HomeUncategorized‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

- Advertisement -
- Advertisement -

ಇತ್ತಿಚಿಗೆ ಒಂದು ನಾಲ್ಕು ದಿನ ಜಯದೇವ ಆಸ್ಪತ್ರೆಯಲಿ ನಮ್ಮೆಲ್ಲರ ಸ್ಫೂರ್ತಿ ದೊರೆಸ್ವಾಮಿ ತಾತನ ಆರೈಕೆಯಲ್ಲಿ ಇದ್ದೆ. ಈ ಮುಂಚೆಯೂ ಮನೆಯಲ್ಲಿದ್ದಾಗಲೂ ಕೆಲವೊಮ್ಮೆ ಹೋಗಿದ್ದೆ. ತಾತಾನಿಗೆ ಅವರ ಜೊತೆ ಇರುವವರಿಗೆ ಯಾರಿಗೂ ತೊಂದರೆ ಕೊಡಬಾರದು, ಬೇಜಾರು ಮಾಡಬಾರದು ಎಂಬ ಸೂಕ್ಷ್ಮತೆ ತುಂಬಾ ಇತ್ತು.

ಒಮ್ಮೆ ಹೀಗೆ ರಾತ್ರಿ 12 ಸಮಯದಲ್ಲಿ ಒಮ್ಮೆ ಕರೆದು ‘ಏನಪ್ಪ ನಿನಗೆ ಈ ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ? ನಿನ್ನ ಅಭಿಪ್ರಾಯ ಏನು’ ಎಂದು ಕೇಳಿದರು. ನಾನು ಇಲ್ಲ ಅನಿಸುತ್ತೆ ತಾತಾ ಅಂದೆ. ಆಗ ಮತ್ತೆ ಅಲ್ಲಪ್ಪ ಹಾಗದರೆ ಈ ಬೆಟ್ಟ ಗುಡ್ಡ ಇಷ್ಟೆಲ್ಲ ಪರಿಸರ ಜಗತ್ತನ್ನ ಯಾರು ಸೃಷ್ಟಿ ಮಾಡಿದರು ಅದಕ್ಕೆ ಒಬ್ಬ ಸರ್ವಶಕ್ತನೋ ಸರ್ವಶಕ್ತೆಯೋ ಇರಬೇಕಲ್ಲ? ಅಂದರು. ನಾನು ತಾತ ಅದು ಏನು ಇದ್ದರೂ ಎಲ್ಲಾ ವೈಜ್ಞಾನಿಕವಾಗಿ ನಡೆಯುತ್ತೆ. ಈಗ ದೇವರು ದಿಂಡ್ರು ಅನ್ನೋ ಹೆಸರಲ್ಲಿ ಮೋಸ ನಡಿತಿದಿಯಲ್ಲ ಆ ದೇವರು ಇಲ್ಲ ಅಂದೆ. ಆಗ ಸ್ವಲ್ಪ ಯೋಚಿಸಿ ಸರಿ ಕಣಪ್ಪ ನಿನ್ನ ಅಭಿಪ್ರಾಯನು ನಾನು ಗೌರವಿಸ್ತೀನಿ ಅಂದರು. ಹೀಗೆ ಬೇರೆ ಬೇರೆ ವಿಚಾಗಳಲ್ಲಿ ಅಭಿಪ್ರಾಯ ಕೇಳುತ್ತಿದ್ದರು.

ಆಸ್ಪತ್ರೆಯಲ್ಲಿ ಪತ್ರಿಕೆ ಓದುತ್ತಿರುವ ದೊರೆಸ್ವಾಮಿ

ಒಂದೆರಡು ದಿನ ರಾತ್ರಿ ಕೆಮ್ಮು ಮತ್ತು ಕಫದಿಂದ ತಾತಾ ನಿದ್ದೆ ಮಾಡೋಕೆ ಆಗಿರಲಿಲ್ಲ. ತಾತ ನನ್ನ ಕುಟುಂಬದ ಬಗ್ಗೆ ನಮ್ಮ ತಂದೆ ತಾಯಿ ಮಾಡೋ ಕೆಲಸದ ಬಗ್ಗೆ ವಿಚಾರಿಸಿದ್ದರು. ಸ್ವಾಭಿಮಾನಿ ಕುಟುಂಬ ವೆರಿ ಗುಡ್ ಎಂದರು.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನೀನು ಸಂಘಟನೆ ಹೋರಾಟದ ಸಹವಾಸಕ್ಕೆ ಹೇಗೆ ಬಂದೆ ಎಂದು ಕೇಳಿದ್ದಕ್ಕೆ, ಸಾಣೇಹಳ್ಳಿ ಮಠ – ರಂಗಭೂಮಿ – ಸಮಾನ ಶಿಕ್ಷಣಕ್ಕಾಗಿ ಹೋರಾಟ – ಉಡುಪಿ ಚಲೋ ಎಲ್ಲಾ ಕೇಳಿಸಿಕೊಂಡು ಮಧ್ಯೆ ಮಧ್ಯೆ ಪ್ರಶ್ನೆ ಮಾಡಿ ಎಲ್ಲಾ ವಿಚಾರಿಸಿಕೊಂಡು ಬೇಷ್ ಹೇಳಿದರು. ನಮ್ಮ ಊರು ಹಿಂದೂಪುರದ ಹತ್ತಿರ ಅಂದಾಗ ಅವರ ಮುಖ ಅರಳಿತು. ಅವರು ಸ್ವತಂತ್ರ ಹೋರಾಟದ ಸಮಯದಲ್ಲಿ ಕರ್ನಾಟಕದಲ್ಲಿ ಅವರ ಪತ್ರಿಕೆ ತಡೆದದ್ದರಿಂದ ಹಿಂದೂಪುರಕ್ಕೆ ಹೋಗಿ ಆಂಧ್ರದಿಂದ ಪತ್ರಿಕೆ ತಂದ ಸಾಹಸಗಳ ಬಗ್ಗೆ ಹೇಳಿದರು. ಅಲ್ಲಿ ಸಹಾಯ ಮಾಡಿದ ಗೆಳೆಯರನ್ನು ನೆನೆದರು.

ಆರೋಗ್ಯ ಕೈ ಕೊಟ್ಟಿದ್ದಕ್ಕಾಗಿ ತುಂಬಾ ನೊಂದಿದ್ದರು. ನಾನು ವಾಪಸ್ಸು ಆಸ್ಪತ್ರೆಯಿಂದ ಬರೋ ದಿನಕ್ಕಿಂತ ಮುಂಚಿನ ರಾತ್ರಿ ಕೆಮ್ಮು ಏನು ಇಲ್ಲದೆ ಚನ್ನಾಗಿ ನಿದ್ದೆ ಮಾಡಿದ್ದರು. ನನಗೆ ನೀನು ಮೊದಲು ಹೋಗಿ ರೆಸ್ಟ್ ಮಾಡು ಅಂದರು. ಎಲ್ಲಾ ಯುವ ಜನರು ಮೊದಲು ಆರೋಗ್ಯ ಚೆನ್ನಾಗಿ ನೋಡಿಕೊಳ್ಳಬೇಕು. ಇಡೀ ದೇಶಕ್ಕೆ ಬಂದಿರೋದು ನನಗೂ ಬಂದಿದೆ (ಕೊರೊನಾ), ಇದನ್ನ ಗೆಲ್ಲಬೇಕಾದರೆ ಎಲ್ಲರೂ ಧೈರ್ಯ ಮತ್ತು ಪ್ರೀತಿಯಿಂದ ಜನರ ಬಳಿ ಹೋಗಬೇಕು. ಆಗ ಮಾತ್ರ ಗೆಲ್ಲೋಕೆ ಆಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಅಂದಿನ ರಾತ್ರಿ ಸಿರಿಮನೆ ನಾಗರಾಜ್ ಅವರಿಗೆ ಕಾಲ್ ಮಾಡಿ ಹೆದರಬೇಡಿ ಅಂತ ಹೇಳಿದರು. ನೀವು ಅಷ್ಟು ಧೈರ್ಯಕೊಟ್ಟರೆ ಸಾಕು ಅಂತ ಸಿರಿಮನೆ ಕುಣಿದಾಡೋ ರೀತಿ ಮಾತಾಡಿದ್ದರು. ಬೆಳಿಗ್ಗೆ ನಾನು ಅಲ್ಲಿಂದ ಹೊರಡತೀನಿ ಎಂದು ಹೇಳಿದಾಗ ಮತ್ತೆ ಕಾಲ್ ಮಾಡಪ್ಪ ಮರಿಬೇಡ ದಿನಾ ಕಾಲ್ ಮಾಡು ಅಂತ ಹೇಳಿದರು.

ಅಭಿನಂದನ್‌, ಗಜೇಂದ್ರ (ಈ ಮುಂಚೆ ತಾತಾನನ್ನ ನೋಡಿಕೊಳ್ಳತ್ತಿದ್ದ ಇಬ್ಬರಿಗೂ ಆರೋಗ್ಯ ಕೆಟ್ಟಿತ್ತು) ಇಬ್ಬರಿಗೂ ಕಾಲ್‌ ಮಾಡೋಕೆ ಹೇಳು ಅವರಿಗೆ ಆರೋಗ್ಯ ನೋಡಿಕೊಳ್ಳೋಕೆ ಹೇಳು ಎಂದು ಹೇಳಿದರು.

ಪ್ರತಿ ದಿನ ರವಿಕೃಷ್ಣ ರೆಡ್ಡಿಯವರು ದೊರೆಸ್ವಾಮಿಯವರನ್ನು ಮಾತಾಡಿಸುತ್ತಿದ್ದು ಅವರಿಗೆ ತುಂಬಾ ರಿಲ್ಯಾಕ್ಸ್ ಕೊಡುತ್ತಿತ್ತು. ರವಿಕೃಷ್ಣ ರೆಡ್ಡಿಯವರಂತು ತುಂಬಾ ಕರ್ತವ್ಯ ಪ್ರಜ್ಞೆ, ತಾತನ ಮೇಲಿನ ಪ್ರೀತಿ, ಗೌರವಗಳನ್ನು ತುಂಬಾ ಗ್ರೇಟ್‌ಪುಲ್ ಆಗಿ ಅರ್ಪಿಸಿದರು. ತುಂಬಾ ಜನಕ್ಕೆ ಕಾಲ್ ಮಾಡೋಕೆ ಹೇಳಿ ಮಾತಾಡುತ್ತಿದ್ದರು. ಎಲ್ಲಾ ಪ್ರಗತಿಪರ ಹಿರಿಕಿರಿಯರನ್ನು ನೆನೆಸಿಕೊಳ್ಳುತ್ತಿದ್ದರು. ನಾನು ತುಂಬಾ ಒಳ್ಳೆಯ ಜನರ ಸಹವಾಸ ಮಾಡಿದೆ ಅದೇ ನನಗೆ ದೊಡ್ಡ ಸಾರ್ಥಕ ಎಂದು ಪದೇ ಪದೇ ಹೇಳುತ್ತಿದ್ದರು.

ಹಿಂದೂ ಪತ್ರಿಕೆಯ ಆದಿತ್ಯ ಅವರಿಗೆ ಕಾಲ್ ಮಾಡಿಸಿ ನನಗೆ ಪ್ರತಿದಿನ ಪತ್ರಿಕೆ ಬರೋ ವ್ಯವಸ್ಥೆ ಮಾಡಿಸಪ್ಪ ಎಂದಿದ್ದರು. ಅವರು ಪ್ರತಿದಿನ ಪತ್ರಿಕೆ ಸಿಗೋ ರೀತಿ ಮಾಡಿದ್ದರು.

ದೊರೆಸ್ವಾಮಿಯವರು ನಮ್ಮ ನಡುವೆ ದೈಹಿಕವಾಗಿ ಇಲ್ಲದಿರಬಹುದು ಆದರೆ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗುವ ಪ್ರಯತ್ನವೇ ಅವರನ್ನ ಜೀವಂತ ಇರಿಸಲಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...