HomeUncategorized‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

- Advertisement -
- Advertisement -

ಇತ್ತಿಚಿಗೆ ಒಂದು ನಾಲ್ಕು ದಿನ ಜಯದೇವ ಆಸ್ಪತ್ರೆಯಲಿ ನಮ್ಮೆಲ್ಲರ ಸ್ಫೂರ್ತಿ ದೊರೆಸ್ವಾಮಿ ತಾತನ ಆರೈಕೆಯಲ್ಲಿ ಇದ್ದೆ. ಈ ಮುಂಚೆಯೂ ಮನೆಯಲ್ಲಿದ್ದಾಗಲೂ ಕೆಲವೊಮ್ಮೆ ಹೋಗಿದ್ದೆ. ತಾತಾನಿಗೆ ಅವರ ಜೊತೆ ಇರುವವರಿಗೆ ಯಾರಿಗೂ ತೊಂದರೆ ಕೊಡಬಾರದು, ಬೇಜಾರು ಮಾಡಬಾರದು ಎಂಬ ಸೂಕ್ಷ್ಮತೆ ತುಂಬಾ ಇತ್ತು.

ಒಮ್ಮೆ ಹೀಗೆ ರಾತ್ರಿ 12 ಸಮಯದಲ್ಲಿ ಒಮ್ಮೆ ಕರೆದು ‘ಏನಪ್ಪ ನಿನಗೆ ಈ ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ? ನಿನ್ನ ಅಭಿಪ್ರಾಯ ಏನು’ ಎಂದು ಕೇಳಿದರು. ನಾನು ಇಲ್ಲ ಅನಿಸುತ್ತೆ ತಾತಾ ಅಂದೆ. ಆಗ ಮತ್ತೆ ಅಲ್ಲಪ್ಪ ಹಾಗದರೆ ಈ ಬೆಟ್ಟ ಗುಡ್ಡ ಇಷ್ಟೆಲ್ಲ ಪರಿಸರ ಜಗತ್ತನ್ನ ಯಾರು ಸೃಷ್ಟಿ ಮಾಡಿದರು ಅದಕ್ಕೆ ಒಬ್ಬ ಸರ್ವಶಕ್ತನೋ ಸರ್ವಶಕ್ತೆಯೋ ಇರಬೇಕಲ್ಲ? ಅಂದರು. ನಾನು ತಾತ ಅದು ಏನು ಇದ್ದರೂ ಎಲ್ಲಾ ವೈಜ್ಞಾನಿಕವಾಗಿ ನಡೆಯುತ್ತೆ. ಈಗ ದೇವರು ದಿಂಡ್ರು ಅನ್ನೋ ಹೆಸರಲ್ಲಿ ಮೋಸ ನಡಿತಿದಿಯಲ್ಲ ಆ ದೇವರು ಇಲ್ಲ ಅಂದೆ. ಆಗ ಸ್ವಲ್ಪ ಯೋಚಿಸಿ ಸರಿ ಕಣಪ್ಪ ನಿನ್ನ ಅಭಿಪ್ರಾಯನು ನಾನು ಗೌರವಿಸ್ತೀನಿ ಅಂದರು. ಹೀಗೆ ಬೇರೆ ಬೇರೆ ವಿಚಾಗಳಲ್ಲಿ ಅಭಿಪ್ರಾಯ ಕೇಳುತ್ತಿದ್ದರು.

ಆಸ್ಪತ್ರೆಯಲ್ಲಿ ಪತ್ರಿಕೆ ಓದುತ್ತಿರುವ ದೊರೆಸ್ವಾಮಿ

ಒಂದೆರಡು ದಿನ ರಾತ್ರಿ ಕೆಮ್ಮು ಮತ್ತು ಕಫದಿಂದ ತಾತಾ ನಿದ್ದೆ ಮಾಡೋಕೆ ಆಗಿರಲಿಲ್ಲ. ತಾತ ನನ್ನ ಕುಟುಂಬದ ಬಗ್ಗೆ ನಮ್ಮ ತಂದೆ ತಾಯಿ ಮಾಡೋ ಕೆಲಸದ ಬಗ್ಗೆ ವಿಚಾರಿಸಿದ್ದರು. ಸ್ವಾಭಿಮಾನಿ ಕುಟುಂಬ ವೆರಿ ಗುಡ್ ಎಂದರು.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನೀನು ಸಂಘಟನೆ ಹೋರಾಟದ ಸಹವಾಸಕ್ಕೆ ಹೇಗೆ ಬಂದೆ ಎಂದು ಕೇಳಿದ್ದಕ್ಕೆ, ಸಾಣೇಹಳ್ಳಿ ಮಠ – ರಂಗಭೂಮಿ – ಸಮಾನ ಶಿಕ್ಷಣಕ್ಕಾಗಿ ಹೋರಾಟ – ಉಡುಪಿ ಚಲೋ ಎಲ್ಲಾ ಕೇಳಿಸಿಕೊಂಡು ಮಧ್ಯೆ ಮಧ್ಯೆ ಪ್ರಶ್ನೆ ಮಾಡಿ ಎಲ್ಲಾ ವಿಚಾರಿಸಿಕೊಂಡು ಬೇಷ್ ಹೇಳಿದರು. ನಮ್ಮ ಊರು ಹಿಂದೂಪುರದ ಹತ್ತಿರ ಅಂದಾಗ ಅವರ ಮುಖ ಅರಳಿತು. ಅವರು ಸ್ವತಂತ್ರ ಹೋರಾಟದ ಸಮಯದಲ್ಲಿ ಕರ್ನಾಟಕದಲ್ಲಿ ಅವರ ಪತ್ರಿಕೆ ತಡೆದದ್ದರಿಂದ ಹಿಂದೂಪುರಕ್ಕೆ ಹೋಗಿ ಆಂಧ್ರದಿಂದ ಪತ್ರಿಕೆ ತಂದ ಸಾಹಸಗಳ ಬಗ್ಗೆ ಹೇಳಿದರು. ಅಲ್ಲಿ ಸಹಾಯ ಮಾಡಿದ ಗೆಳೆಯರನ್ನು ನೆನೆದರು.

ಆರೋಗ್ಯ ಕೈ ಕೊಟ್ಟಿದ್ದಕ್ಕಾಗಿ ತುಂಬಾ ನೊಂದಿದ್ದರು. ನಾನು ವಾಪಸ್ಸು ಆಸ್ಪತ್ರೆಯಿಂದ ಬರೋ ದಿನಕ್ಕಿಂತ ಮುಂಚಿನ ರಾತ್ರಿ ಕೆಮ್ಮು ಏನು ಇಲ್ಲದೆ ಚನ್ನಾಗಿ ನಿದ್ದೆ ಮಾಡಿದ್ದರು. ನನಗೆ ನೀನು ಮೊದಲು ಹೋಗಿ ರೆಸ್ಟ್ ಮಾಡು ಅಂದರು. ಎಲ್ಲಾ ಯುವ ಜನರು ಮೊದಲು ಆರೋಗ್ಯ ಚೆನ್ನಾಗಿ ನೋಡಿಕೊಳ್ಳಬೇಕು. ಇಡೀ ದೇಶಕ್ಕೆ ಬಂದಿರೋದು ನನಗೂ ಬಂದಿದೆ (ಕೊರೊನಾ), ಇದನ್ನ ಗೆಲ್ಲಬೇಕಾದರೆ ಎಲ್ಲರೂ ಧೈರ್ಯ ಮತ್ತು ಪ್ರೀತಿಯಿಂದ ಜನರ ಬಳಿ ಹೋಗಬೇಕು. ಆಗ ಮಾತ್ರ ಗೆಲ್ಲೋಕೆ ಆಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ; ಜೇಬಲ್ಲೇ ಪರಿಹಾರ ಇಟ್ಟುಕೊಳ್ಳುತ್ತಿದ್ದ ಎನರ್ಜಿ ಬೂಸ್ಟರ್

ಅಂದಿನ ರಾತ್ರಿ ಸಿರಿಮನೆ ನಾಗರಾಜ್ ಅವರಿಗೆ ಕಾಲ್ ಮಾಡಿ ಹೆದರಬೇಡಿ ಅಂತ ಹೇಳಿದರು. ನೀವು ಅಷ್ಟು ಧೈರ್ಯಕೊಟ್ಟರೆ ಸಾಕು ಅಂತ ಸಿರಿಮನೆ ಕುಣಿದಾಡೋ ರೀತಿ ಮಾತಾಡಿದ್ದರು. ಬೆಳಿಗ್ಗೆ ನಾನು ಅಲ್ಲಿಂದ ಹೊರಡತೀನಿ ಎಂದು ಹೇಳಿದಾಗ ಮತ್ತೆ ಕಾಲ್ ಮಾಡಪ್ಪ ಮರಿಬೇಡ ದಿನಾ ಕಾಲ್ ಮಾಡು ಅಂತ ಹೇಳಿದರು.

ಅಭಿನಂದನ್‌, ಗಜೇಂದ್ರ (ಈ ಮುಂಚೆ ತಾತಾನನ್ನ ನೋಡಿಕೊಳ್ಳತ್ತಿದ್ದ ಇಬ್ಬರಿಗೂ ಆರೋಗ್ಯ ಕೆಟ್ಟಿತ್ತು) ಇಬ್ಬರಿಗೂ ಕಾಲ್‌ ಮಾಡೋಕೆ ಹೇಳು ಅವರಿಗೆ ಆರೋಗ್ಯ ನೋಡಿಕೊಳ್ಳೋಕೆ ಹೇಳು ಎಂದು ಹೇಳಿದರು.

ಪ್ರತಿ ದಿನ ರವಿಕೃಷ್ಣ ರೆಡ್ಡಿಯವರು ದೊರೆಸ್ವಾಮಿಯವರನ್ನು ಮಾತಾಡಿಸುತ್ತಿದ್ದು ಅವರಿಗೆ ತುಂಬಾ ರಿಲ್ಯಾಕ್ಸ್ ಕೊಡುತ್ತಿತ್ತು. ರವಿಕೃಷ್ಣ ರೆಡ್ಡಿಯವರಂತು ತುಂಬಾ ಕರ್ತವ್ಯ ಪ್ರಜ್ಞೆ, ತಾತನ ಮೇಲಿನ ಪ್ರೀತಿ, ಗೌರವಗಳನ್ನು ತುಂಬಾ ಗ್ರೇಟ್‌ಪುಲ್ ಆಗಿ ಅರ್ಪಿಸಿದರು. ತುಂಬಾ ಜನಕ್ಕೆ ಕಾಲ್ ಮಾಡೋಕೆ ಹೇಳಿ ಮಾತಾಡುತ್ತಿದ್ದರು. ಎಲ್ಲಾ ಪ್ರಗತಿಪರ ಹಿರಿಕಿರಿಯರನ್ನು ನೆನೆಸಿಕೊಳ್ಳುತ್ತಿದ್ದರು. ನಾನು ತುಂಬಾ ಒಳ್ಳೆಯ ಜನರ ಸಹವಾಸ ಮಾಡಿದೆ ಅದೇ ನನಗೆ ದೊಡ್ಡ ಸಾರ್ಥಕ ಎಂದು ಪದೇ ಪದೇ ಹೇಳುತ್ತಿದ್ದರು.

ಹಿಂದೂ ಪತ್ರಿಕೆಯ ಆದಿತ್ಯ ಅವರಿಗೆ ಕಾಲ್ ಮಾಡಿಸಿ ನನಗೆ ಪ್ರತಿದಿನ ಪತ್ರಿಕೆ ಬರೋ ವ್ಯವಸ್ಥೆ ಮಾಡಿಸಪ್ಪ ಎಂದಿದ್ದರು. ಅವರು ಪ್ರತಿದಿನ ಪತ್ರಿಕೆ ಸಿಗೋ ರೀತಿ ಮಾಡಿದ್ದರು.

ದೊರೆಸ್ವಾಮಿಯವರು ನಮ್ಮ ನಡುವೆ ದೈಹಿಕವಾಗಿ ಇಲ್ಲದಿರಬಹುದು ಆದರೆ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗುವ ಪ್ರಯತ್ನವೇ ಅವರನ್ನ ಜೀವಂತ ಇರಿಸಲಿದೆ.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....