HomeUncategorized‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

- Advertisement -
- Advertisement -

ಇತ್ತಿಚಿಗೆ ಒಂದು ನಾಲ್ಕು ದಿನ ಜಯದೇವ ಆಸ್ಪತ್ರೆಯಲಿ ನಮ್ಮೆಲ್ಲರ ಸ್ಫೂರ್ತಿ ದೊರೆಸ್ವಾಮಿ ತಾತನ ಆರೈಕೆಯಲ್ಲಿ ಇದ್ದೆ. ಈ ಮುಂಚೆಯೂ ಮನೆಯಲ್ಲಿದ್ದಾಗಲೂ ಕೆಲವೊಮ್ಮೆ ಹೋಗಿದ್ದೆ. ತಾತಾನಿಗೆ ಅವರ ಜೊತೆ ಇರುವವರಿಗೆ ಯಾರಿಗೂ ತೊಂದರೆ ಕೊಡಬಾರದು, ಬೇಜಾರು ಮಾಡಬಾರದು ಎಂಬ ಸೂಕ್ಷ್ಮತೆ ತುಂಬಾ ಇತ್ತು.

ಒಮ್ಮೆ ಹೀಗೆ ರಾತ್ರಿ 12 ಸಮಯದಲ್ಲಿ ಒಮ್ಮೆ ಕರೆದು ‘ಏನಪ್ಪ ನಿನಗೆ ಈ ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ? ನಿನ್ನ ಅಭಿಪ್ರಾಯ ಏನು’ ಎಂದು ಕೇಳಿದರು. ನಾನು ಇಲ್ಲ ಅನಿಸುತ್ತೆ ತಾತಾ ಅಂದೆ. ಆಗ ಮತ್ತೆ ಅಲ್ಲಪ್ಪ ಹಾಗದರೆ ಈ ಬೆಟ್ಟ ಗುಡ್ಡ ಇಷ್ಟೆಲ್ಲ ಪರಿಸರ ಜಗತ್ತನ್ನ ಯಾರು ಸೃಷ್ಟಿ ಮಾಡಿದರು ಅದಕ್ಕೆ ಒಬ್ಬ ಸರ್ವಶಕ್ತನೋ ಸರ್ವಶಕ್ತೆಯೋ ಇರಬೇಕಲ್ಲ? ಅಂದರು. ನಾನು ತಾತ ಅದು ಏನು ಇದ್ದರೂ ಎಲ್ಲಾ ವೈಜ್ಞಾನಿಕವಾಗಿ ನಡೆಯುತ್ತೆ. ಈಗ ದೇವರು ದಿಂಡ್ರು ಅನ್ನೋ ಹೆಸರಲ್ಲಿ ಮೋಸ ನಡಿತಿದಿಯಲ್ಲ ಆ ದೇವರು ಇಲ್ಲ ಅಂದೆ. ಆಗ ಸ್ವಲ್ಪ ಯೋಚಿಸಿ ಸರಿ ಕಣಪ್ಪ ನಿನ್ನ ಅಭಿಪ್ರಾಯನು ನಾನು ಗೌರವಿಸ್ತೀನಿ ಅಂದರು. ಹೀಗೆ ಬೇರೆ ಬೇರೆ ವಿಚಾಗಳಲ್ಲಿ ಅಭಿಪ್ರಾಯ ಕೇಳುತ್ತಿದ್ದರು.

ಆಸ್ಪತ್ರೆಯಲ್ಲಿ ಪತ್ರಿಕೆ ಓದುತ್ತಿರುವ ದೊರೆಸ್ವಾಮಿ

ಒಂದೆರಡು ದಿನ ರಾತ್ರಿ ಕೆಮ್ಮು ಮತ್ತು ಕಫದಿಂದ ತಾತಾ ನಿದ್ದೆ ಮಾಡೋಕೆ ಆಗಿರಲಿಲ್ಲ. ತಾತ ನನ್ನ ಕುಟುಂಬದ ಬಗ್ಗೆ ನಮ್ಮ ತಂದೆ ತಾಯಿ ಮಾಡೋ ಕೆಲಸದ ಬಗ್ಗೆ ವಿಚಾರಿಸಿದ್ದರು. ಸ್ವಾಭಿಮಾನಿ ಕುಟುಂಬ ವೆರಿ ಗುಡ್ ಎಂದರು.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನೀನು ಸಂಘಟನೆ ಹೋರಾಟದ ಸಹವಾಸಕ್ಕೆ ಹೇಗೆ ಬಂದೆ ಎಂದು ಕೇಳಿದ್ದಕ್ಕೆ, ಸಾಣೇಹಳ್ಳಿ ಮಠ – ರಂಗಭೂಮಿ – ಸಮಾನ ಶಿಕ್ಷಣಕ್ಕಾಗಿ ಹೋರಾಟ – ಉಡುಪಿ ಚಲೋ ಎಲ್ಲಾ ಕೇಳಿಸಿಕೊಂಡು ಮಧ್ಯೆ ಮಧ್ಯೆ ಪ್ರಶ್ನೆ ಮಾಡಿ ಎಲ್ಲಾ ವಿಚಾರಿಸಿಕೊಂಡು ಬೇಷ್ ಹೇಳಿದರು. ನಮ್ಮ ಊರು ಹಿಂದೂಪುರದ ಹತ್ತಿರ ಅಂದಾಗ ಅವರ ಮುಖ ಅರಳಿತು. ಅವರು ಸ್ವತಂತ್ರ ಹೋರಾಟದ ಸಮಯದಲ್ಲಿ ಕರ್ನಾಟಕದಲ್ಲಿ ಅವರ ಪತ್ರಿಕೆ ತಡೆದದ್ದರಿಂದ ಹಿಂದೂಪುರಕ್ಕೆ ಹೋಗಿ ಆಂಧ್ರದಿಂದ ಪತ್ರಿಕೆ ತಂದ ಸಾಹಸಗಳ ಬಗ್ಗೆ ಹೇಳಿದರು. ಅಲ್ಲಿ ಸಹಾಯ ಮಾಡಿದ ಗೆಳೆಯರನ್ನು ನೆನೆದರು.

ಆರೋಗ್ಯ ಕೈ ಕೊಟ್ಟಿದ್ದಕ್ಕಾಗಿ ತುಂಬಾ ನೊಂದಿದ್ದರು. ನಾನು ವಾಪಸ್ಸು ಆಸ್ಪತ್ರೆಯಿಂದ ಬರೋ ದಿನಕ್ಕಿಂತ ಮುಂಚಿನ ರಾತ್ರಿ ಕೆಮ್ಮು ಏನು ಇಲ್ಲದೆ ಚನ್ನಾಗಿ ನಿದ್ದೆ ಮಾಡಿದ್ದರು. ನನಗೆ ನೀನು ಮೊದಲು ಹೋಗಿ ರೆಸ್ಟ್ ಮಾಡು ಅಂದರು. ಎಲ್ಲಾ ಯುವ ಜನರು ಮೊದಲು ಆರೋಗ್ಯ ಚೆನ್ನಾಗಿ ನೋಡಿಕೊಳ್ಳಬೇಕು. ಇಡೀ ದೇಶಕ್ಕೆ ಬಂದಿರೋದು ನನಗೂ ಬಂದಿದೆ (ಕೊರೊನಾ), ಇದನ್ನ ಗೆಲ್ಲಬೇಕಾದರೆ ಎಲ್ಲರೂ ಧೈರ್ಯ ಮತ್ತು ಪ್ರೀತಿಯಿಂದ ಜನರ ಬಳಿ ಹೋಗಬೇಕು. ಆಗ ಮಾತ್ರ ಗೆಲ್ಲೋಕೆ ಆಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಅಂದಿನ ರಾತ್ರಿ ಸಿರಿಮನೆ ನಾಗರಾಜ್ ಅವರಿಗೆ ಕಾಲ್ ಮಾಡಿ ಹೆದರಬೇಡಿ ಅಂತ ಹೇಳಿದರು. ನೀವು ಅಷ್ಟು ಧೈರ್ಯಕೊಟ್ಟರೆ ಸಾಕು ಅಂತ ಸಿರಿಮನೆ ಕುಣಿದಾಡೋ ರೀತಿ ಮಾತಾಡಿದ್ದರು. ಬೆಳಿಗ್ಗೆ ನಾನು ಅಲ್ಲಿಂದ ಹೊರಡತೀನಿ ಎಂದು ಹೇಳಿದಾಗ ಮತ್ತೆ ಕಾಲ್ ಮಾಡಪ್ಪ ಮರಿಬೇಡ ದಿನಾ ಕಾಲ್ ಮಾಡು ಅಂತ ಹೇಳಿದರು.

ಅಭಿನಂದನ್‌, ಗಜೇಂದ್ರ (ಈ ಮುಂಚೆ ತಾತಾನನ್ನ ನೋಡಿಕೊಳ್ಳತ್ತಿದ್ದ ಇಬ್ಬರಿಗೂ ಆರೋಗ್ಯ ಕೆಟ್ಟಿತ್ತು) ಇಬ್ಬರಿಗೂ ಕಾಲ್‌ ಮಾಡೋಕೆ ಹೇಳು ಅವರಿಗೆ ಆರೋಗ್ಯ ನೋಡಿಕೊಳ್ಳೋಕೆ ಹೇಳು ಎಂದು ಹೇಳಿದರು.

ಪ್ರತಿ ದಿನ ರವಿಕೃಷ್ಣ ರೆಡ್ಡಿಯವರು ದೊರೆಸ್ವಾಮಿಯವರನ್ನು ಮಾತಾಡಿಸುತ್ತಿದ್ದು ಅವರಿಗೆ ತುಂಬಾ ರಿಲ್ಯಾಕ್ಸ್ ಕೊಡುತ್ತಿತ್ತು. ರವಿಕೃಷ್ಣ ರೆಡ್ಡಿಯವರಂತು ತುಂಬಾ ಕರ್ತವ್ಯ ಪ್ರಜ್ಞೆ, ತಾತನ ಮೇಲಿನ ಪ್ರೀತಿ, ಗೌರವಗಳನ್ನು ತುಂಬಾ ಗ್ರೇಟ್‌ಪುಲ್ ಆಗಿ ಅರ್ಪಿಸಿದರು. ತುಂಬಾ ಜನಕ್ಕೆ ಕಾಲ್ ಮಾಡೋಕೆ ಹೇಳಿ ಮಾತಾಡುತ್ತಿದ್ದರು. ಎಲ್ಲಾ ಪ್ರಗತಿಪರ ಹಿರಿಕಿರಿಯರನ್ನು ನೆನೆಸಿಕೊಳ್ಳುತ್ತಿದ್ದರು. ನಾನು ತುಂಬಾ ಒಳ್ಳೆಯ ಜನರ ಸಹವಾಸ ಮಾಡಿದೆ ಅದೇ ನನಗೆ ದೊಡ್ಡ ಸಾರ್ಥಕ ಎಂದು ಪದೇ ಪದೇ ಹೇಳುತ್ತಿದ್ದರು.

ಹಿಂದೂ ಪತ್ರಿಕೆಯ ಆದಿತ್ಯ ಅವರಿಗೆ ಕಾಲ್ ಮಾಡಿಸಿ ನನಗೆ ಪ್ರತಿದಿನ ಪತ್ರಿಕೆ ಬರೋ ವ್ಯವಸ್ಥೆ ಮಾಡಿಸಪ್ಪ ಎಂದಿದ್ದರು. ಅವರು ಪ್ರತಿದಿನ ಪತ್ರಿಕೆ ಸಿಗೋ ರೀತಿ ಮಾಡಿದ್ದರು.

ದೊರೆಸ್ವಾಮಿಯವರು ನಮ್ಮ ನಡುವೆ ದೈಹಿಕವಾಗಿ ಇಲ್ಲದಿರಬಹುದು ಆದರೆ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗುವ ಪ್ರಯತ್ನವೇ ಅವರನ್ನ ಜೀವಂತ ಇರಿಸಲಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...