Homeಕರೋನಾ ತಲ್ಲಣಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ

- Advertisement -
- Advertisement -

ಜ್ವರದೊಂದಿಗೆ ತೀವ್ರವಾದ ಮಾನಸಿಕ ಗೊಂದಲದ ಸ್ಥಿತಿಯ ಸನ್ನಿವೇಶವು ಕೊರೊನಾದ ಆರಂಭಿಕ ಲಕ್ಷಣವಾಗಿರಬಹುದು ಎಂದು ಹೊಸ ಸಂಶೋಧನೆಗಳ ಫಲಿತಾಂಶಗಳು ತೋರಿಸಿಕೊಟ್ಟಿವೆ.

ಡೆಲಿರಿಯಮ್ ಮೆದುಳಿನಲ್ಲಿ ಹಠಾತ್ ಬದಲಾವಣೆಯಾಗಿ, ಅದು ಮಾನಸಿಕ ಗೊಂದಲ ಮತ್ತು ಭಾವನಾತ್ಮಕತೆಗೆ ಅಡ್ಡಿ ಉಂಟುಮಾಡುತ್ತದೆ. ಇದರಿಂದ ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಜರ್ನಲ್ ಆಫ್ ಕ್ಲಿನಿಕಲ್ ಇಮ್ಯುನೊಲಾಜಿ ಮತ್ತು ಇಮ್ಯುನೊಥೆರಪಿಯಲ್ಲಿ ಪ್ರಕಟವಾದ ಈ ಅಧ್ಯಯನದ ವರದಿಯು, ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುವದಕ್ಕಿಂತ ಮುಂಚಿನ ದಿನಗಳಲ್ಲಿ ಉಂಟಾಗುವ ರುಚಿ, ವಾಸನೆ ಹಾಗೂ ತಲೆನೋವಿನೊಂದಿಗೆ ಇಂತಹ ಸನ್ನಿವೇಶಗಳನ್ನು ಎದುರಿಸಿರುತ್ತಾರೆ ಎಂದು ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ಬಂಧನ ಯಾಕಿಲ್ಲ?- ರಾಜ್ಯವನ್ನು ತರಾಟೆ ಪಡೆದ ಹೈಕೋರ್ಟ್

“ಹೆಚ್ಚಿನ ಜ್ವರದಿಂದ ಬಳಲುತ್ತಿರುವಾಗ, ವಿಶೇಷವಾಗಿ ವಯಸ್ಸಾದ ರೋಗಿಗಳ ವಿಷಯದಲ್ಲಿ ಈ ರೀತಿಯ ಗೊಂದಲದ ಅಭಿವ್ಯಕ್ತಿಯನ್ನು ರೋಗದ ಆರಂಭಿಕ ಗುರುತು ಎಂದು ಪರಿಗಣಿಸಬೇಕು. ವಿಶೇಷವಾಗಿ ಈ ರೀತಿಯ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಾವು ಜಾಗರೂಕರಾಗಿರಬೇಕು. ಏಕೆಂದರೆ ಒಬ್ಬ ವ್ಯಕ್ತಿಯು ಕೆಲವು ಗೊಂದಲಗಳ ಚಿಹ್ನೆಗಳನ್ನು ಪ್ರಸ್ತುತಪಡಿಸುವುದರಿಂದ ಅವು ಸೋಂಕಿನ ಸೂಚನೆಯಾಗಿರಬಹುದು” ಎಂದು ಯೂನಿವರ್ಸಿಟಾಟ್ ಒಬೆರ್ಟಾ ಡಿ ಕ್ಯಾಟಲುನ್ಯಾ (ಯುಒಸಿ) ಅಧ್ಯಯನ ಸಂಶೋಧಕ ಜೇವಿಯರ್ ಕೊರಿಯಾ ಹೇಳಿದ್ದಾರೆ.

ಸಂಶೋಧನಾ ತಂಡವು ಕೇಂದ್ರ ನರಮಂಡಲಕ್ಕೆ ಸಂಬಂಧಿಸಿದಂತೆ ಕೊರೊನಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ.

ಚೀನಾದಲ್ಲಿ ನ್ಯುಮೋನಿಯಾದ ಮೊದಲ ಪ್ರಕರಣಗಳು ಶ್ವಾಸಕೋಶ ಮತ್ತು ಮೂತ್ರಪಿಂಡಗಳು ಹಾಗೂ ಹೃದಯದಂತಹ ಇತರ ಅಂಗಗಳಿಗೆ ಉಂಟಾಗುವ ಹಾನಿಯ ಮೇಲೆ ಕೇಂದ್ರೀಕರಿಸಿದರೂ, ಕೊರೊನಾ ವೈರಸ್ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಎಂಬ ಸೂಚನೆಗಳು ಹೆಚ್ಚುತ್ತಿವೆ ಎಂದು ಕಂಡುಹಿಡಿಯಲಾಗಿದೆ.


ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...