Homeಮುಖಪುಟ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

- Advertisement -
- Advertisement -

‘ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ…’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅಸೂಕ್ಷ್ಮ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಬುಧವಾರ ರಾಜ್ಯಸಭೆಯಲ್ಲಿ ಉತ್ತರಿಸಿ ಇರಾನಿ, ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ಕಲ್ಪನೆಗೆ ವಿರೋಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ನಿರ್ದಿಷ್ಟ ಸಂಖ್ಯೆಯ ರಜೆ ನೀಡಲು ಕಂಪನಿಗಳಿಗೆ ಕಡ್ಡಾಯ ನಿಬಂಧನೆಗಳನ್ನು ವಿಧಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಝಾ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸ್ಮೃತಿ ಇರಾನಿ, ‘ಮುಟ್ಟಾಗದವರು ಮುಟ್ಟಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶವನ್ನು ನಿರಾಕರಿಸುವ ವಿಚಾರಗಳನ್ನು ನಾವು ಪ್ರಸ್ತಾಪಿಸಬಾರದು’ ಎಂದು ಹೇಳಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣವು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಮುಟ್ಟಿನ ನೈರ್ಮಲ್ಯ ನೀತಿ ಕರಡನ್ನು ರೂಪಿಸಿದೆ. ಕೇಂದ್ರವು ಈಗಾಗಲೇ 10-19 ವಯಸ್ಸಿನ ಹುಡುಗಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕೇಂದ್ರ ಸರ್ಕಾರದ ಬೆಂಬಲಿತವಾಗಿದ್ದು, ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ ಪ್ರಸ್ತಾವನೆಗಳನ್ನು ಸ್ವೀಕರಿಸಿ, ಆರೋಗ್ಯ ಮಿಷನ್ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ’ ಎಂದು ಇರಾನಿ ಹೇಳಿದರು.

‘ತಜ್ಞರೊಂದಿಗೆ ಸಮಾಲೋಚಿಸಿ ಆರೋಗ್ಯ ಸಚಿವಾಲಯವು ಮುಟ್ಟಿನ ನೈರ್ಮಲ್ಯ ನೀತಿ ಕರಡನ್ನು ರೂಪಿಸಿದೆ’ ಎಂದು ಹೇಳಿದ ಅವರು, ಋತುಚಕ್ರದ ನೈರ್ಮಲ್ಯವನ್ನು ಉತ್ತೇಜಿಸಲು ವಿವಿಧ ಸಚಿವಾಲಯಗಳು ಕೈಗೊಂಡ ಇತರ ಉಪಕ್ರಮಗಳನ್ನು ಸದನಕ್ಕೆ ವಿವರಿಸಿದರು.

ಸರ್ಕಾರಿ ಮಹಿಳಾ ನೌಕರರಿಗೆ ವಿಶೇಷ ಮುಟ್ಟಿನ ರಜೆಯ ವಿಷಯವು ಆರೋಗ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಆದ್ದರಿಂದ ವೇತನ ಸಹಿತ ರಜೆ ನೀಡುವ ಬಗ್ಗೆ ಪರಿಶೀಲಿಸಬಹುದು ಎಂದು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಸಚಿವಾಲಯ ಹೇಳಿದ ಈ ವಿಚಾರ ಚರ್ಚೆಗೆ ಇದು ಬಂದಿದೆ.

ಆರೋಗ್ಯ ಸಚಿವಾಲಯವು ಸೋಮವಾರ ಸಂಸತ್ತಿನಲ್ಲಿ ಮಂಡಿಸಿದ ವರದಿಯ ಪ್ರಕಾರ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ತನ್ನ ವರದಿಯಲ್ಲಿ ‘ಋತುಸ್ರಾವವು ಹೆಚ್ಚಿನ ಮಹಿಳೆಯರನ್ನು ದುರ್ಬಲಗೊಳಿಸುತ್ತದೆ. ಕೆಲಸದ ಸ್ಥಳದಲ್ಲಿ ಅವರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ’ ಎಂದು ಉಲ್ಲೇಖಿಸಿದೆ. ಯಾವುದೇ ವೈದ್ಯಕೀಯ ಪ್ರಮಾಣಪತ್ರ ಅಥವಾ ಸಮರ್ಥನೆಯನ್ನು ಪಡೆಯದೆ ಮಹಿಳೆಯರಿಗೆ ಮಾಸಿಕ ಅಥವಾ ವರ್ಷಕ್ಕೆ ಮಾಸಿಕ ರಜೆಗಳು, ಅನಾರೋಗ್ಯದ ರಜೆಗಳು ಹಾಗೂ ಅರ್ಧ ವೇತನದ ರಜೆಗಳನ್ನು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ; ಭದ್ರತಾ ಲೋಪದ ಬಳಿಕ ಸಂಸತ್‌ಗೆ ಸಂದರ್ಶಕರ ಭೇಟಿ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...