿ ನಮ್ಮದೇ ಜನರ ಸರ್ಕಾರ ಬಂದ ನಂತರವೂ ಬಡವರು-ಬಲ್ಲಿದರು, ಉಳುವವರು-ಜಮೀನುದಾರರ ನಡುವಣ ತಾರತಮ್ಯ ಎಂದಿನಂತೆ ಕೊನೆಸಾಗಿದರೆ ಅದಕ್ಕಿಂತ ಹೀನಾಯ ಮತ್ತೊಂದೇನಿದೆ. ಸಮಾನತೆ ಎಂಬುದು ನೆಲೆಸುವ ತನಕ ಸ್ವಾತಂತ್ರ್ಯವನ್ನು ನೀಡಬೇಡ ಎಂದು ದೇವರಲ್ಲಿ ಪ್ರಾರ್ಥಿಸುವೆ. ಇಂತಹ ನಂಬಿಕೆಗಾಗಿ ನನಗೆ ಕಮ್ಯುನಿಸ್ಟ್ ಎಂಬ ಹಣೆಪಟ್ಟಿ ಹಚ್ಚಿದರೂ ಪರವಾಗಿಲ್ಲ. ನಾನು ದೇವರಲ್ಲಿ ನಂಬಿಕೆ ಉಳ್ಳವನು. ದೇವರು ಎಲ್ಲರನ್ನೂ ಸಮಾನರನ್ನಾಗಿಯೇ ಸೃಷ್ಟಿಸುತ್ತಾನೆ ಎಂಬ ಅಶ್ಫಾಕ್ ಮಾತುಗಳಲ್ಲಿ ಆವರ ಮಾನವೀಯ ಚಿಂತನೆ ಹರಳುಗಟ್ಟಿದೆ. ಹಿಂದೂ-ಮುಸ್ಲಿಮರನ್ನು ಒಡೆವ ಪಿತೂರಿಯ ಕುರಿತೂ ಆತ ಮಾತಾಡಿದ್ದರು. ಅಂತಹವರೇ ದೇಶದ ನಿಜ ಶತ್ರುಗಳು ಎಂದು ಬಣ್ಣಿಸಿದ್ದರು.

ಅಶ್ಫಾಕ್ ಶಂಕೆ- ಸಂದೇಹಗಳು ಇಂದಿನ ಭಾರತದಲ್ಲಿ ನಿಜರೂಪ ಧರಿಸಿ ಅಬ್ಬರಿಸಿವೆ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...